ಡಾ| ಸರೋಜಿನಿ ಮಹಿಷಿ ವರದಿ ಜಾರಿಗೆ ಒತ್ತಾಯಿಸಿ ಮನವಿ
Team Udayavani, May 22, 2020, 12:26 PM IST
ಬಳ್ಳಾರಿ: ಕರ್ನಾಟಕ ಜನಸೈನ್ಯ ಸಂಘಟನೆಯಿಂದ ಡಾ| ಸರೋಜಿನಿ ಮಹಿಷಿ ವರದಿ ಜಾರಿಗೊಳಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.
ಬಳ್ಳಾರಿ: ಡಾ| ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ಜನಸೈನ್ಯ ಸಂಘಟನೆಯ ಪದಾಧಿಕಾರಿಗಳು ಜಿಲ್ಲಾಡಳಿತದ ಮೂಲಕ ಸಿಎಂ ಯಡಿಯೂರಪ್ಪ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.
ದೇಶದಲ್ಲಿ ಕೈಗಾರಿಕಾ ಅಭಿವೃದ್ಧಿ ಆರಂಭವಾದಾಗನಿಂದ ಇಲ್ಲಿವರೆಗೆ ಸ್ಥಳೀಯರಿಗೆ ಕಾರ್ಖಾನೆಗಳಲ್ಲಿ ಹೆಚ್ಚಿನ ಉದ್ಯೋಗಗಳು ದೊರೆಯುತಿಲ್ಲ. ಈ ಕುರಿತು ಸಾಕಷ್ಟು ಹೋರಾಟಗಳು ನಡೆಸಿದರೂ ಆಳುವ ಸರ್ಕಾರಗಳಿಂದ ಯಾವುದೇ ಪ್ರಯೋಜನವಾಗಿಲ್ಲ. ರಾಜ್ಯದ ಬಳ್ಳಾರಿ, ಕೊಪ್ಪಳದಲ್ಲಿ ಜಿಂದಾಲ್, ಕಲ್ಯಾಣಿ, ಕಿರ್ಲ್ಕೋಸ್ಕರ್, ಹೊಸಪೇಟೆ ಸ್ಟೀಲ್ಸ್, ಎಸಿಸಿ, ಕೆಪಿಆರ್ ಕಾರ್ಖಾನೆಗಳಲ್ಲಿ ಕನ್ನಡಗರಿಗೆ ಅವಕಾಶಗಳೇ ಸಿಗುತ್ತಿಲ್ಲ. ಈ ಕುರಿತು ಸರ್ಕಾರದ ಗಮನಸೆಳೆದರೂ ಇಲ್ಲಿವರೆಗೆ ಕ್ರಮವಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದರು.
ಸರೋಜಿನಿ ಮಹಿಷಿ ವರದಿ ಪ್ರಕಾರ ಇಂತಹ ಕೋವಿಡ್ ವಿಪತ್ತಿನ ಸಂದರ್ಭದಲ್ಲಿ ಸ್ಥಳೀಯ ಅಥವಾ ಕನ್ನಡಿಗ ನಿರುದ್ಯೋಗ ಯುವಕರಿಗೆ ಕೆಲಸ ನೀಡಿದರೆ ಕಾರ್ಖಾನೆಗಳು ಎದುರಿಸುತ್ತಿರುವ ಸಮಸ್ಯೆಗಳಿಗೂ ಪರಿಹಾರ ಸಿಗಲಿದೆ, ಇದರ ಜೊತೆಗೆ ನಿರುದ್ಯೋಗ ಸಮಸ್ಯೆ ಕೂಡ ನಿವಾರಣೆ ಆಗಲಿದೆ ಎಂದರು. ಈ ಸಂದರ್ಭದಲ್ಲಿ ಕರ್ನಾಟಕ ಜನಸೈನ್ಯದ ರಾಜ್ಯ ಉಪಾಧ್ಯಕ್ಷ ಬಿ.ಹೊನ್ನೂರಪ್ಪ, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಹೊನ್ನೂರು ಸ್ವಾಮಿ, ಸಲಹಾ ಸಮಿತಿ ಸದಸ್ಯರಾದ ಚೆಂಚಯ್ಯ, ರಾಜ್ಯ ಸಂಘಟನಾ ಕಾರ್ಯದರ್ಶಿ ಪಿ.ಗುರುರಾಘವೇಂದ್ರ, ಸ್ಫೂರ್ತಿ ಸೈನ್ಯದ ಜಿಲ್ಲಾಧ್ಯಕ್ಷ ಲಕ್ಷ್ಮೀ ನಾರಾಯಣ ಶೆಟ್ಟಿ, ಉತ್ತರ ಕರ್ನಾಟಕ ಉಪಾಧ್ಯಕ್ಷ ಫಯಾಜ್ಬಾಷ, ನಾಸೀರ್, ಚಿಟ್ಟಿ, ಲೋಕೇಶ್ ಯಾದವ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary: ದರ್ಶನ್ ಭೇಟಿಗೆ ಬಂದ ವಿಜಯಲಕ್ಷ್ಮಿ-ದಿನಕರ್: ಪ್ರಸಾದ,ಡ್ರೈಫ್ರೂಟ್ಸ್ ತಂದ ಪತ್ನಿ
Valmiki scam; ತುಕಾರಾಮ್ ಗೆಲುವನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಶ್ರೀರಾಮುಲು ದಾವೆ
Renukaswamy Case ಚಾರ್ಜ್ಶೀಟ್ನಲ್ಲಿ ಸಾಕ್ಷಿಗಳ ಹೇಳಿಕೆ ಕೇಳಿ ದಂಗಾದ ದರ್ಶನ್
Bellary: ಬಳ್ಳಾರಿ ಜೈಲಿಗೆ ಬಂದ ಶಿಗ್ಲಿ ಬಸ್ಯಾ; ದರ್ಶನ್ ಪರ ವಾದ ಮಾಡಲು ಸಿದ್ದ ಎಂದ ಬಸ್ಯಾ
Renukaswamy Case: ದರ್ಶನ್ ಕಸ್ಟಡಿ ಅಂತ್ಯ; ವಿಡಿಯೋ ಕಾನ್ಪರೆನ್ಸ್ ಮೂಲಕ ಕೋರ್ಟ್ ಗೆ ಹಾಜರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.