ಕೋವಿಡ್ ನಿಧಿಗೆ ವೇತನ ನೀಡಿದ ಸಚಿವ
Team Udayavani, May 23, 2020, 5:51 AM IST
ಬೀದರ: ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ತಾವು ಈ ಹಿಂದೆ ತಿಳಿಸಿದಂತೆ ತಮ್ಮ 3 ತಿಂಗಳ ವೇತನವನ್ನು ಕೋವಿಡ್-19 ಪರಿಹಾರ ನಿಧಿಗೆ ನೀಡಿದ್ದಾರೆ.
ಶುಕ್ರವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಯಡಿಯೂರಪ್ಪನವರಿಗೆ ಭೇಟಿ ಮಾಡಿ, ತಮ್ಮ ವೇತನದ 4,22,730 ರೂ.ಚೆಕ್ ಸಲ್ಲಿಸಿದರು. ಇದೇ ವೇಳೆ ಸಚಿವರು, ಬೀದರ ಪಶು ವೈದ್ಯಕೀಯ ವಿಶ್ವವಿದ್ಯಾಲಯದ ಎಲ್ಲ ಸಿಬ್ಬಂದಿ ಒಂದು ದಿನದ ಸಂಬಳದ 23,46,340 ರೂ. ಚೆಕ್ ಕೂಡ ಸಿಎಂ ಪರಿಹಾರ ನಿಧಿಗೆ ನೀಡಿದರು.
ಸಿಬ್ಬಂದಿಗೆ ಅಭಿನಂದನೆ: ಕೋವಿಡ್ -19 ಹಿನ್ನೆಲೆಯಲ್ಲಿ ಜನತೆಗೆ ಸಹಾಯವಾಗಲೆಂದು ಒಂದು ದಿನದ ಸಂಬಳ ನೀಡಿದ ಬೀದರ್ ಪಶು ವೈದ್ಯಕೀಯ ವಿವಿಯ ಎಲ್ಲ ಸಿಬ್ಬಂದಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.
ಕಷ್ಟದಲ್ಲಿದ್ದವರಿಗೆ ಸಹಾಯ: ಕೋವಿಡ್-19 ಸಂಕಷ್ಟದಿಂದ ಭಾರತ ನಲುಗಿ ಹೋಗಿದೆ. ದೇಶ ಹಾಗೂ ಜನರು ಹಲವಾರು ಸಮಸ್ಯೆ ಎದುರಿಸುತ್ತಿದ್ದಾರೆ. ಆರ್ಥಿಕವಾಗಿಯೂ ಲಾಕ್ ಡೌನ್ನಿಂದ ಹೊಡೆತ ಬಿದ್ದಿದೆ. ನನ್ನ ಮತಕ್ಷೇತ್ರದಲ್ಲಿ ಕಷ್ಟದಲ್ಲಿದ್ದವರಿಗೆ ತಾವು ಕೂಡ ಜನರಿಗೆ ಆಹಾರದ ವ್ಯವಸ್ಥೆ ಮಾಡಿ ಸಹಾಯ ಮಾಡಿದ್ದಾಗಿ ಸಚಿವ ಚವ್ಹಾಣ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.