ಸೋನಿಯಾ ವಿರುದ್ಧ ಕೇಸ್ ದ್ವೇಷದ ರಾಜಕೀಯ: ಐವನ್
Team Udayavani, May 23, 2020, 8:40 AM IST
ಮಂಗಳೂರು: ಪಿಎಂ ಕೇರ್ ನಿಧಿಯ ಬಗ್ಗೆ ದೇಶದ ಜನರಿಗೆ ಮಾಹಿತಿ ಕೊಡಿ ಎಂದು ಕೇಳಿದ ಕಾರಣಕ್ಕೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಮೇಲೆ ಎಫ್ಐಆರ್ ದಾಖಲಿಸಿರುವುದು ಖಂಡನೀಯ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಪ್ರಶ್ನಿಸುವವರ ಹಕ್ಕನ್ನು ಕಸಿಯುವ ಇಂತಹ ಘಟನೆ ದ್ವೇಷದ ರಾಜಕಾರಣಕ್ಕೆ ಸಾಕ್ಷಿ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿ’ಸೋಜಾ ಹೇಳಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಿಎಂ ಕೇರ್ನ ಹಣ ಎಷ್ಟಿದೆ, ಹಣ ಹೇಗೆ ವಿನಿಯೋಗ ಮಾಡಲಾಗಿದೆ ಎಂಬುದನ್ನು ಕೇಳುವುದೇ ತಪ್ಪಾ? ಯಾರಿಗೆ ಯಾಕಾಗಿ ಬಳಕೆ ಆಗಿದೆ ಎಂಬುದರ ವಿವರ ಕೊಡಲು ಏನು ಸಮಸ್ಯೆಯಿದೆ? ಪ್ರಧಾನಿಯನ್ನು ಈ ಬಗ್ಗೆ ಪ್ರಶ್ನಿಸಿದರೆ ದೇಶವಿರೋಧಿ ರೀತಿಯಲ್ಲಿ ಬಿಂಬಿಸುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಮಾತನ್ನೇ ದಮನ ಮಾಡುವುದಕ್ಕೆ ಕಾಂಗ್ರೆಸ್ ಅವಕಾಶ ನೀಡುವುದಿಲ್ಲ. ಇದರ ವಿರುದ್ಧ ನಿರಂತರ ಹೋರಾಟಕ್ಕೆ ಸಿದ್ಧತೆ ನಡೆಸಲಾಗಿದೆ. ತತ್ಕ್ಷಣವೇ ಕೇಸ್ ಅನ್ನು ವಾಪಸ್ ಪಡೆಯಬೇಕು ಮತ್ತು ಕೇಸ್ ರಿಜಿಸ್ಟರ್ ಮಾಡಿದ ಪೊಲೀಸ್ ಅಧಿಕಾರಿಯ ಮೇಲೆ ತನಿಖೆಯಾಗಬೇಕು ಎಂದವರು ಆಗ್ರಹಿಸಿದರು.
ಬಸ್ನವರ ಸಮಸ್ಯೆಗೆ ಸ್ಪಂದಿಸದ ಸರಕಾರ
ರಾಜ್ಯ ಸರಕಾರ ಖಾಸಗಿ ಬಸ್ಗಳ ಸಂಚಾರಕ್ಕೆ ಅವಕಾಶ ನೀಡಿದ್ದರೂ ದ.ಕ. ಜಿಲ್ಲೆಯಲ್ಲಿ ಖಾಸಗಿ ಬಸ್ ಆರಂಭವಾಗಿಲ್ಲ. ಬಸ್ ಮಾಲಕರ ಬೇಡಿಕೆಯನ್ನು ಪೂರೈಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾ ಗಿದೆ. ಬಸ್ಗಳನ್ನೇ ನಂಬಿರುವ ಸಾವಿರಾರು ಜನರು ಸಂಕಷ್ಟದಲ್ಲಿದ್ದಾರೆ. ಅವರಿಗೆ ಪ್ಯಾಕೇಜ್ ಕೂಡ ನೀಡಿಲ್ಲ. ರಿಕ್ಷಾ ಚಾಲಕರ ಪ್ಯಾಕೇಜ್ ಘೋಷಿಸಿದ್ದರೂ ಸರಕಾರ ಸ್ಪಷ್ಟತೆ ನೀಡಿಲ್ಲ. ಬೀಡಿ ಕಾರ್ಮಿಕರನ್ನು ಸರಕಾರ ಕೈಬಿಟ್ಟಿದೆ ಎಂದು ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Surathkal: ಕಾಟಿಪಳ್ಳ ಮಸೀದಿಗೆ ಕಲ್ಲು: 6 ಮಂದಿ ಸೆರೆ
Surathkal: ಬೈಕ್ ನಲ್ಲಿ ಬಂದು ಮಸೀದಿಗೆ ಕಲ್ಲು ಬಿಸಾಡಿದ ಕಿಡಿಗೇಡಿಗಳು… ಪ್ರಕರಣ ದಾಖಲು
Democracy Day: ದಕ್ಷಿಣ ಕನ್ನಡ: 130 ಕಿ.ಮೀ. ವ್ಯಾಪ್ತಿಯಲ್ಲಿ 84,200 ಮಂದಿ
Rohan City Bejai: ವಾಣಿಜ್ಯ ಮಳಿಗೆಗಳಲ್ಲಿ ಹೂಡಿಕೆಗೆ ಖಚಿತ ಪ್ರತಿಫಲ ಕೊಡುಗೆ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್ಐಎಗೆ ವಹಿಸಲಿ: ಶಾಸಕ ಸುನಿಲ್ ಕುಮಾರ್
Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ
Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್ ಸಿಸ್ಟಮ್
Eid: ಈದ್ ಮಿಲಾದ್ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ
Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್ ಮಿಲಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.