ಗದಗ ಕಂಟೈನ್‌ಮೆಂಟ್‌ ಕಂಟಕ: ಒಂದೇ ದಿನ 15 ಜನರಿಗೆ ಕೋವಿಡ್

ಗಂಜಿ ಬಸವೇಶ್ವರ ವೃತ್ತದ 9 ಜನ-ಅನ್ಯ ರಾಜ್ಯದಿಂದ ಮರಳಿದ 6 ಜನರಿಗೆ ಸೋಂಕು

Team Udayavani, May 24, 2020, 8:33 AM IST

ಗದಗ ಕಂಟೈನ್‌ಮೆಂಟ್‌ ಕಂಟಕ: ಒಂದೇ ದಿನ 15 ಜನರಿಗೆ ಕೋವಿಡ್

ಸಾಂದರ್ಭಿಕ ಚಿತ್ರ

ಗದಗ: ಜಿಲ್ಲೆಯ ಮಟ್ಟಿಗೆ ನಗರದ ಒಕ್ಕಲಗೇರಿ ಗಂಜಿ ಬಸವೇಶ್ವರ ಸರ್ಕಲ್‌ ಭಾಗದ ಕಂಟೈನ್ಮೆಂಟ್‌ ಪ್ರದೇಶವೇ ಕಂಟಕವಾಗಿ ಪರಿಣಮಿಸುತ್ತಿದೆ. ಈ ಪ್ರದೇಶದ ಪಿ.913 ಸೋಂಕಿತ ವ್ಯಕ್ತಿಯ ಸಂಪರ್ಕದಲ್ಲಿದ್ದ 9 ಜನರಿಗೆ ಹಾಗೂ ಇತರೆ ರಾಜ್ಯಗಳಿಂದ ಜಿಲ್ಲೆಗೆ ಮರಳಿದ ವಲಸಿಗರಲ್ಲಿ 6 ಮಂದಿ ಸೇರಿದಂತೆ ಶನಿವಾರ ಒಂದೇ ದಿನ 15 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿಸಿದೆ.

ಗದಗ-ಬೆಟಗೇರಿ ನಗರಸಭೆ ವ್ಯಾಪ್ತಿಯ ಗಂಜಿ ಬಸವೇಶ್ವರ ವೃತ್ತದ ನಿರ್ಬಂಧಿ ತ ಪ್ರದೇಶದಲ್ಲಿ ಸೋಂಕು ದೃಢಪಟ್ಟ ಪಿ-913 ಸಂಪರ್ಕದಿಂದಾಗಿ 15 ವರ್ಷದ ಯುವಕ (ಪಿ-1794), 17 ವರ್ಷದ ಯುವಕ (ಪಿ-1795), 50 ವರ್ಷದ ಮಹಿಳೆ (ಪಿ-1932), 20 ವರ್ಷದ ಮಹಿಳೆ (ಪಿ-1933), 22 ವರ್ಷದ ಮಹಿಳೆ (ಪಿ-1934), 18 ವರ್ಷದ ಯುವಕ (ಪಿ-1935), 18 ವರ್ಷದ ಯುವತಿ (ಪಿ-1936), 8 ವರ್ಷದ ಹೆಣ್ಣು ಮಗು (ಪಿ-1937), 21 ವರ್ಷದ ವ್ಯಕ್ತಿ (ಪಿ-1938)
ಸೇರಿದಂತೆ 9 ಜನರಿಗೆ ಸೋಂಕು ದೃಢಪಟ್ಟಿದೆ. ಇನ್ನು ಗುಜರಾತ್‌ನಿಂದ ಹಿಂದಿರುಗಿದ 25 ವರ್ಷದ ವ್ಯಕ್ತಿ (ಪಿ-1744), 17 ವರ್ಷದ ಯುವಕ (ಪಿ-1745) ಮತ್ತು ಮಹಾರಾಷ್ಟ್ರದಿಂದ ವಾಪಸಾದ 7 ವರ್ಷದ ಬಾಲಕಿ (ಪಿ-1746), 20 ವರ್ಷದ ಪುರುಷ (ಪಿ-1747), 50 ವರ್ಷದ ಮಹಿಳೆ (ಪಿ-1748) ಮತ್ತು ರಾಜಸ್ಥಾನದಿಂದ ಹಿಂದಿರುಗಿದ 17 ವರ್ಷದ ಯುವತಿ (ಪಿ-1763) ಸೇರಿ ಒಟ್ಟು 15 ಕೋವಿಡ್‌-19 ಸೋಂಕು ದೃಢಪಟ್ಟಿವೆ. ಸೋಂಕಿತರನ್ನು ಇಲ್ಲಿನ ಕೋವಿಡ್‌ ಆಸ್ಪತ್ರೆಗೆ
ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಸೋಂಕಿತರ ಪ್ರಯಾಣದ ವಿವರ: ಮೇ 18ರಂದು ಗುಜರಾತದ ಅಹಮದಾಬಾದನಿಂದ ಎರಡು ವಾಹನಗಳಲ್ಲಿ 17 ಜನ ಜಿಲ್ಲೆಗೆ ಆಗಮಿಸಿದ್ದರು. ಈ ಪೈಕಿ ಪಿ-1744 ಹಾಗೂ ಪಿ-1745 ಸೋಂಕು ದೃಢಪಟ1ಟಿದೆ. ಇವರೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿರುವ 15 ಜನರನ್ನು ನಿಗಾದಲ್ಲಿರಿಸಲಾಗಿದೆ. ಅದರಂತೆ ಮಹಾರಾಷ್ಟ್ರದಿಂದ ನಿಪ್ಪಾಣಿವರೆಗೆ ಬಾಡಿಗೆ ವಾಹನದಲ್ಲಿ, ನಿಪ್ಪಾಣಿಯಿಂದ ಗದುಗಿಗೆ ಲಾರಿ ಮೂಲಕ ಆಗಮಿಸಿರುವ ನಾಲ್ವರಲ್ಲಿ ಮೂರು (ಪಿ-1746, ಪಿ-1747,
ಪಿ-1748) ಜನರಿಗೆ ಸೋಂಕು ಖಚಿತವಾಗಿದೆ. ಪ್ರಾಥಮಿಕ ಸಂಪರ್ಕಿತದಲ್ಲಿರುವ ಒಬ್ಬರನ್ನು ನಿಗಾದಲ್ಲಿರಿಸಲಾಗಿದೆ.

ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ 4 ಕುಟುಂಬಗಳ ಒಟ್ಟು 17 ಜನರು ಮೇ 18ರಂದು ರಾಜಸ್ಥಾನದ ಅಜ್ಮಿರ ಧಾರ್ಮಿಕ ಕ್ಷೇತ್ರಕ್ಕೆ ಭೇಟಿ ನೀಡಿದ್ದರು. ಲಾಕ್‌ ಡೌನ್‌ ಸಡಿಲಿಕೆಯಾದ ಬಳಿಕ ಜಿಲ್ಲೆಗೆ ಮರಳಿದ್ದು, ಆ ಪೈಕಿ ಯುವತಿಯೊಬ್ಬಳಿಗೆ (ಪಿ-1763) ಸೋಂಕು ದೃಢಪಟ್ಟಿದೆ. ಪ್ರಾಥಮಿಕ ಸಂಪರ್ಕಿತ 16, ದ್ವಿತೀಯ ಸಂಪರ್ಕಿತ 5 ಜನರನ್ನು ಕ್ವಾರಂಟೈನ್‌ ಮಾಡಲಾಗಿದೆ ಎಂದು ಅ ಧಿಕಾರಿಗಳು ತಿಳಿಸಿದ್ದಾರೆ.

ರೆಡ್‌ ಝೋನ್‌ನತ್ತ ಗದಗ ಹೆಜ್ಜೆ?
ಶನಿವಾರ ಪ್ರಕಟಗೊಂಡ ಕೋವಿಡ್‌-19 ವರದಿಯಲ್ಲಿ 15 ಸೇರಿದಂತೆ ಜಿಲ್ಲೆಯಲ್ಲಿ 29 ಸಕ್ರಿಯ ಪ್ರರಕಣಗಳಿದ್ದು, ಒಟ್ಟು ಸೋಂಕಿನ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಈ ಪೈಕಿ ಐವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇನ್ನುಳಿದಂತೆ ಓರ್ವ ವೃದ್ಧೆ (ಪಿ.166) ಮೃತಪಟ್ಟಿದ್ದಾರೆ. ಇನ್ನುಳಿದವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಂದು ಹಂತದಲ್ಲಿ ಶೂನ್ಯಕ್ಕೆ ಇಳಿದಿದ್ದ ಪ್ರಕರಣಗಳ ಸಂಖ್ಯೆ ಈಗ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜಿಲ್ಲೆಯು ರೆಡ್‌ ಝೋನ್‌ನತ್ತ ವಾಲುತ್ತಿದೆ.

ನಗರಕ್ಕೆ ಕಂಟೈನ್‌ಮೆಂಟ್‌ ಕಂಟಕ
ನಗರದ ಗಂಜಿ ಬಸವೇಶ್ವರ ವೃತ್ತದ ಪ್ರದೇಶದಲ್ಲಿ ಮೇಲಿಂದ ಮೇಲೆ ಪ್ರಕರಣಗಳು ದೃಢಪಡುತ್ತಿದ್ದು, ಅವಳಿ ನಗರದ ಪಾಲಿಗೆ ಇದು ಕಂಟಕವಾಗಿ ಪರಿಣಮಿಸಿದೆ. ಈ ಭಾಗದಲ್ಲಿ ಮೊದಲ ಪ್ರಕರಣ ಕಂಡು ಬರುತ್ತಿದ್ದಂತೆ ಹಂತ ಹಂತವಾಗಿ 118 ಜನರನ್ನು ಸರಕಾರಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇಡಲಾಗಿತ್ತು. ಈ ನಡುವೆ ಗಂಜಿ ಬಸವೇಶ್ವರ ಸರ್ಕ್‌ಲ್‌ ಪ್ರದೇಶದಲ್ಲಿ ಮೇ 14ರಂದು ಸೋಂಕಿಗೆ ಒಳಗಾಗಿದ್ದ 61 ವರ್ಷದ ವೃದ್ಧ (ಪಿ.913)ನ ಸಂಪರ್ಕದಲ್ಲಿದ್ದ ಸುಮಾರು 9 ಜನರಿಗೆ ಶನಿವಾರ
ಕೊರೊನಾ ದೃಢಪಟ್ಟಿದೆ.

ಟಾಪ್ ನ್ಯೂಸ್

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ:”ಭಾರತ ಉನ್ನತ ಸಂಸ್ಕೃತಿ ಹೊಂದಿದ ದೇಶ’

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

ನರಗುಂದ: ಹೆಸರು ಕಾಳು ಖರೀದಿಗೆ ಖಾಲಿ ಚೀಲ ಕೊರತೆ!

1-eq-weq

Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಹೆತ್ತ ತಾಯಿ, ಹೊತ್ತ ಭೂಮಿ ಸ್ವರ್ಗಕ್ಕಿಂತಲೂ ಮಿಗಿಲು- ಸಿದ್ಧಲಿಂಗಯ್ಯ

ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

Gadag; ಲಿಂ. ಡಾ. ತೋಂಟದ ಸಿದ್ಧಲಿಂಗ ಸ್ವಾಮೀಜಿ 6ನೇ ಪುಣ್ಯಸ್ಮರಣೆ; ಮರಣವೇ ಮಹಾನವಮಿ ಆಚರಣೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.