ಬೀದರ್: ಮತ್ತೆ 6 ಕೋವಿಡ್- 19 ಸೋಂಕು ಪ್ರಕರಣ ಪತ್ತೆ
Team Udayavani, May 24, 2020, 7:17 PM IST
ಸಾಂದರ್ಭಿಕ ಚಿತ್ರ.
ಬೀದರ್: ಗಡಿ ನಾಡು ಬೀದರ್ ಗೆ ಮಹಾರಾಷ್ಟ್ರದ ಕಂಟಕ ಬೆಂಬಿಡದೇ ಕಾಡುತ್ತಿದ್ದು, ರವಿವಾರ ಮತ್ತೆ ರಕ್ಕಸ ಕೋವಿಡ್ 19 ಸೋಂಕಿನ 6 ಪ್ರಕರಣಗಳು ವರದಿಯಾಗುವ ಮೂಲಕ ಜಿಲ್ಲೆಯಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ. ಎಲ್ಲ ಸೋಂಕಿತರು ಮಹಾರಾಷ್ಟ್ರದ ಸಂಪರ್ಕ ಹೊಂದಿದ್ದು, ಈವರೆಗೆ ಜಿಲ್ಲೆಯಲ್ಲಿ ಪಾಸಿಟಿವ್ ಸಂಖ್ಯೆ 85ಕ್ಕೆ ಏರಿಕೆಯಾಗಿದೆ.
ಪ್ರತಿ ದಿನ ಪಾಸಿಟಿವ್ ಸಂಖ್ಯೆ ಹೆಚ್ಚಿಸುವ ಮೂಲಕ ಕೋವಿಡ್ 19 ಜಿಲ್ಲೆಯಲ್ಲಿ ತಲ್ಲಣ ಮೂಡಿಸುತ್ತಿದೆ. ಆರಂಭದಲ್ಲಿ ತಬ್ಲೀಘಿಗಳ ನಂಟಿನಿಂದ ವೈರಾಸು ಬೀದರಗೆ ಒಕ್ಕರಿಸಿತ್ತು. ನಗರ ಪ್ರದೇಶಕ್ಕೆ ಮಾತ್ರ ಸೀಮಿತವಾಗಿದ್ದ ಸೋಂಕಿನ ಆರ್ಭಟ ಈಗ ಮಹಾರಾಷ್ಟ್ರದ ಕಂಟಕದಿಂದ ಹಳ್ಳಿ ಹಳ್ಳಿಗೆ ವ್ಯಾಪಿಸುತ್ತಿದೆ. ಮುಂಬೈ, ಸೊಲ್ಲಾಪುರ ಸೇರಿದಂತೆ ವಿವಿಧೆಡೆಯಿಂದ ಜಿಲ್ಲೆಯ ವಲಸಿಗರು ಆಗಮಿಸುತ್ತಿರುವುದು ಸೋಂಕಿತರ ಸಂಖ್ಯೆ ಹೆಚ್ಚಲು ಕಾರಣವಾಗುತ್ತಿದೆ.
ಹೊಸ ಸೋಂಕಿತರ 6 ಜನರಲ್ಲಿ ಮೂವರು 9 ವರ್ಷದೊಳಗಿನ ಮಕ್ಕಳು ಸೇರಿರುವುದು ಆಘಾತವನ್ನುಂಟು ಮಾಡಿದೆ. ಅದರಲ್ಲಿ 1.7 ವರ್ಷದ ಹೆಣ್ಣು ಮಗುವಿಗೂ ಸಹ ವೈರಸ್ ಒಕ್ಕರಿಸಿದೆ. ಬಸವಕಲ್ಯಾಣ ತಾಲೂಕಿನ ಧನ್ನೂರ(ಕೆ) ಗ್ರಾಮದ ಇಬ್ಬರು, ಉಜಳಂಬ ಗ್ರಾಮದ ಒಬ್ಬರು, ಹುಮನಾಬಾದ ತಾಲೂಕಿನ ಲಾಲಧರಿ ತಾಂಡಾದ ಇಬ್ಬರು ಮತ್ತು ಹಣಕುಣಿ ಗ್ರಾಮದ ಒಬ್ಬರಲ್ಲಿ ವೈರಸ್ ಪತ್ತೆಯಾಗಿದೆ.
54 ವರ್ಷದ ಪುರುಷ (ಪಿ 2059), 1.7 ವರ್ಷದ ಹೆಣ್ಣು ಮಗು (ಪಿ 2060), 7 ವರ್ಷದ ಬಾಲಕ (ಪಿ 2061), 9 ವರ್ಷದ ಬಾಲಕ (ಪಿ 2062), 25 ವರ್ಷದ ಯುವಕ (ಪಿ 2063)ಮತ್ತು 21 ವರ್ಷದ ಯುವಕ (ಪಿ 2064)ನಲ್ಲಿ ಸೋಂಕು ಪತ್ತೆಯಾಗಿದೆ ಎಂದು ಆರೋಗ್ಯ ಇಲಾಖೆಯ ಸಂಜೆಯ ಹೇಲ್ತ್ ಬುಲೇಟಿನ್ ದೃಢಪಡಿಸಿದೆ.
ಜಿಲ್ಲೆಯಲ್ಲಿ ಈಗ ಸೋಂಕಿತರ ಸಂಖ್ಯೆ 85 ಕ್ಕೆ ಏರಿಕೆ ಆಗಿದೆ. ಅದರಲ್ಲಿ 2 ಮೃತಪಟ್ಟರೆ, 21 ಜನ ಚಿಕಿತ್ಸೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಇನ್ನೂ 62 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ
PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ
Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ
Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.