![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 24, 2020, 10:20 PM IST
ಹೊಸದಿಲ್ಲಿ: ಭಾರತದ ಪೇಸ್ ಬೌಲರ್ ಶಾರ್ದೂಲ್ ಠಾಕೂರ್ ಶನಿವಾರ ಹೊರಾಂಗಣ ಅಭ್ಯಾಸ ನಡೆಸಿದ್ದಕ್ಕೆ ಬಿಸಿಸಿಐ ಅಸಮಾಧಾನ ವ್ಯಕ್ತಪಡಿಸಿದೆ. ಈ ಸಂದರ್ಭದಲ್ಲಿ ಅವರು ಮಂಡಳಿಯ ಅನುಮತಿಯನ್ನು ಕೇಳಿರಲಿಲ್ಲ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
“ಶಾರ್ದೂಲ್ ಠಾಕೂರ್ ಮಂಡಳಿಯ ಗುತ್ತಿಗೆ ಒಪ್ಪಂದದ ವ್ಯಾಪ್ತಿಯಲ್ಲಿರುವ ಆಟಗಾರ. ಅಭ್ಯಾಸಕ್ಕೆ ಇಳಿಯುವಾಗ ಅವರು ಮಂಡಳಿ ಅನುಮತಿಯನ್ನು ಪಡೆಯಬೇಕಿತ್ತು. ಇದೊಂದು ತಪ್ಪು ಹೆಜ್ಜೆ’ ಎಂಬುದಾಗಿ ಬಿಸಿಸಿಐ ಅಧಿಕಾರಿ ಅಭಿಪ್ರಾಯ.
ಮುಂಬಯಿಯಲ್ಲಿ ಕೋವಿಡ್- 19 ಗಂಭೀರ ಹಂತವನ್ನು ಮುಟ್ಟಿದ್ದು, ಇಲ್ಲಿಯೇ ಇರುವ ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರೋಹಿತ್ ಶರ್ಮ ಮೊದಲಾದವರು ಇನ್ನೂ ಮನೆಯಿಂದ ಹೊರಗೆ ಬಂದಿಲ್ಲ.
ಶಾರ್ದೂಲ್ ಠಾಕೂರ್ ಶನಿವಾರ ಮುಂಬಯಿಯಿಂದ 110 ಕಿ.ಮೀ. ದೂರದಲ್ಲಿರುವ ಪಾಲ್ಘರ್ ಜಿಲ್ಲೆಯ ಬೋಯಿಸರ್ ಕ್ರೀಡಾಂಗಣದಲ್ಲಿ ಕೆಲವು ಸ್ಥಳೀಯ ಕ್ರಿಕೆಟಿಗರೊಂದಿಗೆ ಬೌಲಿಂಗ್ ಅಭ್ಯಾಸಕ್ಕಿಳಿದಿದ್ದರು. ಕೋವಿಡ್ 19 ಲಾಕ್ಡೌನ್ ಬಳಿಕ ಹೊರಾಂಗಣದಲ್ಲಿ ಅಭ್ಯಾಸ ಆರಂಭಿಸಿದ ಭಾರತದ ಮೊದಲ ಕ್ರಿಕೆಟಿಗನೆನಿಸಿದ್ದರು.
ಅಭ್ಯಾಸದ ವೇಳೆ ಶಾರ್ದೂಲ್ ಠಾಕೂರ್ ಎಲ್ಲ ಸುರಕ್ಷಾ ವಿಧಾನವನ್ನು ಪಾಲಿಸಿದ್ದಾರೆ ಎಂಬುದಾಗಿ ಸ್ಥಳೀಯ ಕ್ರಿಕೆಟ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.