![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 26, 2020, 5:45 AM IST
ಗಂಗೊಳ್ಳಿ: ಕುಂದಾಪುರ ತಾಲೂಕಿನಲ್ಲಿಯೇ ದೊಡ್ಡ ಗ್ರಾ.ಪಂ. ಆಗಿರುವ ಗಂಗೊಳ್ಳಿಯಲ್ಲಿ ಮಳೆಗಾಲ ಆರಂಭವಾದರೆ ಸಂಕಷ್ಟಗಳ ಸುರಿಮಳೆಯೇ ಆರಂಭವಾಗುತ್ತದೆ. ಇನ್ನೇನು ಕೆಲವೇ ದಿನಗಳಲ್ಲಿ ಮಳೆಗಾಲ ಶುರುವಾಗಲಿದ್ದು, ಚರಂಡಿ ಹೂಳೆತ್ತುವ, ಮುಂಗಾರು ಪೂರ್ವದಲ್ಲಿ ಕೈಗೊಳ್ಳಬೇಕಾದ ಕೆಲಸಗಳ ಬಗ್ಗೆ ಸ್ಥಳೀಯಾಡಳಿತ ಮೌನ ವಹಿಸಿದಂತಿದೆ.
ಗಂಗೊಳ್ಳಿಯಲ್ಲಿ ಮಳೆ ನೀರು ಹರಿದುಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಇರುವುದರಿಂದ ಮಳೆ ನೀರು ರಸ್ತೆಗೆ, ಮನೆಗಳಿಗೆ ನುಗ್ಗಿ ಸಮಸ್ಯೆ ಇನ್ನಷ್ಟು ಜಟಿಲವಾಗುವ ಸಾಧ್ಯತೆ ಹೆಚ್ಚಾಗಿದೆ. ಮಳೆ ನೀರು ಸರಾಗವಾಗಿ ಹರಿದು ಹೋಗಲು ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದಿರುವುದು ಹಾಗೂ ಇರುವ ಚರಂಡಿಗಳನ್ನು ನಿರ್ವಹಣೆ ಮಾಡುವಲ್ಲಿ ಸ್ಥಳೀಯಾಡಳಿತ ವಿಫಲವಾಗಿರುವುದು ಮಳೆಗಾಲದಲ್ಲಿ ಅನಾಹುತಗಳಿಗೆ ಎಡೆ ಮಾಡಿಕೊಡುತ್ತಿದೆ.
ಪಂಚಾಯತ್ ವ್ಯಾಪ್ತಿಯ ಅರೆಕಲ್ಲು, ವಿಜಯ ವಿಠಲ ಮಂಟಪದ ಬಳಿ, ಮ್ಯಾಂಗನೀಸ್ ರೋಡ್ ವಠಾರ, ರಥಬೀದಿ ಸಮೀಪ ಮುಖ್ಯರಸ್ತೆಯಲ್ಲಿ ಮಳೆಗಾಲದ ಸಂದರ್ಭ ಮಳೆ ನೀರು ಶೇಖರಣೆಗೊಂಡು ಕೃತಕ ಕೆರೆ ನಿರ್ಮಾಣವಾಗುತ್ತದೆ.
ಕೂಡಲೇ ಪಂಚಾಯತ್ ವ್ಯಾಪ್ತಿಯ ಎಲ್ಲ ಚರಂಡಿಗಳನ್ನು ಸ್ವತ್ಛಗೊಳಿಸಬೇಕು. ಚರಂಡಿಗಳಲ್ಲಿರುವ ಹೂಳನ್ನು ತೆಗೆದು ಮಳೆನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡಿಕೊಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ದೊಡ್ಡ ಹಿತ್ಲು: ತ್ಯಾಜ್ಯ ರಾಶಿ
ಮ್ಯಾಂಗನೀಸ್ ರಸ್ತೆ ಬಳಿಯಿಂದ ಚರ್ಚ್ ರಸ್ತೆ ಮೂಲಕ ಮತ್ತು ಶ್ರೀ ವಿಜಯ ವಿಠಲ ಮಂಟಪದ ಬಳಿಯಿಂದ ಮುಖ್ಯರಸ್ತೆ ಮೂಲಕ ಚರ್ಚ್ ರಸ್ತೆಗೆ ಸಾಗಿ ದುರ್ಗಿಕೇರಿ ಚರಂಡಿ ಯಲ್ಲಿ ಮಳೆ ನೀರು ಹರಿದು ಹೋಗುವ ವ್ಯವಸ್ಥೆಯಿದ್ದು, ಈ ಚರಂಡಿ ಹಾಗೂ ಅರೆಕಲ್ಲು ಪ್ರದೇಶದ ಮೂಲಕ ಸಾಗುವ ಚರಂಡಿಯು ಅತಿಕ್ರಮಣಗೊಂಡು ಚರಂಡಿ ಚಿಕ್ಕದಾಗುತ್ತಿದೆ. ಚರಂಡಿಯಲ್ಲಿ ಮಣ್ಣು ರಾಶಿ ಹಾಕಲಾಗಿದ್ದು, ಮಳೆ ನೀರು ಹರಿದು ಹೋಗುವುದು ಕಷ್ಟ. ಅದಲ್ಲದೆ ಅಪಾರ ಪ್ರಮಾಣದ ತ್ಯಾಜ್ಯ ಹಾಗೂ ಹೂಳು ತುಂಬಿಕೊಂಡಿದ್ದು, ಗಿಡಗಂಟಿಗಳು ಬೆಳೆದು ನಿಂತಿವೆ. ದೊಡ್ಡಹಿತ್ಲು ಚರಂಡಿಯಲ್ಲಿ ಮಳೆ ನೀರು ಹರಿದು ಹೋಗಲು ಸಾಧ್ಯವಿಲ್ಲದಷ್ಟು ತ್ಯಾಜ್ಯ ತುಂಬಿದೆ.
ಇಂದು ಸಭೆ
ಗ್ರಾ.ಪಂ. ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಮುಂಗಾರು ಪೂರ್ವ ಸಿದ್ಧತೆಗಳ ಬಗ್ಗೆ ಚರ್ಚಿಸಲು ಮೇ 26 ರಂದು ಗ್ರಾ.ಪಂ. ಕಚೇರಿಯಲ್ಲಿ ಅಧ್ಯಕ್ಷರ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ. ಸಭೆಯಲ್ಲಿ ಚರಂಡಿ ಹೂಳೆತ್ತುವ ಬಗ್ಗೆ,ಗಿಡ ಗಂಟಿಗಳ ತೆರವು ಬಗ್ಗೆ ಚರ್ಚಿಸಲಾಗುವುದು.
–ವಾಸುದೇವ ಶೇರುಗಾರ್,
ಗಂಗೊಳ್ಳಿ ಗ್ರಾ.ಪಂ. ಕಾರ್ಯದರ್ಶಿ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.