ಹಳ್ಳಿ ಯುವಕರೇ ಮಾರುಕಟ್ಟೆ ಮಾಲಕರು

ಎಪಿಎಂಸಿ ಕಾಯ್ದೆ ತಿದ್ದುಪಡಿ ಅನ್ವಯ ಯುವಕರ ಆರ್ಥಿಕ ಸಶಕ್ತೀಕರಣ ಉದ್ದೇಶ

Team Udayavani, May 26, 2020, 5:55 AM IST

ಹಳ್ಳಿ ಯುವಕರೇ ಮಾರುಕಟ್ಟೆ ಮಾಲಕರು

ಸಾಂದರ್ಭಿಕ ಚಿತ್ರ.

ಬೆಂಗಳೂರು: ಹಣ್ಣು, ತರಕಾರಿ, ಆಹಾರ ಧಾನ್ಯ ಬೆಳೆಯುವ ರೈತ ಯುವಕರನ್ನು ಮಾರುಕಟ್ಟೆ ಮಾಲಕರನ್ನಾಗಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಯೋಜನೆ ರೂಪಿಸಲು ಮುಂದಾಗಿದೆ.

ಎಪಿಎಂಸಿ ಕಾಯ್ದೆ ತಿದ್ದುಪಡಿ ಮೂಲಕ ಒದಗಿರುವ ಖಾಸಗಿ ಮಾರುಕಟ್ಟೆ ಸ್ಥಾಪನೆ ಅವಕಾಶ ವನ್ನು ರೈತಾಪಿ ಯುವಕರ ಆರ್ಥಿಕ ಸಶಕ್ತೀಕರಣಕ್ಕೆ ಬಳಸಿಕೊಳ್ಳಲು ಸರಕಾರ ಚಿಂತಿಸಿದೆ. ಗ್ರಾಮೀಣ ಭಾಗದ ಯುವಕರು ಸ್ವ ಸಹಾಯ ಗುಂಪುಗಳ ಮಾದರಿಯಲ್ಲಿ ಜತೆಗೂಡಿ ಖಾಸಗಿ ಮಾರುಕಟ್ಟೆ ಸ್ಥಾಪನೆ ಮಾಡಿದರೆ ಅದಕ್ಕೆ ಸರಕಾರದಿಂದ ಲೇ ಅಗತ್ಯ ನೆರವು ನೀಡುವುದು ಇದರ ಕಾರ್ಯಶೈಲಿ.

ಗ್ರಾಮೀಣ ಯುವಕರ ಸಂಘಗಳಿಗೆ ಖಾಸಗಿ ಮಾರುಕಟ್ಟೆ ಸ್ಥಾಪನೆಗೆ ಅವಕಾಶ ಕೊಟ್ಟು, ಅವರು ಬೆಳೆದ ಉತ್ಪನ್ನಗಳನ್ನು ಸ್ವತಃ ಮಾರುಕಟ್ಟೆ ಮಾಡಲು ಅವಕಾಶ ಕಲ್ಪಿಸುವುದು, ಖಾಸಗಿ ಕಂಪೆನಿಗಳ ರೀತಿ ಇವರಿಗೂ ಅನುಮತಿ ನೀಡಿ ಸ್ವಯಂ ಉದ್ಯೋಗ ಕಲ್ಪಿಸುವ ನಿಟ್ಟಿನ ಚಿಂತನೆ ಇದು.

ಕೋವಿಡ್-19 ಹಿನ್ನೆಲೆಯಲ್ಲಿ ರಚನೆಯಾಗಿರುವ ತಂಡ ಈ ಶಿಫಾರಸು ಸಿದ್ಧಪಡಿಸಿದೆ. ಕೋವಿಡ್-19 ದಿಂದಾಗಿ ಮತ್ತೆ ಹಳ್ಳಿಗಳತ್ತ ಮುಖ ಮಾಡಿರುವ ಯುವಕರಿಗೆ ಸ್ವಂತ ಉದ್ಯೋಗ ಕಲ್ಪಿಸಲು ಇದು ಸಹಕಾರಿಯಾಗಲಿದೆ. ಗ್ರಾಹಕರಿಗೆ ನ್ಯಾಯಯುತ ದರದಲ್ಲಿ ಮನೆ ಬಾಗಿಲಿಗೆ ಹಣ್ಣು ತರಕಾರಿ ತಲುಪಿಸಿದಂತಾಗುತ್ತದೆ. ಪ್ರಾಯೋಗಿಕವಾಗಿ ಮಂಗಳೂರು, ಬೆಂಗಳೂರು, ಮೈಸೂರು ಸೇರಿ ಐದು ನಗರಗಳಲ್ಲಿ ಇದರ ಜಾರಿಗೆ ನೀಲನಕ್ಷೆ ತಯಾರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಅನುಷ್ಠಾನ ಹೇಗೆ?
-ಗ್ರಾಮೀಣ ಯುವಕರ ಸಂಘ ಅಥವಾ ಸಂಘಗಳು ಸ್ಥಾಪಿಸುವ ಸಂಸ್ಥೆಗೆ ಮಾರುಕಟ್ಟೆ ರಚನೆಗೆ ಅವಕಾಶ.
-ಸರಕಾರದಿಂದ ಆರ್ಥಿಕ ನೆರವು, ತಮ್ಮಲ್ಲಿ ಬೆಳೆದ ಉತ್ಪನ್ನ ಮಾರಾಟಕ್ಕೆ ಅವಕಾಶ.
-ಹಳ್ಳಿಗಳಲ್ಲಿ ಬೆಳೆದ ಉತ್ಪನ್ನಗಳ ಮಾಹಿತಿ ಇರುವ ಯುವಕರಿಂದಲೇ ಮಾರುಕಟ್ಟೆ ಸ್ಥಾಪನೆ, ಮಾರಾಟ.
-ಯಾರಾದರೂ ತಾವು ಬೆಳೆದ ಉತ್ಪನ್ನ ನಗರಕ್ಕೆ ತಂದು ಮಾರುವುದಾದರೆ ಲೈಸೆನ್ಸ್‌ ನೀಡಿ ವಾಹನ ಸಹಿತ ಸಣ್ಣಪುಟ್ಟ ಆರ್ಥಿಕ ನೆರವು.
-ಅದಕ್ಕಾಗಿ ವ್ಯಾಪ್ತಿ ನಿಗದಿಪಡಿಸಲು ಕಾನೂನಿನಡಿ ಅವಕಾಶ ಬಗ್ಗೆಯೂ ಸಮಾಲೋಚನೆ.
-ಗ್ರಾಮೀಣ ಭಾಗದ ಯುವಕರ ಜತೆ ನಗರದ ಸ್ವ-ಉದ್ಯೋಗ ಆಕಾಂಕ್ಷಿ ಯುವಕರಿಗೂ ಅವಕಾಶ.

ಗ್ರಾಮೀಣ ಯುವಕರು, ರೈತರನ್ನು ಆರ್ಥಿಕವಾಗಿ ಸದೃಢರಾಗಿಸುವ ನಿಟ್ಟಿನಲ್ಲಿ ಸರಕಾರ ಚಿಂತನೆ ನಡೆಸಿದೆ. ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ಸಿಕ್ಕಿರುವ ಅವಕಾಶ ಬಳಸಿ ಯುವಕ ಸಂಘಗಳಿಗೆ ಮಾರುಕಟ್ಟೆ ಸ್ಥಾಪನೆಗೆ ಅವಕಾಶ ನೀಡುವುದು ಇದರಲ್ಲಿ ಸೇರಿದೆ.
-ಕೆ.ಸಿ. ನಾರಾಯಣ ಗೌಡ, ತೋಟಗಾರಿಕೆ ಸಚಿವ

-  ಎಸ್‌. ಲಕ್ಷ್ಮೀನಾರಾಯಣ

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.