ಸ್ವಾವಲಂಬನೆಯೇ ಆತ್ಮನಿರ್ಭರತೆ ಉದ್ದೇಶ ; ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಅಭಿಮತ


Team Udayavani, May 26, 2020, 10:50 AM IST

ಸ್ವಾವಲಂಬನೆಯೇ ಆತ್ಮನಿರ್ಭರತೆ ಉದ್ದೇಶ ; ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಅಭಿಮತ

ಚಿಕ್ಕಮಗಳೂರು: ನಗರದ ಮಧುವನ ಬಡಾವಣೆಯಲ್ಲಿ ಹಣ್ಣು  ಮತ್ತು ತರಕಾರಿ ಅಂಗಡಿಯನ್ನು ಸಚಿವ ಸಿ.ಟಿ.ರವಿ ಉದ್ಘಾಟಿಸಿದರು.

ಚಿಕ್ಕಮಗಳೂರು: ಆತ್ಮನಿರ್ಭರತೆ ಉದ್ದೇಶವೇ ಕುಟುಂಬ, ಸಮುದಾಯ,ದೇಶದ ಸ್ವಾವಲಂಬನೆ ಯಾಗಿದೆ ಎಂದು ಸಚಿವ ಸಿ.ಟಿ.ರವಿ ಹೇಳಿದರು. ಸೋಮವಾರ ನಗರದ ಮಧುವನ ಬಡಾವಣೆಯಲ್ಲಿ ಸೇವಾಭಾರತಿ ಆಶ್ರಯದಲ್ಲಿ ಆರಂಭಗೊಂಡ ವಿಜಯಭಾರತಿ ಹಣ್ಣು ಮತ್ತು ತರಕಾರಿ ಅಂಗಡಿ ಉದ್ಘಾಟಿಸಿ ಮಾತನಾಡಿದರು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆತ್ಮನಿರ್ಭರತೆ ಎಂದಿರುವುದು ಸ್ವಾಲಂಬನೆ ಬದುಕಿಗಾಗಿ ಒಂದು ಕಾಲದಲ್ಲಿ ವ್ಯಕ್ತಿಗತವಾಗಿ, ಕೌಟುಂಬಿಕವಾಗಿ, ಸಮಾಜಿಕವಾಗಿ ಮತ್ತು ರಾಷ್ಟ್ರವಾಗಿ ದೇಶ ಪೂರ್ಣ ಸ್ವಾಲಂಬಿಯಾಗಿತ್ತು ಎಂದರು.

ನಂತರ ದೇಶ ಸ್ವಾತಂತ್ರ್ಯ ಕಳೆದುಕೊಂಡು ದಾಸ್ಯಕ್ಕೆ ಒಳಗಾದ ಪರಿಣಾಮ ಕುಟುಂಬ ಹಾಗೂ ರಾಷ್ಟ್ರ ಸ್ವಾವಲಂಬನೆಗೆ ಧಕ್ಕೆ ಉಂಟಾಯಿತು. ಆಗ ವ್ಯಕ್ತಿಗತ
ಸ್ವಾವಲಂಬನೆಯೂ ಮರೆಯಾಯಿತು. ದೇಶ ಮತ್ತೆ ಸ್ವಾವಲಂಬನೆಯಾಗಬೇಕು ಎಂಬ ಉದ್ದೇಶದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು
ಆತ್ಮನಿರ್ಭರತೆ ಬಗ್ಗೆ ಹೇಳಿದ್ದಾರೆ ಎಂದರು. ಈ ಹಿನ್ನೆಲೆಯಲ್ಲಿ ಸೇವಾಭಾರತಿ ಯುವಕರ ತಂಡ ಕಾಯಿಪಲ್ಲೆಯನ್ನು ಮಾರಾಟ ಮಾಡುವ ಮೂಲಕ ಸಣ್ಣ ಪ್ರಯತ್ನವನ್ನು ನಗರದಲ್ಲಿ ಆರಂಭಿಸಿದೆ. ಆರಂಭ ಶೂರತ್ವವಾಗದೆ ವ್ಯಾವಹಾರಿಕ ಹಿನ್ನೆಲೆಯಲ್ಲಿ ನಿರಂತರ ವ್ಯವಹಾರ ನಡೆಯಬೇಕಾಗಿದೆ ಎಂದು ತಿಳಿಸಿದರು.

ಲಾಭ ಗಳಿಕೆಯೇ ಮೂಲ ಉದ್ದೇಶವಾಗದೆ ಲಾಭವನ್ನು ಇಟ್ಟುಕೊಂಡು ಉತ್ಕೃಷ್ಟವಾದ ಸೇವೆ ನೀಡಿದಾಗ ಮಾತ್ರ ಉದ್ಯಮಕ್ಕೆ ಅಥವಾ ಪ್ರಯತ್ನಕ್ಕೆ ಯಶಸ್ಸು ಸಿಗುತ್ತದೆ. ಲಾಭವೇ ಉದ್ದೇಶವಾದರೆ ಕೆಲವು ದಿನ ಈ ಪ್ರಯತ್ನ ನಡೆದು ಆನಂತರ ವಿಶ್ವಾಸ ಮೆರೆಯಾಗುತ್ತದೆ. ಆದ್ದರಿಂದ ಲಾಭ ಮತ್ತು ಸೇವೆ
ಎರಡೂ ಸಮತೋಲನದಲ್ಲಿ ಇರಬೇಕು ಎಂದರು.

ಸೇವೆಯನ್ನೇ ಪ್ರಧಾನವಾಗಿ ತೆಗೆದುಕೊಂಡರೆ ಹೆಚ್ಚುದಿನ ಮಾಡಲಾಗದು. ಬದುಕಿನ ಸಂಕಷ್ಟಗಳು ಎದುರಾದಾಗ ಸೇವೆ ಹಿನ್ನೆಡೆಗೆ ಬರುತ್ತದೆ. ಕೇವಲ
ಲಾಭವೇ ಮುಖ್ಯವಾಗಿ ಗುಣಮಟ್ಟದ ಸೇವೆಗೆ ಆದ್ಯತೆ ನೀಡದಿದ್ದರೆ, ಅದು ಸಹ ಉದ್ಯಮವನ್ನು ಮುನ್ನಡೆಸದು. ಹಾಗಾಗಿ, ಎರಡೂ ಸಹ ಸಮವಾಗಿರಲಿ ಎಂದರು.
ವ್ಯವಹಾರದಲ್ಲಿ ಪಾರದರ್ಶಕತೆ ಜೊತೆಗೆ ಪ್ರಾಮಾಣಿಕತೆಯ ಚೌಕಟ್ಟನ್ನು ಹೊಂದಿರಬೇಕು. ಆಗ ಮಾತ್ರ ಯಶಸ್ಸು ಸಿಗುತ್ತದೆ. ಸ್ವಾವಲಂಬನೆ ದೂರದಲ್ಲಿದೆ.
ತಕ್ಷಣ ದೊರಕುವುದಲ್ಲ, ಯಾವುದೇ ಯಶಸ್ಸಿಗೆ ಮೊದಲ ಹೆಜ್ಜೆ ಮುಖ್ಯ ಎಂದರು.

ಹಿರಿಯ ಪತ್ರಕರ್ತ ಸ.ಗಿರಿಜಾಶಂಕರ ಮಾತನಾಡಿ, ಜನರು ಗುಣಮಟ್ಟದ ಸೇವೆಯನ್ನು ಬಯಸುತ್ತಾರೆ. ಒಂದು ತರಕಾರಿ ಮಳಿಗೆಯಾಗಿ ಉಳಿಯದೆ ಮಾದರಿ
ತರಕಾರಿ ಮಳಿಗೆಯಾಗಬೇಕು. ಗುಣಮಟ್ಟ ಹಾಗೂ ನಿಖರ ಬೆಲೆಯಲ್ಲಿ ಒದಗಿಸಬೇಕು ಎಂದರು. ಈ ಸಂದರ್ಭದಲ್ಲಿ ಮಧುವನ ಬಡಾವಣೆ ಅಸೋಸಿಯೇಷನ್‌ ಅಧ್ಯಕ್ಷ ಮಾದಪ್ಪ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬಿ.ಮಲ್ಲಿಕಾರ್ಜುನ್‌ ಉಪಸ್ಥಿತರಿದ್ದರು.

ಸೇವಾಭಾರತಿ ಮಳಿಗೆ ಹಣ್ಣು ತರಕಾರಿ ಲಾಭ ಗಳಿಕೆಗಾಗಿ ಮಾಡದೆ ಜನರಿಗೆ ಹೊರೆಯಾಗದಂತೆ ಉತ್ತಮ ತರಕಾರಿ ಮತ್ತು ಹಣ್ಣನ್ನು ನೀಡುವ ಉದ್ದೇಶ ಹೊಂದಿದೆ. ಲಾಭದ ಜೊತೆ ಸೇವೆಗೂ ಆದ್ಯತೆ ನೀಡಲಾಗುವುದು. ಸುಮಂತ್‌, ಸೇವಾಭಾರತಿ ಮಳಿಗೆ

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

3-chikkamagaluru

Chikkamagaluru: ಟಾಟಾ ಏಸ್ ಆಟೋ ಪಲ್ಟಿ ; ಇಬ್ಬರು ಸ್ಥಳದಲ್ಲೇ ಸಾವು

4-chikkamagaluru

Chikkamagaluru: ಸ್ಕಿಡ್ ಆಗಿ 20 ಅಡಿ ಎತ್ತರಿಂದ ಕೆಳಗೆ ಬಿದ್ದ ಗೂಡ್ಸ್ ವಾಹನ

Kottigehara: ಕಸ ವಿಲೇವಾರಿ ವಾಹನ ಬಂದಿಲ್ಲವೆಂದು ಪಂಚಾಯತ್ ಬಾಗಿಲಿಗೆ ಕಸ ಸುರಿದ ಭೂಪ

Kottigehara: ಕಸ ವಿಲೇವಾರಿ ವಾಹನ ಬಂದಿಲ್ಲವೆಂದು ಪಂಚಾಯತ್ ಬಾಗಿಲಿಗೆ ಕಸ ಸುರಿದ ಭೂಪ

ಹದಗೆಟ್ಟ ಕೊಟ್ಟಿಗೆಹಾರ-ಗಂಗಾಮುಲ ರಸ್ತೆ, ಗ್ರಾಮಸ್ಥರಿಂದ ಪ್ರತಿಭಟನೆಗೆ ನಿರ್ಧಾರ

ಹದಗೆಟ್ಟ ಕೊಟ್ಟಿಗೆಹಾರ-ಗಂಗಾಮುಲ ರಸ್ತೆ, ಗ್ರಾಮಸ್ಥರಿಂದ ಪ್ರತಿಭಟನೆಗೆ ನಿರ್ಧಾರ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.