ದೇಶೀಯ ವಿಮಾನ ಹಾರಾಟ; ಪ್ರಯಾಣಿಕರು ಇಳಿಮುಖ


Team Udayavani, May 27, 2020, 8:12 AM IST

deshiya

ದೇವನಹಳ್ಳಿ: ದೇಶೀಯ ವಿಮಾನಗಳ ಹಾರಾಟ ಹಿನ್ನೆಲೆಯಲ್ಲಿ ಮಂಗಳವಾರ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಮುಖವಾಗಿ ದೆ. ಸೋಮವಾರವೇ ಕೇಂದ್ರ ಸರ್ಕಾರ ದೇಶೀಯ ವಿಮಾನಗಳ ಹಾರಾಟ ಆರಂಭಕ್ಕೆ ಸೂಚಿಸಿತ್ತು.  ವಿವಿಧ ರಾಜ್ಯಗಳಿಂದ ಬರುವ ಪ್ರಯಾಣಿಕರಲ್ಲಿ ಕ್ವಾರಂಟೈನ್‌ ಮಾಡುವ ಭಯದಿಂದ ಬೇರೆ ಬೇರೆ ರಾಜ್ಯಗಳಿಂದ ಪ್ರಯಾಣಿಕರು ಹಿಂದೇಟು ಹಾಕುತ್ತಿದ್ದಾರೆ ಎನ್ನಲಾಗಿದೆ.

ಹೀಗಾಗಿ ಹಲವು ವಿಮಾನಗಳ ಬಂದ್‌ ಆಗುವ ಸಾಧ್ಯತೆಗಳಿವೆ. ಚೆನ್ನೈ,  ದೆಹಲಿಯಿಂದ ಆಗಮಿಸುವ ಪ್ರಯಾಣಿಕರನ್ನು ಬಿಎಂಟಿಸಿ ಬಸ್‌ಗಳಲ್ಲಿ ಕ್ವಾರಂಟೈನ್‌ಗೆ ಅಧಿಕಾರಿಗಳು ಕಳುಹಿಸುತ್ತಿ  ದ್ದಾರೆ. ಸ್ಥಳದಲ್ಲೇ 15 ಆ್ಯಂಬುಲೆನ್ಸ್‌ ಮೊಕ್ಕಾಂ ಹೂಡಿವೆ. ಹಿಂದೂರ್‌ನಿಂದ ದೆಹಲಿಗೆ ಆಗಮಿಸಿ, ದೆಹಲಿಯಿಂದ  ಕೆಂಪೇಗೌಡ ಅಂತಾರಾಷ್ಟ್ರೀ ಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ 5 ಜನ ಬಡ ಕುಟುಂಬದವರು ಕ್ವಾರಂಟೈನ್‌ಗೆ ಹಣ ಭರಿಸಲು ಸಾಧ್ಯವಿಲ್ಲ.

ಸೋಮವಾರ ದಿಂದ ವಿಮಾನ ನಿಲ್ದಾಣದ ಒಳಗಡೆ ಪರದಾಡುತ್ತಿದ್ದಾರೆ. ದೆಹಲಿಯಿಂದ  ಬಂದ ಪತ್ನಿಯನ್ನು ಹೊರಗೆ ಬಿಡುತ್ತಿಲ್ಲ. ನಮಗೆ ಸರ್ಕಾರ ಸಹಾಯ ಮಾಡಿಲ್ಲ. ಕ್ವಾರಂಟೈನ್‌ಗೆ ಹಣವನ್ನು ಸರ್ಕಾರ ಭರಿಸಲಿ ಎಂದು ಪತಿ ಏರ್‌ಪೋಟ್‌ನಲ್ಲಿ ಅಳಲು ತೋಡಿಕೊಂಡರು.

2 ಪ್ರತ್ಯೇಕ ಕೌಂಟರ್‌: ದೇಶಿಯ ಪ್ರಯಾಣಿಕರು ಮತ್ತು ಅಂತಾರಾಷ್ಟ್ರೀಯ ಪ್ರಯಾಣಿಕರಿ ಗಾಗಿ 2 ಪ್ರತ್ಯೇತಕ ಕೌಂಟರ್‌ ತೆರೆಯಲಾಗಿದೆ. ಬಂದವರನ್ನು ಹೋಟೆಲ್‌ ಕ್ವಾರಂ ಟೈನ್‌ಗೆ ಕಳುಹಿಸಲು ವ್ಯವಸ್ಥೆ ಮಾಡಲಾಗಿದೆ. ಮಂಗಳವಾರ  ಒಂದಿಷ್ಟು ಜನ ಬಸ್‌ ಹತ್ತಲು ಆಗಮಿಸಿ ಪರಾರಿಯಾಗಲು ಯತ್ನಿಸಿ  ದ್ದರು ಎನ್ನಲಾಗಿದ್ದು ಭದ್ರತೆ ಕಲ್ಪಿಸಲಾಗಿದೆ.

750 ಪ್ರಯಾಣಿಕರು ಆಗಮನ: 2 ಅಂತಾರಾಷ್ಟ್ರೀಯ ವಿಮಾನಗಳು ಈಗಾಗಲೇ ಬಂದಿವೆ. ಬಂದ ಎಲ್ಲಾ ಪ್ರಯಾಣಿಕರನ್ನು ಸಾಂಸ್ಥಿಕವಾಗಿ ಕ್ವಾರಂಟೈನ್‌ ಮಾಡಲಾಗಿದೆ. ಒಟ್ಟು 177ಜನ ಬಂದಿಳಿ ದಿದ್ದಾರೆ. 18 ಡೊಮೆಸ್ಟಿಕ್‌ ವಿಮಾನ, 10  ವಿಮಾನ ರೆಡ್‌ ಝೋನ್‌ ರಾಜ್ಯಗಳಿಂದ ಬಂದಿವೆ. ಇದರಿಂದ ಸುಮಾರು 750 ಪ್ರಯಾಣಿಕರು ಆಗಮಿಸಿದ್ದಾರೆ. ಸರ್ಕಾರದ ಆದೇಶದಂತೆ ಮುಂದಿನ ಪ್ರಕ್ರಿಯೆ ನಡೆ ಯುತ್ತಿದೆ ಎಂದು ಡಿಸಿಪಿ ಭೀಮಶಂಕರ್‌ ಗುಳೇದ್‌ ತಿಳಿಸಿದರು.

6 ತಿಂಗಳ ನಂತರ ಮಗನ ದರ್ಶನ: ಕಳೆದ 6 ತಿಂಗಳಿನಿಂದ ಮೆಡಿಕಲ್‌ ವ್ಯಾಸಂಗಕ್ಕೆ ಫಿಲಿಫೈನ್ಸ್‌ಗೆ ಹೋಗಿದ್ದ ಮಗ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ, ಮಗನನ್ನು ಕಂಡ ತಾಯಿ ಆನಂದ ಭಾಷ್ಪ ಸುರಿಸಿದರು.  ಲಾಕ್‌ಡೌನ್‌ ಜಾರಿಗೆ ಬಂದ ದಿನದಿಂದಲೂ ಮಗನನ್ನು ಕರೆಸಿಕೊಳ್ಳಲು ತಂದೆ-ಚಿಕ್ಕಪ್ಪ ತಿರುಪತಿಗೆ ಮುಡಿ ಕೊಡುವುದಾಗಿ ಹರಕೆ ಹೊತ್ತಿದ್ದರು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಮಗನನ್ನು ಕಂಡು ಪೋಷಕರು  ಕಣ್ಣೀರು ಹಾಕಿದರು. ಇನ್ನು ಮಗನನ್ನು ನೋಡಿದರೂ ಮಾತನಾಡಲು ಆಗುತ್ತಿಲ್ಲ ಎಂದು ಹೆತ್ತ ತಾಯಿ ಅಳಲು ತೋಡಿಕೊಂಡರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

Untitled-5

Bangalore: ಇಬ್ಬರು ಮಕ್ಕಳನ್ನು ಕೊಂದ ಮಲತಂದೆಯ ಬಂಧನ

16-bng

Magadi: ಮದುವೆ ನಿಶ್ಚಯವಾಗಿದ್ದ ಯುವ ವಕೀಲೆ ಆತ್ಮಹತ್ಯೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.