
ಕೋವಿಡ್ ಪ್ರಥಮ ಕೇಸ್: ರೆಡ್ ಜೋನ್ ನಿಂದ ಬಂದ ಕುದುರೆ 14 ದಿನ ಕ್ವಾರಂಟೈನ್ ಗೆ!
ಮಂಗಳವಾರ ಸಂಜೆ ಕುದುರೆ ಜತೆ ತೆರಳಿದ್ದ ವ್ಯಕ್ತಿ ಕಾಶ್ಮೀರದಿಂದ ರಾಜೌರಿ ಜಿಲ್ಲೆಗೆ ವಾಪಸ್ ಆಗಿದ್ದ.
Team Udayavani, May 27, 2020, 4:23 PM IST

ಜಮ್ಮು-ಕಾಶ್ಮೀರ:ಕೋವಿಡ್ 19 ವೈರಸ್ ನಿಂದ ಮನುಷ್ಯರನ್ನು, ವೈದ್ಯರನ್ನು ಕ್ವಾರಂಟೈನ್ ಮಾಡುವುದು ಸಹಜ ಪ್ರಕ್ರಿಯೆ ಏತನ್ಮಧ್ಯೆ ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯ ಕುದುರೆಯೊಂದನ್ನು 14 ದಿನಗಳ ಕಾಲ ಕ್ವಾರಂಟೈನ್ ಗೆ ಕಳುಹಿಸಲಾಗಿದೆ. ಅಲ್ಲದೇ ಕುದುರೆಯನ್ನು ನೋಡಿಕೊಳ್ಳುತ್ತಿದ್ದ ಮಾಲೀಕನಿಗೆ ಮುಂಜಾಗ್ರತಾ ಕ್ರಮ ವಹಿಸಿಕೊಳ್ಳುವಂತೆ ಸೂಚಿಸಿರುವುದಾಗಿತಿಳಿಸಿದೆ.
ಮುಂದಿನ 14 ದಿನಗಳ ಕಾಲ ಕುದುರೆ ಸವಾರಿ ಮಾಡುವುದಾಗಲಿ ಅಥವಾ ಅದರ ಸಮೀಪ ಹೋಗಬಾರದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಈ ಕುದುರೆ ರೆಡ್ ಝೋನ್ ಪ್ರದೇಶಗಳಲ್ಲಿ ಓಡಾಡಿರುವುದರಿಂದ ಕುದುರೆಗೆ ಕೋವಿಡ್ 19 ಸೋಂಕು ತಗುಲಿರಬಹುದು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಸಂಜೆ ಕುದುರೆ ಜತೆ ತೆರಳಿದ್ದ ವ್ಯಕ್ತಿ ಕಾಶ್ಮೀರದಿಂದ ರಾಜೌರಿ ಜಿಲ್ಲೆಗೆ ವಾಪಸ್ ಆಗಿದ್ದ. ಮೊಘಲ್ ರಸ್ತೆಯಲ್ಲಿ ತಡೆದು ನಿಲ್ಲಿಸಿ ಸ್ಕ್ರೀನಿಂಗ್ ಮಾಡಲಾಗಿದ್ದು, ಕುದುರೆಯನ್ನು 14 ದಿನಗಳ ಕಾಲ ಕ್ವಾರಂಟೈನ್ ಗೆ ಕಳುಹಿಸಲಾಗಿದೆ. ವ್ಯಕ್ತಿಯನ್ನು ಪರೀಕ್ಷೆಗೊಳಪಡಿಸಿದ್ದು ವರದಿಗಾಗಿ ಕಾಯಲಾಗುತ್ತಿದೆ. ಏತನ್ಮಧ್ಯೆ ಕುದುರೆಯನ್ನು ಏನು ಮಾಡುವುದು ಎಂದು ಅಧಿಕಾರಿಗಳು ಗೊಂದಲಕ್ಕೊಳಗಾಗಿರುವುದಾಗಿ ವರದಿ ತಿಳಿಸಿದೆ.
ಪಶು ಸಂಗೋಪನಾ ಇಲಾಖೆಯ ಹಿರಿಯ ತಜ್ಞರನ್ನು ಕರೆಯಿಸಿದ್ದು, ಅವರ ಸಲಹೆಯಂತೆ, ವ್ಯಕ್ತಿಗೆ ಕುದುರೆ ಸವಾರಿ ಮಾಡುವುದಾಗಲಿ, ಅದರ ಬಳಿ ಹೋಗದಂತೆ ಸೂಚನೆ ನೀಡಿದ್ದು, ಕುದುರೆಯನ್ನು ಕ್ವಾರಂಟೈನ್ ನಲ್ಲಿ ಇಟ್ಟು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ತಿಳಿಸಿರುವುದಾಗಿ ವರದಿ ಹೇಳಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ambedkar Remarks: ಕನಸಲ್ಲೂ ಅಂಬೇಡ್ಕರ್ರನ್ನು ಅವಮಾನಿಸಿಲ್ಲ: ಅಮಿತ್ ಶಾ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

ನಾವು ಅಧಿಕಾರಕ್ಕೆ ಬಂದರೆ 60 ವರ್ಷ ಮೇಲ್ಪಟ್ಟ ಎಲ್ಲರಿಗೂ ಉಚಿತ ಚಿಕಿತ್ಸೆ: ಕೇಜ್ರಿವಾಲ್

Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ

Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
MUST WATCH
ಹೊಸ ಸೇರ್ಪಡೆ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ

Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು

United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ

Operation: ಕಾಸರಗೋಡಿನಲ್ಲಿ ಎನ್.ಐ.ಎ. ದಾಳಿ: ತಲೆಮರೆಸಿಕೊಂಡಿದ್ದ ಉಗ್ರಗಾಮಿ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.