ಏಕವಚನದಲ್ಲಿ ಸಚಿವ-ಶಾಸಕರ ವಾಗ್ಯುದ್ಧ!


Team Udayavani, May 28, 2020, 5:13 AM IST

jagala mand

ಮಂಡ್ಯ: ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಲು ಕರೆದಿದ್ದ ಸಭೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ನಾಗಮಂಗಲ ಕ್ಷೇತ್ರದ ಶಾಸಕರ ಕಚ್ಚಾಟ ದ ವೇದಿಕೆಯಾಗಿ ಮಾರ್ಪಟ್ಟಿತು. ಸಭೆಯಲ್ಲಿ  ಜನಪ್ರತಿನಿಧಿಗಳು ಪರಸ್ಪರ ಕಚ್ಚಾಡಿ ಕೊಂಡು ಏಕವಚನದಲ್ಲಿ ಬೈದಾಡಿಕೊಂಡರು.

ಇಬ್ಬರು ಕೈ ಕೈ ಮಿಲಾಯಿಸುವ ಹಂತವನ್ನೂ ತಲುಪಿದರು. ಸಚಿವ-ಶಾಸಕರ ನಡುವಿನ ಕಿತ್ತಾ ಟಕ್ಕೆ ಜಿಲ್ಲಾಧಿಕಾರಿಯೂ ಸೇರಿದಂತೆ ಅಧಿಕಾರಿ ವರ್ಗ  ಮೂಕಪ್ರೇಕ್ಷಕವಾಗಿತ್ತು. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ  ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡರ ಅಧ್ಯಕ್ಷತೆಯಲ್ಲಿ ಕೋವಿಡ್‌-19 ನಿಯಂತ್ರಣ ಕುರಿತು ಜಿಲ್ಲಾಮ ಟ್ಟದ ಅಧಿಕಾರಿಗಳ ಸಭೆ  ಕರೆಯಲಾಗಿತ್ತು.

ಅಧಿಕಾರಿಗಳಿಗೆ ತರಾಟೆ: ಸಭೆಯಲ್ಲಿ ಕೊರೊನಾ ಸೋಂಕಿತರ ಬಗ್ಗೆ ಸಮರ್ಪಕ ಮಾಹಿತಿ ನೀಡದಿರುವುದು, ಕ್ವಾರಂಟೈನ್‌ ಆದವ ರಿಗೆ ಸಮರ್ಪಕ ಸೌಲಭ್ಯ ಒದಗಿಸದಿರುವು ದು, ಕೊರೊನಾ ಪರೀಕ್ಷಾ ವರದಿಗಳು ಅದಲು- ಬದಲಾಗಿರುವುದು ಸೇರಿದಂತೆ  ಹಲವಾರು ವಿಚಾರಗಳ ಬಗ್ಗೆ ಜೆಡಿಎಸ್‌ ಶಾಸ ಕರು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದು ಕೊಂಡರು.

ತಿರುಗಿ ಬಿದ್ದ ಶಾಸಕರು: ಈ ವೇಳೆ ಅಧಿಕಾರಿಗಳ ನ್ನು ಸಮರ್ಥಿಸಿಕೊಳ್ಳುವುದಕ್ಕೆ ಸಚಿವ ನಾರಾ ಯಣಗೌಡರು ಮುಂದಾದರು. ಸಚಿವರ  ಸಮರ್ಥನೆಯನ್ನು ಒಪ್ಪದ ಜೆಡಿಎಸ್‌ ಶಾಸ ಕರು ಸಚಿವರ ವಿರುದ್ಧ ತಿರುಗಿಬಿದ್ದರು. ಈ ಸಮಯದಲ್ಲಿ ಸಚಿವ ನಾರಾಯಣಗೌಡ ಹಾಗೂ ನಾಗಮಂಗಲ ಶಾಸಕ ಸುರೇಶ್‌ಗೌಡರ ನಡುವೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿತು. ತಾಳ್ಮೆ ಕಳೆದುಕೊಂಡ ಸಚಿವರು ಶಾಸಕ ಸುರೇಶ್‌ಗೌಡರನ್ನು ಏಕವಚನದಲ್ಲಿ  ನಿಂದಿಸಿದರು.

ನೀನ್ಯಾವನೋ ನನ್ನ ಕೇಳ್ಳೋಕೆ. ಮುಚ್ಕೊಂಡು ಹೊಗಲೇ.. ಎಂದು ಏರುದನಿ ಯಲ್ಲಿ ಕೂಗಾಡಿದರು. ನೀವು ಹೇಳಿದೆ°ಲ್ಲಾ ಕೇಳ್ಕೊಂಡು ಹೋಗೋಕೆ ನಾವು ಬಂದಿಲ್ಲ ಎಂದು ಕಚ್ಚಾಡಿಕೊಂಡರು. ಈ ಸಮಯದಲ್ಲಿ ಶಾಸಕ ಸುರೇಶ್‌ಗೌಡರ ಬೆಂಬಲಕ್ಕೆ ನಿಂತ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ರವೀಂದ್ರ ಶ್ರೀಕಂಠಯ್ಯ, ಗೌರವ ಕೊಟ್ಟು ಮಾತನಾಡುವು ದನ್ನು ಕಲಿಯಿರಿ. ಇಂತಹ ಕೀಳುಮಟ್ಟದ ಮಾತುಗಳು ನಿಮಗೆ ಶೋಭೆ ತರುವುದಿಲ್ಲ ಎಂದು  ಸಚಿವರನ್ನು ಖಂಡಿಸಿದರು.

ಪತ್ರಕರ್ತರನ್ನು ಹೊರಗಿಟ್ಟು ಸಭೆ: ಕೋವಿಡ್‌ -19 ನಿಯಂತ್ರಣ ಕುರಿತು ಜಿಲ್ಲಾಧಿಕಾರಿ ಕಚೇರಿ ಯಲ್ಲಿ ನಡೆದ ಸಭೆಗೆ ಪತ್ರಕರ್ತರು ಹಾಗೂ ದೃಶ್ಯ ಮಾಧ್ಯಮದವರನ್ನು ಹೊರಗಿಡಲಾಗಿತ್ತು. ಕಚ್ಚಾಟದ ದೃಶ್ಯವನ್ನು ಸೆರೆಹಿಡಿಯಲು ಮುಂದಾದ ದೃಶ್ಯ ಮಾಧ್ಯಮದವರನ್ನು ಶಾಸ ಕರು ಹಾಗೂ ಅಧಿಕಾರಿಗಳು ತಡೆಹಿಡಿದರು. ಸಭೆಯಲ್ಲಿ ಡೀಸಿ ಡಾ.ವೆಂಕಟೇಶ್‌, ಜಿಪಂ ಸಿಇಒ ಯಾಲಕ್ಕೀಗೌಡ, ಎಸ್ಪಿ ಪರಶುರಾಮ,  ಡಿಎಚ್‌ಒ ಡಾ.ಮಂಚೇಗೌಡ, ಶಾಸಕರಾದ ಪುಟ್ಟರಾಜು,  ಶ್ರೀನಿವಾಸ್‌, ಡಾ.ಅನ್ನದಾನಿ, ಸುರೇಶ್‌ ಗೌಡ, ರವೀಂದ್ರ ಶ್ರೀಕಂಠಯ್ಯ, ಎಂಎಲ್‌ಸಿ ಅಪ್ಪಾಜಿಗೌಡ ಭಾಗವಹಿಸಿದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

festcide

Mandya: ಭ್ರೂಣ ಹತ್ಯೆ ತಲೆಮರೆಸಿಕೊಂಡಿದ್ದ 12 ಆರೋಪಿಗಳ ಬಂಧನ

Malavalli: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

Malavalli: ಸಾರಿಗೆ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತ್ಯು…

Bommai

Governer Procicution: ಹೈಕೋರ್ಟ್‌ ತೀರ್ಪಿನ ಮೇಲೆ ಸಿಎಂ ಸ್ಥಾನ ನಿರ್ಧಾರ: ಬೊಮ್ಮಾಯಿ

suicide (2)

Mandya; ರೋಡ್ ರೋಮಿಯೋಗಳ ಕಿರುಕುಳ: 14 ವರ್ಷದ ವಿದ್ಯಾರ್ಥಿನಿ ಆತ್ಮಹ*ತ್ಯೆ

1-wwwww

BJP 12 ವರ್ಷಗಳಿಂದ ತುಕ್ಕು ಹಿಡಿದಿದ್ದ ಪ್ರಕರಣಕ್ಕೆ ಜೀವ ನೀಡಿದೆ: ಸಚಿವ ಮಧು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.