ಅಪೌಷ್ಟಿಕ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಣೆ

ಜಿಲ್ಲೆಯ 4022 ಮಕ್ಕಳಿಗೆ ಪೌಷ್ಟಿಕ ಆಹಾರ ಸರಬರಾಜು

Team Udayavani, May 28, 2020, 3:41 PM IST

28-May-15

ವಿಜಯಪುರ: ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಅಪೌಷ್ಟಿಕ ಮಕ್ಕಳಿಗೆ ಅಗ್ರೋಕಾಪ್‌ ಸಂಸ್ಥೆ ಸಹಯೋಗದಲ್ಲಿ ಪೌಷ್ಟಿಕ ಆಹಾರ ಕಿಟ್‌ ವಿತರಿಸಿದರು

ವಿಜಯಪುರ: ಕೋವಿಡ್ ತಡೆಗಟ್ಟುವಲ್ಲಿ ಗಂಭೀರ ಸಮಸ್ಯೆ ಎದುರಿಸುತ್ತಿದ್ದೇವೆ. ಇದೇ ವೇಳೆ ಮಕ್ಕಳಲ್ಲಿ ಅಪೌಷ್ಟಿಕತೆ ಸಮಸ್ಯೆ ನೀಗಲು ರಾಜ್ಯದಲ್ಲಿ ವಿಜಯಪುರ ಸೇರಿದಂಥೆ ನಾಲ್ಕು ಜಿಲ್ಲೆಗಳಲ್ಲಿ ಮಕ್ಕಳ ಅಪೌಷ್ಟಿಕತೆ ನಿವಾರಣೆಗೆ ಅಗ್ರೋಕಾಪ್‌ ಸಂಸ್ಥೆ ಸಹಯೋಗದಲ್ಲಿ ನಾನು ನಿರ್ವಹಿಸುವ ಮಹಿಳಾ-ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 1.50 ಕೋಟಿ ರೂ. ಮೌಲ್ಯದ ಪೌಷ್ಟಿಕ ಆಹಾರ ವಿತರಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ಬುಧವಾರ ನಗರದ ಜಿಪಂ ಸಭಾಂಗಣದಲ್ಲಿ ಅಗ್ರೋಕಾಪ್‌ ಸಂಸ್ಥೆ ಸಹಯೋಗದಲ್ಲಿ ಅಪೌಷ್ಟಿಕ ಮಕ್ಕಳಿಗೆ ಸಿದ್ಧ ಪೌಷ್ಟಿಕ ಆಹಾರ ವಿತರಣಾ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರ ವಿತರಣೆ ಮಾಡಿ ಮಾತನಾಡಿದ ಅವರು, ಸದರಿ ಸಂಸ್ಥೆ ವಿಜಯಪುರ ಜಿಲ್ಲೆ ಒಂದರಲ್ಲೇ 4022 ಮಕ್ಕಳಿಗೆ ಪೌಷ್ಟಿಕ ಆಹಾರ ಪೂರೈಸುತ್ತಿದೆ. ಬೆಳಗಾವಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಸುಮಾರು 1.50 ಕೋಟಿ ರೂ. ಮೌಲ್ಯದ ಪೌಷ್ಟಿಕ ಆಹಾರವನ್ನು ನಾನು ನಿರ್ವಹಿಸುತ್ತಿರುವ ಖಾತೆಗಳಲ್ಲಿ ಒಂದಾದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸಿದ್ಧ ಆಹಾರವನ್ನು ವಿತರಿಲಾಗುತ್ತಿದೆ ಎಂದು ವಿವರಿಸಿದರು.

ವಿಜಯಪುರ ಜಿಲ್ಲೆಯಲ್ಲಿ ವಿಪರೀತ ಕಡಿಮೆ ತೂಕ ಹೊಂದಿರುವ 3820 ಮಕ್ಕಳು, ಅಪೌಷ್ಟಿಕತೆಯಿಂದ ಬಳಲುತ್ತಿರುವ 202 ಮಕ್ಕಳು ಸೇರಿದಂತೆ ಗಡಿಭಾಗದ ಮಕ್ಕಳಿಗೆ 30 ಪ್ಯಾಕ್‌ಗಳ 4022 ಮಕ್ಕಳಿಗೆ 1.42 ಲಕ್ಷ ಸ್ಯಾಚೆಟ್‌ಗಳನ್ನು ಮನೆಮನೆಗೆ ತೆರಳಿ ವಿತರಿಸುವ ಕಾರ್ಯ ಆರಂಭಗೊಂಡಿದೆ. 30 ದಿನಗಳ ಕಾಲ ಸೇವನೆಯ ನಂತರ ಮಕ್ಕಳಲ್ಲಿ ಪೌಷ್ಟಿಕತೆ ವೃದ್ಧಿಯಾದ ಬಗ್ಗೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಂದ ವರದಿ ಪಡೆಯಲಾಗುತ್ತದೆ. ಪೌಷ್ಟಿಕತೆ ವೃದ್ಧಿಯಾಗಿದ್ದುಮ ಕಂಡುಬಂದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ವಿಸ್ತರಿಸುವ ಕಾರ್ಯ ಮಾಡಲಾಗುವುದು ಎಂದು ಹೇಳಿದರು.

ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ 30 ಸ್ಯಾಚೆಟ್‌ಗಳ ಒಂದು ಕಿಟ್‌ ನೀಡಲಾಗುತ್ತಿದ್ದು, 1 ಸ್ಯಾಚೆಟ್‌ ಪ್ಯಾಕ್‌ ತೆರೆದ ನಂತರ 24 ಗಂಟೆಯೊಳಗೆ ಬಳಕೆ ಮಾಡಬೇಕು. ಸಿಹಿ ಪದಾರ್ಥಗಳಿಂದ ಕೂಡಿರುವ ಈ ಪೌಷ್ಟಿಕ ಆಹಾರವನ್ನು ಸೇವಿಸುವಲ್ಲಿ ಮಕ್ಕಳು ಕೂಡ ಆಸಕ್ತಿ ತೋರಲಿದ್ದು, ಇದರಿಂದ ಅಪೌಷ್ಟಿಕ ಮಕ್ಕಳ ಆರೋಗ್ಯ ವೃದ್ಧಿಸುವ ವಿಶ್ವಾಸವಿದೆ ಎಂದರು. ಕೋವಿಡ್‌-19 ಸಂದರ್ಭ ಇರುವ ಹಿನ್ನೆಲೆಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಮುಚ್ಚಲಾಗಿದೆ. ಅಂಗನವಾಡಿಯಲ್ಲಿ ದಾಖಲಾತಿ ಪಡೆದಿರುವ ಮಕ್ಕಳಿಗೆ ಅಂಗನವಾಡಿ ಸಹಾಯಕಿಯರನ್ನು ಬಳಸಿಕೊಂಡು ಮನೆಮನೆಗೆ ತೆರಳಿ ರೇಷನ್‌ ನೀಡಲಾಗುತ್ತಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಂದ ಉತ್ತಮ ಪ್ಯಾಕೆಜ್‌ ಘೋಷಣೆ ಆಗಿದ್ದು, ಜನರಿಗೆ ಯಾವುದೇ ತೊಂದರೆ ಆಗದಂತೆ ಉತ್ತಮ ಕಾರ್ಯ ನಿರ್ವಹಿಸುವುದು ನಮ್ಮ ಜವಾಬ್ದಾರಿ ಎಂದರು.

ಕೋವಿಡ್‌-19 ಸಾಂಕ್ರಾಮಿಕ ರೋಗಕ್ಕೆ ಭಯಪಡದೆ ಕೋವಿಡ್ ಜತೆಗೆ ಬದುಕುವುದನ್ನು ಕಲಿಯಬೇಕಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್, ಸ್ಯಾನಿಟೈಜರ್‌ ಹಾಗೂ ಭಾರತೀಯ ಆಹಾರ ಪದ§ತಿಯನ್ನು ಬಳಕೆ ಮಾಡಿಕೊಂಡು ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳುವುದರಿಂದ ಕೋವಿಡ್‌-19 ನಂತಹ ಮಹಾಮಾರಿಯನ್ನು ನಾಶಮಾಡಲು ಸಾಧ್ಯ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವೈ.ಎಸ್‌ ಪಾಟೀಲ, ಎಸ್ಪಿ ಅನುಪಮ್‌ ಅಗರವಾಲ್‌, ಜಿಪಂ ಸಿಇಒ ಗೋವಿಂದ ರೆಡ್ಡಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಸ್‌.ಆರ್‌.ಆಲಗೂರ, ಆಗ್ರೋ ಕಾಪ್‌ ಸಂಸ್ಥೆಯ ಬಿ.ಸಿದ್ದಾರ್ಥ, ಉದ್ಯಮಿ ಸಂದೇಶ ಪಾಟೀಲ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಿರ್ಮಲಾ ಸುರಪುರ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Vijayapura: 2-year-old child passed away after falling into Raj canal

Vijayapura: ರಾಜಕಾಲುವೆಗೆ ಬಿದ್ದು 2 ವರ್ಷದ ಮಗು ಸಾವು

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Vijayapura: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಯತ್ನಾಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

I don’t know about Kharge returned plot : Minister MB Patil

Vijayapura: ಖರ್ಗೆ ಕುಟುಂಬ ನಿವೇಶನ ವಾಪಸ್ ಕೊಟ್ಟಿದ್ದು ಗೊತ್ತಿಲ್ಲ: ಸಚಿವ ಎಂ.ಬಿ.ಪಾಟೀಲ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.