ಪಾಲಿಕೆ ವ್ಯಾಪ್ತಿ ಆಸ್ತಿ ತೆರಿಗೆ ಶೇ.5 ರಿಯಾಯಿತಿ


Team Udayavani, May 29, 2020, 7:03 AM IST

palike-vyapti

ತುಮಕೂರು: ಕೊರೊನಾ ಹಿನ್ನೆಲೆಯಲ್ಲಿ ಆಸ್ತಿ ತೆರಿಗೆ ಪಾವತಿಸುವವರಿಗೆ ಶೇ.5ರಷ್ಟು ರಿಯಾಯಿತಿ ಯನ್ನು ನೀಡಿ ಸರ್ಕಾರ ಆದೇಶ ನೀಡಿದೆ ಎಂದು ತುಮಕೂರು ಮಹಾನಗರ ಪಾಲಿಕೆ ಮೇಯರ್‌ ಫ‌ರೀದಾಬೇಗಂ ಹೇಳಿದರು. ಪತ್ರಿಕಾ  ಗೋಷ್ಠಿಯಲ್ಲಿ ಮಾತನಾಡಿದ ಅವರು, ಆಸ್ತಿ ತೆರಿಗೆ ಪಾವತಿಗೆ ಮೇ ಅಂತ್ಯ  ದವರೆಗೆ ಅವಕಾಶ ನೀಡಲಾಗಿತ್ತು, ಈಗ ಅದನ್ನು ಜುಲೈ ಅಂತ್ಯದವರೆಗೆ ತೆರಿಗೆ ಪಾವ  ತಿಗೆ ಅವಕಾಶ ನೀಡಿದ್ದು, ಸಾರ್ವಜನಿಕರು ಈ ಯೋಜನೆಯ  ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.

ಸರ್ಕಾರಕ್ಕೆ ಮನವಿ: ಪ್ರತಿ ಮೂರು ವರ್ಷಕ್ಕೆ ಆಸ್ತಿ ತೆರಿಗೆ ಹೆಚ್ಚಳವಾಗಬೇಕಿದ್ದು ಅದರಂತೆ ಸ್ಥಾಯಿ ಸಮಿತಿ ಅಧ್ಯಕ್ಷರೊಂದಿಗೆ ಚರ್ಚಿಸಿ ಒಪ್ಪಿಕೊಂಡಿದ್ದೇವೆ. ವಿಡಿಯೋ ಕಾನ್ಫರೆನ್ಸ್‌ನಲ್ಲಿ ಸದಸ್ಯರು ಒತ್ತಾಯ ಮಾಡಿದ್ದರು. ಶಾಸಕರು, ಸಂಸದರು ಈ ಬಗ್ಗೆ ಮಾತನಾಡುವ ಭರವಸೆ ನೀಡಿದ್ದರು, ಶೇ.15ರಷ್ಟು ತೆರಿಗೆ ಹೆಚ್ಚಳವನ್ನು ಮುಂದೂಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ಹೇಳಿದರು.

ಸರ್ಕಾರದಿಂದ ಸೌಲಭ್ಯ ಸಿಕ್ಕಿಲ್ಲ: ತುಮಕೂರು ನಗರದಲ್ಲಿ ಸೀಲ್‌ಡೌನ್‌ ಪ್ರದೇಶಕ್ಕೆ ಯಾವುದೇ ಸೌಲಭ್ಯ ನೀಡಿಲ್ಲ, ಅಲ್ಲಿರುವವರ ಬಗ್ಗೆ ಮಾಹಿತಿ ಸಂಗ್ರಹಿಸಿದ್ದಾರೆ. ಆದರೆ ಅಲ್ಲಿರುವವರಿಗೆ ಕನಿಷ್ಠ ಊಟವನ್ನು ಪೂರೈಕೆ ಮಾಡಲಿಲ್ಲ ಈ  ವರೆಗೆ ಸರ್ಕಾರದಿಂದ ಪಾಲಿಕೆಗೆ ಯಾವುದೇ ಸೌಲಭ್ಯ ದೊರಕಿಲ್ಲ ಎಂದು ಆರೋಪಿಸಿದರು.

ಸ್ಪಂದಿಸದ ಆಯುಕ್ತರು: ಕೊರೊನಾದ ಕಾರಣದಿಂದಾಗಿ ಅಧಿಕಾರಿಗಳಿಗೆ ಪಾಲಿಕೆ ಸದಸ್ಯರು ಸಹಕಾರ ನೀಡುತ್ತಿದ್ದಾರೆ ಆದರೆ ಆಯುಕ್ತರಿಗೆ ಮೇಯರ್‌ ಕರೆ ಮಾಡಿದರೂ ಪ್ರತಿಕ್ರಿಯಿಸುವುದಿಲ್ಲ ಇದರಿಂದಾಗಿ ಕೆಲಸ ಮಾಡಲು ಆಗುತ್ತಿಲ್ಲ  ಎಂದರು. ಉಪ ಮೇಯರ್‌ ಶಶಿಕಲಾ, ಮಹೇಶ್‌, ಕುಮಾರ್‌, ಇನಾಯತ್‌ವುಲ್ಲಾಖಾನ್‌ ಇದ್ದರು.

ಪಾಲಿಕೆಗೆ ಅನುದಾನ ಬಂದಿಲ್ಲ: ನಗರದಲ್ಲಿ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಸೀಲ್‌ಡೌನ್‌ ಮಾಡಿರುವ ಪ್ರದೇಶದಲ್ಲಿ ವಾಸಿಸುವವರಿಗೆ ದುಡಿಮೆ ಇಲ್ಲ, ಅಲ್ಲಿರುವವರಿಗೆ ಅಗತ್ಯ ಸೌಲಭ್ಯಗಳನ್ನು ನೀಡದೇ ಹೋದರೆ ಜೀವನ ನಡೆಸುವುದು ಹೇಗೆ? ದುಡಿಮೆ ಇಲ್ಲದ ಮೇಲೆ ಜನರು ಬದುಕುವುದು ಹೇಗೆ ಪ್ರಶ್ನಿಸಿರುವ ಮೇಯರ್‌, ಜನರು ಸುಮ್ಮನೆ ಜನಪ್ರತಿನಿಧಿಗಳ ಮೇಲೆ ಆರೋಪಿಸುತ್ತಿದ್ದಾರೆ. ಕೊರೊನಾ ಸಂದರ್ಭದಲ್ಲಿ ಯಾವುದೇ ಅನುದಾನವನ್ನು ಪಾಲಿಕೆಗೆ ಮಾತ್ರ ಅಲ್ಲ, ಜಿಲ್ಲಾಡಳಿತಕ್ಕೂ ನೀಡಿಲ್ಲ ಎಂದು ಮೇಯರ್‌ ಹೇಳಿದರು.

ಆಯುಕ್ತರು ಪಾಲಿಕೆಯಲ್ಲಿ ಹೆಚ್ಚಾಗಿ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ಕೆಳಹಂತದ ಅಧಿಕಾರಿಗಳು ಸಮಯ ವ್ಯರ್ಥ ಮಾಡುತ್ತಿದ್ದು, ಪಾಲಿಕೆ ಆಡಳಿತ ಸರಾಗವಾಗಿಲ್ಲ. ಸ್ಲಂಗಳಲ್ಲಿ ಯುಜಿಡಿ ಕೆಲಸ ನಡೆಯುತ್ತಿಲ್ಲ. ಪಾಲಿಕೆ ಸದಸ್ಯರು ಸಂಪರ್ಕಿಸಿದರೂ ಆಯುಕ್ತರು ಸಿಗುತ್ತಿಲ್ಲ.
-ಫ‌ರೀದಾ ಬೇಗಂ, ಮೇಯರ್‌

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kunigal: ಗೆಳತಿಯರ ಜೊತೆ ಆಟವಾಡುವ ವೇಳೆ ಹಾವು ಕಚ್ಚಿ ಬಾಲಕಿ ಮೃತ್ಯು

Kunigal: ಗೆಳತಿಯರ ಜೊತೆ ಆಟವಾಡುವ ವೇಳೆ ಹಾವು ಕಚ್ಚಿ ಬಾಲಕಿ ಮೃತ್ಯು

Pavagada; ವಾಹನ ಸಹಿತ ವ್ಯಕ್ತಿ ಸಜೀವದಹನ

Pavagada; ವಾಹನ ಸಹಿತ ವ್ಯಕ್ತಿ ಸಜೀವದಹನ

Tumakur

Wage Workers: ತುಮಕೂರಿನ ಶುಂಠಿ ಕ್ಯಾಂಪ್‌ನಲ್ಲಿ ಜೀತ ಪದ್ಧತಿ ಜೀವಂತ!

1-kunigal

Kunigal: ಕೌಟುಂಬಿಕ ಕಲಹ; ಗೃಹಣಿ ಆತ್ಮಹತ್ಯೆ

Laxmi-Minister

Reality Check: ʼನಮ್ಮ ಅತ್ತೆ ಹೊಡೆಯುತ್ತಿದ್ದಾರೆ ಸಹಾಯ ಮಾಡುವಿರಾʼ ಎಂದ ಸಚಿವೆ ಲಕ್ಷ್ಮೀ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.