
ರೈತರಿಗೆ ನರೇಗಾ ಯೋಜನೆ ಮಾಹಿತಿ ತಿಳಿಸಿ
ಅಧಿಕಾರಿಗಳಿಗೆ ಶಾಸಕ ಎಂ.ಎಸ್. ಸೋಮಲಿಂಗಪ್ಪ ಸೂಚನೆ
Team Udayavani, May 30, 2020, 5:40 PM IST

ಸಾಂದರ್ಭಿಕ ಚಿತ್ರ
ಸಿರುಗುಪ್ಪ: ಅಧಿಕಾರಿಗಳು ನರೇಗಾ ಯೋಜನೆ ಸೌಲಭ್ಯಗಳ ಬಗ್ಗೆ ರೈತರಿಗೆ ಮಾಹಿತಿ ನೀಡಿ ರೈತರಿಗೆ ಅವಶ್ಯವಿರುವ ಬದು ನಿರ್ಮಾಣ, ಕೃಷಿಹೊಂಡ, ತೋಟಗಾರಿಕೆ ಮುಂತಾದ ಸೌಲಭ್ಯಗಳನ್ನು ಪಡೆದು ಆರ್ಥಿಕವಾಗಿ ಅಭಿವೃದ್ಧಿ ಹೊಂದುವಂತೆ ಪ್ರರೇಪಿಸಬೇಕೆಂದು ಶಾಸಕ ಎಂ.ಎಸ್. ಸೋಮಲಿಂಗಪ್ಪ ತಿಳಿಸಿದರು.
ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತಾಪಂ ಸಾಮಾನ್ಯ ಸಭೆಯಲ್ಲಿ ಮಾತನಾಡಿ, ತಾಲೂಕಿನಲ್ಲಿ ಕೃಷಿ ಹೊಂಡ ಹೊಂದಿದ ರೈತರು ತೋಟಗಾರಿಕೆ ಬೆಳೆಗಳಾದ ಅಂಜೂರ, ಪಪ್ಪಾಯಿ, ದಾಳಿಂಬೆ ಮುಂತಾದ ಬೆಳೆಗಳನ್ನು ಅಧಿಕವಾಗಿ ಬೆಳೆಯಲು ತೋಟಗಾರಿಕೆ ಅಧಿಕಾರಿಗಳು ಮಾರ್ಗದರ್ಶನ ನೀಡಬೇಕೆಂದು ತೋಟಗಾರಿಕೆ ಅಧಿಕಾರಿ ವಿಶ್ವನಾಥರಿಗೆ ತಿಳಿಸಿದರು.
2019-20 ನೇ ಸಾಲಿನಲ್ಲಿ 120 ಹೆಕ್ಟೇರ್ ಪ್ರದೇಶದಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ವಿವಿಧ ತರದ ಹಣ್ಣುಗಳನ್ನು ಬೆಳೆಯಲು ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದು, 2020-21ನೇ ಸಾಲಿನಲ್ಲಿ ಅಂದಾಜು 150 ಹೆಕ್ಟೇರ್ ಪ್ರದೇಶದಲ್ಲಿ ಹಣ್ಣಿನ ಬೆಳೆಯನ್ನು ಬೆಳೆಯಲು ರೈತರನ್ನು ಪ್ರರೇಪಿಸಲಾಗಿದೆ. ಅಂಜೂರ, ಪಪ್ಪಾಯ, ದಾಳಿಂಬೆ ಮುಂತಾದ ಹಣ್ಣಿನ ಬೆಳೆಗಳಿಗೆ ಶೇ. 90ರಷ್ಟು ಪ್ರೋತ್ಸಾಹ ದನವನ್ನು ನೀಡಲಾಗುತ್ತಿದೆ. ನಮ್ಮ ತೋಟಗಾರಿಕೆ ಇಲಾಖೆಯಿಂದಲೂ, ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಕೃಷಿಹೊಂಡ, ಗಿಡನೆಡುವ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಕೋವಿಡ್-19ಗೆ ಸಂಬಂಧಿಸಿದಂತೆ ವಿವಿಧ ಭಾಗಗಳಿಂದ ತಾಲೂಕಿಗೆ ಬಂದಿದ್ದ 1120 ಜನರನ್ನು ಕ್ವಾರಂಟೈನ್ ಮಾಡಲಾಗಿತ್ತು. ಅದರಲ್ಲಿ 777ಜನರ ಆರೋಗ್ಯ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದಿದ್ದರಿಂದ ಅವರ ಮನೆಗಳಿಗೆ ಕಳುಹಿಸಲಾಗಿದೆ. ಇನ್ನುಳಿದ 343 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ನಮ್ಮ ಕಂದಾಯ, ಆರೋಗ್ಯ, ಆಶಾ, ಅಂಗನವಾಡಿ ಕಾರ್ಯಕರ್ತರು ಹೊರಗಿನಿಂದ ಬಂದವರ ಮಾಹಿತಿಯನ್ನು ಕಲೆಹಾಕುವ ಕಾರ್ಯಮಾಡುತ್ತಿದ್ದಾರೆ ಎಂದು ಟಿ.ಎಚ್.ಒ. ಸುರೇಶಗೌಡ ತಿಳಿಸಿದರು.
ತಾಪಂ ಸದಸ್ಯ ಪಿಡ್ಡಯ್ಯ, ತಾಪಂ ಅಧ್ಯಕ್ಷೆ ದೇವಮ್ಮ, ಸ್ಥಾಯಿ ಸಮಿತಿ ಅಧ್ಯಕ್ಷ ಶಂಕ್ರಪ್ಪ, ತಾಪಂ ಇ.ಒ. ಶಿವಪ್ಪ ಸುಬೇದಾರ್, ಜಿಪಂ ಸದಸ್ಯ ಕೋಟೇಶ್ವರರೆಡ್ಡಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ತಾಪಂ ಸದಸ್ಯರು, ಗ್ರಾಪಂ ಪಿಡಿಒಗಳು ಇದ್ದರು.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Bellary ಜಿಲ್ಲಾಸ್ಪತ್ರೆಗೆ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Ballary; ಐವರು ಬಾಣಂತಿಯರ ಕುಟುಂಬಗಳಿಗೆ ಪರಿಹಾರ 5 ಲಕ್ಷಕ್ಕೇರಿಸಿದ ಸಿಎಂ

Ballari; ಬಾಣಂತಿಯರ ಸಾ*ವು: ಲೋಕಾದಿಂದ ಸುಮೋಟೋ ಕೇಸ್

BIMS Hospital: ಶ್ರೀರಾಮುಲು ನೇತೃತ್ವದಲ್ಲಿ ಸತ್ಯಾಗ್ರಹ; ಸ್ಥಳಕ್ಕೆ ಆರೋಗ್ಯ ಸಚಿವ ಭೇಟಿ
MUST WATCH

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.