ತತ್‌ಕ್ಷಣ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಅಂಗಾರ

ಪ್ರಾಕೃತಿಕ ವಿಕೋಪ ಸಂಬಂಧಿ ತಾಲೂಕು ಮಟ್ಟದ ಸಭೆ

Team Udayavani, May 31, 2020, 5:45 AM IST

ತತ್‌ಕ್ಷಣ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಅಂಗಾರ

ಸುಳ್ಯ: ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿ ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ತಾಲೂಕು ಮತ್ತು ಸ್ಥಳೀಯಾಡಳಿತ ಅಧಿಕಾರಿಗಳು ತತ್‌ಕ್ಷಣ ಕಾರ್ಯಪ್ರವೃತ್ತರಾಗಬೇಕು ಎಂದು ಶಾಸಕ ಎಸ್‌.ಅಂಗಾರ ಸೂಚಿಸಿದರು.

ತಾ.ಪಂ.ಸಭಾಂಗಣದಲ್ಲಿ ಮೇ 29ರಂದು ತನ್ನ ಅಧ್ಯಕ್ಷತೆಯಲ್ಲಿ ಜರಗಿದ ತಾಲೂಕು ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು.

ರಸ್ತೆ ಬದಿಯ ಅಪಾಯಕಾರಿ ಮರ, ಗೆಲ್ಲು ತೆರವು, ಚರಂಡಿ ದುರಸ್ತಿ ಸಹಿತ ಪೂರ್ವಭಾವಿ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಮರ ತೆರವು ಸಂಬಂಧಿಸಿ 11 ದೂರುಗಳು ಬಂದಿದ್ದು, ಆ ಬಗ್ಗೆ ಕ್ರಮ ಜರಗಿಸಲು ಅರಣ್ಯ ಇಲಾಖೆಗೆ ನಿರ್ದೇಶಿಸಲಾಯಿತು. ಮಳೆ ಹಾನಿ ಪರಿಹಾರ ಕಾಮಗಾರಿ ಪ್ರಗತಿ ಬಗ್ಗೆ ಎಂಜಿನಿಯರ್‌ ಮಾಹಿತಿ ನೀಡಿದರು.

ಭಾಗಶಃ ಉಲ್ಲೇಖ ಬೇಡ
ಪ್ರಾಕೃತಿಕ ವಿಕೋಪದಿಂದ ಮನೆಗೆ ಭಾಗಶಃ ಹಾನಿ ಎಂದು ಅಧಿಕಾರಿಗಳು ವರದಿ ಸಲ್ಲಿಸಿದರೆ ಫಲಾನುಭವಿಗೆ ಅಲ್ಪ ಪರಿಹಾರ ಮಾತ್ರ ಸಿಗುತ್ತದೆ. ಗೋಡೆ, ಅಡಿಪಾಯ ಹಾನಿ ಉಂಟಾದರೆ ಹೊಸ ಮನೆಯೇ ಕಟ್ಟಬೇಕಾಗುತ್ತದೆ. ಹಾಗಾಗಿ ಭಾಗಶಃ ಎಂದು ವರದಿ ಸಲ್ಲಿಸದೆ ಪೂರ್ಣ ಹಾನಿ ಎಂದು ನಮೂದಿಸಿ ಎಂದು ಶಾಸಕರು ಸೂಚಿಸಿದರು. ಬೆಳೆ ನಷ್ಟ ಪರಿಹಾರ ಕೂಡ ಸಮರ್ಪಕವಾಗಿಲ್ಲದ ಕಾರಣ ಅದನ್ನು ಪುನರ್‌ರೂಪಿಸುವಂತೆ ಸಂಬಂಧಿಸಿದ ಸಚಿವರ ಗಮನಕ್ಕೆ ತರಲಾಗಿದೆ ಎಂದರು.

ಮನೆ ನಿರ್ಮಾಣಕ್ಕೆ ಅರಣ್ಯ ಅಡ್ಡಿ
ಕಲ್ಮಕಾರಿನಲ್ಲಿ ಪ್ರಾಕೃತಿಕ ವಿಕೋಪದಿಂದ ಹಾನಿ ಉಂಟಾದ 9 ಮನೆಗಳಿಗೆ ಸೂರು ಒದಗಿಸಲು ಅರಣ್ಯ ಭೂಮಿ ಅಡ್ಡಿ ಉಂಟಾಗಿದೆ ಎಂದು ತಹಶೀಲ್ದಾರ್‌ ಹೇಳಿದರು. ಈ ಬಗ್ಗೆ ಅರಣ್ಯ ಅಧಿಕಾರಿ ಗಳಿಂದ ಮಾಹಿತಿ ಪಡೆದ ಶಾಸಕರು, ಉನ್ನತ ಅಧಿಕಾರಿಗಳ ಜತೆ ಚರ್ಚಿಸುವುದಾಗಿ ಹೇಳಿದರು.

ವೇದಿಕೆಯಲ್ಲಿ ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಸ್ಥಾಯೀ ಸಮಿತಿ ಅಧ್ಯಕ್ಷೆ ಜಾಹ್ನವಿ ಕಾಂಚೋಡು, ತಹಶೀಲ್ದಾರ್‌ ಅನಂತಶಂಕರ, ಇಒ ಭವಾನಿಶಂಕರ ಉಪಸ್ಥಿತರಿದ್ದರು.

ಸಣ್ಣಪುಟ್ಟ ಸಮಸ್ಯೆಗಳನ್ನು ಸ್ವಯಂ ನಿಭಾಯಿಸೋಣ
ಸೇತುವೆ, ಕಿಂಡಿ ಅಣೆಕಟ್ಟಿನಲ್ಲಿ ಮರ, ಕಸ ಕಡ್ಡಿ ತುಂಬಿದ್ದರೆ ಅದನ್ನು ತೆರವುಗೊಳಿಸಿ ಮಳೆ ನೀರು ಹರಿಯಲು ವ್ಯವಸ್ಥೆ ಕಲ್ಪಿಸಬೇಕು. ಕಿಂಡಿ ಅಣೆಕಟ್ಟಿಗೆ ಸಂಬಂಧಿಸಿ ಅದರ ಫಲಾನುಭವಿಗಳು ಆ ಕೆಲಸ ನಿರ್ವಹಿಸಬೇಕು. ಪರಿಹಾರ ಸಾಧ್ಯತೆ ಇರುವ ಸಮಸ್ಯೆಗಳಿಗೆ ಜನರೇ ಸ್ಪಂದಿಸುವ ಮನಃಸ್ಥಿತಿ ರೂಢಿಸಿಕೊಳ್ಳಬೇಕು ಎಂದು ಶಾಸಕ ಎಸ್‌. ಅಂಗಾರ ಹೇಳಿದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.