ವಾರಿಯರ‍್ಸ್‌ ಗುಣಮುಖ: ಪುಷ್ಪ ಗೌರವ


Team Udayavani, May 31, 2020, 5:28 AM IST

varriors-gunamukja

ಬೆಂಗಳೂರು: ಸೋಂಕು ತಗುಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುಲಿಕೇಶಿನಗರ ಸಂಚಾರ ಠಾಣೆ ಹೆಡ್‌ ಕಾನ್‌ಸ್ಟೆಬಲ್‌ ಗುರುಮೂರ್ತಿ ಇದೀಗ ಸಂಪೂರ್ಣವಾಗಿ ಗುಣಮುಖರಾಗಿ ಶನಿವಾರ ಬಿಡುಗಡೆಯಾದರು. ಸಂಜೆ 4.30ರಲ್ಲಿ  ವಿಕ್ಟೋರಿಯಾ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಯಿತು.

ಈ ವೇಳೆ ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌, ಸಂಚಾರ ವಿಭಾಗದ ಜಂಟಿ ಆಯುಕ್ತ ಡಾ. ಬಿ.ಆರ್‌. ರವಿಕಾಂತೇ  ಗೌಡ, ಡಿಸಿಪಿ ನಾರಾಯಣ ಹಾಗೂ ಹಿರಿಯ ಪೊಲೀಸ್‌  ಅಧಿಕಾರಿ ಮತ್ತು ಸಿಬ್ಬಂದಿ ಪುಷ್ಪವೃಷ್ಟಿ ಮೂಲಕ ಚಪ್ಪಾಳೆ ತಟ್ಟಿ ಸ್ವಾಗತಿಸಿದರು. ಹಿರಿಯ ಅಧಿಕಾರಿಗಳು ತೋರಿದ ಕಾಳಜಿಗೆ ಹೆಡ್‌ ಕಾನ್‌ಸ್ಟೆಬಲ್‌ ಗುರುಮೂರ್ತಿ ಗೌರವ ವಂದನೆ ಸಲ್ಲಿಸಿದ್ದು, ಭಾವುಕರಾದರು.

ಬಳಿಕ ಇಲಾಖೆಯ ವಾಹನದಲ್ಲಿಯೆ ಮನೆಗೆ ಕರೆದೊಯ್ಯಲಾಯಿತು.  10 ದಿನದಲ್ಲಿ ಗುಣಮುಖ: ಹೆಗಡೆನಗರದ ಪೊಲೀಸ್‌ ವಸತಿ ಗೃಹದಲ್ಲಿ ಕುಟುಂಬದ ಜತೆ ನೆಲೆಸಿರುವ ಗುರುಮೂರ್ತಿ ಪುಲಿಕೇಶಿನಗರ ಸಂಚಾರ ಠಾಣೆಯಲ್ಲಿ ಹೆಡ್‌ ಕಾನ್‌ಸ್ಟೆಬಲ್‌  ಆಗಿದ್ದಾರೆ. ಡಿಜಿಪಿ ಆದೇಶದ ಹಿನ್ನೆಲೆಯಲ್ಲಿ ಕೋವಿಡ್‌ 19 ಪರೀಕ್ಷೆಗೆ ಒಳ  ಪಡಿಸ ಲಾಗಿತ್ತು. ಮೇ 20ರಂದು ಸೋಂಕು ತಗುಲಿರುವು ದು ದೃಢಪಟ್ಟಿತ್ತು.

ಬಳಿಕ ವಿಕ್ಟೋರಿಯಾ ಆಸ್ಪತ್ರೆ  ಯಲ್ಲಿ ಚಿಕಿತ್ಸೆಗೆ ಒಳಪಡಿಸಿದ್ದು, 10 ದಿನದಲ್ಲಿಯೇ ಗುಣಮುಖರಾಗಿದ್ದಾರೆ. ಸೋಂಕಿನ ಲಕ್ಷಣ ಕಾಣಿಸಿಕೊಂಡ ಕೂಡಲೇ ಚಿಕಿತ್ಸೆಗೆ ದಾಖಲಿಸಲಾಯಿತು. ಇದೀಗ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಪಡಿಸಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದರು.

ಪ್ರಾಥಮಿಕ ಸಂಪರ್ಕಿತರಿಗೆ ಸೋಂಕಿಲ್ಲ: ಸಾರಿಗೆ ವ್ಯವಸ್ಥೆ ಇಲ್ಲದಿದ್ದರಿಂದ ಮಹಿಳಾ ಕಾನ್‌ಸ್ಟೆಬಲ್‌ ವೊಬ್ಬರನ್ನು ಹೆಣ್ಣೂರಿನಲ್ಲಿರುವ ಪೇಯಿಂಗ್‌ ಗೆಸ್ಟ್‌ಗೆ ಡ್ರಾಪ್‌ ಮಾಡಿದ್ದರು. ಈ ವೇಳೆ ಗುರುಮೂರ್ತಿಗೆ ಸೋಂಕು ತಗುಲಿರುವುದು  ಗೊತ್ತಿರಲಿಲ್ಲ. ಮರು ದಿನ ವರದಿ ಬಂದಿದ್ದು ಸೋಂಕು ತಗುಲಿರು ವುದು ದೃಢ ಪಟ್ಟಿತ್ತು.

ಬಳಿಕ ಪ್ರಾಥಮಿಕ ಸಂಪರ್ಕ ಹೊಂದಿದ್ದ ಮಹಿಳಾ ಕಾನ್‌ಸ್ಟೆಬಲ್‌ ಹಾಗೂ ಪೊಲೀಸ್‌ ಇನ್‌ ಸ್ಪೆಕ್ಟರ್‌ ಸೇರಿ 20 ಮಂದಿಯನ್ನು ಗುರುತಿಸಿ ಕೋವಿಡ್‌ 19 ಪರೀಕ್ಷೆಗೆ ಒಳಪಡಿಸಿ, ಕ್ವಾರಂಟೈನ್‌ ಮಾಡಲಾಗಿತ್ತು.  ಎಲ್ಲರಿಗೂ ನೆಗೆಟಿವ್‌ ವರದಿ ಬಂದಿದೆ. ಸಿಬ್ಬಂದಿಗೆ ಕಾಡುತ್ತಿದ್ದ ಆತಂಕವೂ ದೂರಾಗಿದೆ ಎಂದು ಈಶಾನ್ಯ ವಿಭಾಗದ ಸಂಚಾರ ಡಿಸಿಪಿ ನಾರಾಯಣ ಹೇಳಿದರು.

ಟಾಪ್ ನ್ಯೂಸ್

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

21-cancer

Bengaluru: ಪ್ರತಿವರ್ಷ 500 ಮಕಳಲ್ಲಿ ಕ್ಯಾನ್ಸರ್‌ ಪತ್ತೆ !

20-metro

Metro: ಮರುಪರಿಷ್ಕರಣೆ: ತಪ್ಪದ ಮೆಟ್ರೋ ದರ ಗೊಂದಲ

19-bng

Bengaluru: 1.84 ಲಕ್ಷ ಬೀದಿ ನಾಯಿಗಳಿಗೆ ಸಂಯುಕ್ತ ಲಸಿಕೆ

18-bng

Bengaluru: ಇಂಧನ, ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.