![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, May 31, 2020, 7:49 AM IST
ಚಿಕ್ಕಬಳ್ಳಾಪುರ: ಮಹಿಳೆಯರಲ್ಲಿ ಋತುಚಕ್ರವು ಒಂದು ಸಹಜ ಜೈವಿಕ ಪ್ರಕ್ರಿಯೆ. ಅದಿಲ್ಲದೇ ಮಾನವ ಸಂತತಿ ಮುಂದುವರಿಯಲಾರದು. ಋತುಚಕ್ರದ ಬಗ್ಗೆ ಜನರಲ್ಲಿ ರುವ ಮೂಢನಂಬಿಕೆ ಹಾಗೂ ತಪ್ಪು ಕಲ್ಪನೆಗಳನ್ನು ಹೋಗ ಲಾಡಿಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವ ಹಣಾಧಿಕಾರಿ ಬಿ.ಫೌಝೀಯಾ ತರುನ್ನುಮ್ ತಿಳಿಸಿದರು.
ನಗರದ ಜಿಪಂನ ಡಾ.ಹೆಚ್.ನರಸಿಂಹಯ್ಯ ಮಿನಿ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಯೋಜನೆಯಡಿ ಮಹಿಳೆಯರಲ್ಲಿ ಋತುಚಕ್ರದ ಶುಚಿತ್ವದ ಅರಿವು ಸಪ್ತಾಹ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ದರು. ಋತುಚಕ್ರದ ಶುಚಿತ್ವದಿಂದ ಲೈಂಗಿಕ ಸೋಂಕು ಇತರೆ ಗುಪ್ತರೋಗಗಳಿಂದ ದೂರವಿರಬಹುದು ಎಂಬ ಅರಿವು ಗ್ರಾಮೀಣ ಜನಸಾಮಾನ್ಯರಲ್ಲಿ ಬರಬೇಕಾಗಿದೆ.
ಅರಿವು ಮೂಡಿಸುವ ಕಾರ್ಯವನ್ನು ನಾವು ನೀವು ಗಳು ಒಟ್ಟಾಗಿ ಮಾಡಬೇಕಾದ ಅಗತ್ಯವಿದೆ. ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಈ ಕುರಿತು ಅರಿವು ಮೂಡಿಸುವ ಕಾರ್ಯ ಆಗಬೇಕೆಂದರು. ಚಿಕ್ಕಬಳ್ಳಾಪುರ ತಾಲೂಕು ಆರೋಗ್ಯಾಧಿಕಾರಿ ಡಾ. ಮಂಜುಳಾ ಮಾತನಾಡಿ, ಮಹಿಳೆಯರಿಗೆ ಋತುಚಕ್ರದ ಶುಚಿತ್ವದ ಅಗತ್ಯದ ಬಗ್ಗೆ ಹಾಗೂ ಸಪ್ತಾಹ ಆಚರಿಸುವ ಜೊತೆಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದರ ಬಗ್ಗೆ ವಿವರಿಸಿದರು.
ಸಭೆಯಲ್ಲಿ ಜಿಪಂನ ಡಿ.ಆರ್.ಡಿ. ಎ .ಯೋಜನಾ ನಿರ್ದೇಶಕ ಗಿರಿಜಾಶಂಕರ್, ಮುಖ್ಯ ಲೆಕ್ಕಾಧಿ ಕಾರಿ ಅರ್ಚನಾ, ಬಿ.ಕಮಲನಾಭನ್, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ
MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್
Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು!
Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ
BJP Rift: ಸಂಸದ ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.