ಕೋವಿಡ್ ಸಂಕಷ್ಟದಲ್ಲಿ ರಾಜಕೀಯ ರಂಪಾಟ ನಾಚಿಕೆಗೇಡು: ಹೊರಟ್ಟಿ
Team Udayavani, May 31, 2020, 12:18 PM IST
ಹುಬ್ಬಳ್ಳಿ: ಕೋವಿಡ್ ಸೋಂಕಿನಿಂದ ಜನರು ತತ್ತರಿಸುತ್ತಿರುವ ಸಂದರ್ಭದಲ್ಲಿ ನಾಯಕತ್ವದ ಬದಲಾವಣೆ ಹೇಳಿಕೆ, ಶಾಸಕರ ರಾಜೀನಾಮೆ ವಿಚಾರಗಳು ರಾಜಕಾರಣಿಗಳ ಬಗ್ಗೆ ಜನರಲ್ಲಿ ಕೆಟ್ಟ ಅಭಿಪ್ರಾಯ ಮೂಡಿಸುತ್ತಿದೆ. ಇದು ಜವಾಬ್ದಾರಿಯುತ ರಾಜಕಾರಣಿಗಳ ನಡೆಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಅಧಿಕಾರಕ್ಕಾಗಿ ಕಚ್ಚಾಡುವ ಸಂದರ್ಭವಲ್ಲ. ಪಕ್ಷಭೇದ ಮರೆತು ಕೋವಿಡ್-19 ವಿರುದ್ಧ ಹೋರಾಡಬೇಕು. ಇಂತಹ ಸಂದರ್ಭದಲ್ಲಿ ನಾಯಕತ್ವ ಬದಲಾವಣೆ, ಶಾಸಕರ ರಾಜೀನಾಮೆ ನಾಚಿಕೆಗೇಡಿನ ವಿಚಾರ.ಸಂಕಷ್ಟದ ಸಂದರ್ಭದಲ್ಲಿ ರಾಜಕಾರಣಕ್ಕೆ ಒತ್ತು ನೀಡಿದರೆ ಜನರು ತಕ್ಕ ಶಾಸ್ತಿ ಮಾಡುವುದು ಖಚಿತ. ಪರಿಸ್ಥಿತಿ ಅರಿತು ರಾಜ್ಯದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು ಎಂದರು.
ಜೂ. 4ರಂದು ಪಕ್ಷಾಂತರ ನಿಷೇಧ ವಿಚಾರವಾಗಿ ಸಭೆ ನಡೆಯಲಿದ್ದು, ಒಮ್ಮೆ ಚುನಾಯಿತನಾದ ವ್ಯಕ್ತಿ ರಾಜೀನಾಮೆ ನೀಡಿದರೆ ಅವಧಿ ಪೂರ್ಣಗೊಳ್ಳುವವರೆಗೂ ಯಾವುದೇ ಸ್ಥಾನಮಾನ ನೀಡುವಂತಿಲ್ಲ ಎನ್ನುವ ಅಭಿಪ್ರಾಯ ವ್ಯಕ್ತಪಡಿಸುತ್ತೇನೆ ಎಂದು ಹೇಳಿದರು.
ಇತ್ತೀಚೆಗೆ ಬಿಜೆಪಿಗೆ ಹೋಗಿ ಸೋತಿರುವ ಶಾಸಕರನ್ನು ವಿಧಾನ ಪರಿಷತ್ಗೆ ಆಯ್ಕೆ ಮಾಡಿದರೆ ಪಕ್ಷದಲ್ಲಿ ಇದುವರೆಗೆ ದುಡಿದುಕೊಂಡು ಬಂದಿರುವವರ ಪಾಡೇನು. ಅಧಿಕಾರಕ್ಕಾಗಿ ಪಕ್ಷಾಂತರ ಮಾಡುವುದು, ರಾಜೀನಾಮೆ ಕೊಡಿಸಿ ಮಂತ್ರಿ ಸ್ಥಾನ ಕೊಡುವುದು ಪಕ್ಷಕ್ಕೆ ದೊಡ್ಡ ಗಂಡಾಂತರ. ಪ್ರಜಾಪ್ರಭುತ್ವ ಉಳಿಯಬೇಕಾದರೆ ಸೂಕ್ತ ನಿರ್ಧಾರ ಕೈಗೊಳ್ಳುವುದು ಉತ್ತಮ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಪಂಚಮಸಾಲಿ ವಕೀಲರ ಪರಿಷತ್ತಿನಿಂದ ಸೆ.22ರಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ
B.C.Road ಏನು ಅಫ್ಘಾನಿಸ್ಥಾನ,ಪಾಕಿಸ್ಥಾನದಲ್ಲಿ ಇದೆಯಾ?: ಮುತಾಲಿಕ್ ಕಿಡಿ
Hubli: ರಾಡ್ ಬಿದ್ದು ಎಎಸ್ಐ ಸಾವು ಪ್ರಕರಣದಲ್ಲಿ ಕಾಮಗಾರಿ ಕಂಪನಿಯ 11 ಜನರ ಬಂಧನ
Meet Friends: ಧಾರವಾಡದ ಹಳೆಯ ಗೆಳೆಯರ ಭೇಟಿಯಾದ ತೆಲುಗು ನಟ ಶ್ರೀಕಾಂತ್
Hubli: ಬೈಕಲ್ಲಿ ಹೋಗುತ್ತಿದ್ದಾಗ ತಲೆಗೆ ರಾಡ್ ಬಿದ್ದು ಗಾಯಗೊಂಡಿದ್ದ ಎಎಸ್ಐ ಸಾವು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.