ಮಿಡತೆ ಹಾವಳಿ ನಿಯಂತ್ರಣಕ್ಕೆ ಸಿದ್ಧತೆ


Team Udayavani, Jun 1, 2020, 8:02 AM IST

mida-ramanagara

ರಾಮನಗರ: ದೇಶದ ಗಡಿ ರಾಜ್ಯಗಳಲ್ಲಿ ಮರುಭೂಮಿ ಮಿಡತೆಗಳ ಹಾವಳಿ ಉಂಟಾಗಿದೆ. ರಾಜ್ಯದಲ್ಲಿಯೂ ಮಿಡತೆ ದಾಳಿ ಎದುರಾಗಿ ಜಿಲ್ಲೆಯನ್ನು ಕಾಡಿದರೆ, ನಿಯಂತ್ರಣಕ್ಕೆ ಜಿಲ್ಲಾಡಳಿತ ಸಿದ್ಧತೆ ಆರಂಭಿಸಿದೆ. ಜಿಲ್ಲಾಧಿಕಾರಿ ಗಳು  ಈಗಾಗಲೇ ಸಂಭವನೀಯ ಮಿಡತೆ ದಾಳಿ ನಿಯಂತ್ರಣದ ಮೇಲುಸ್ತುವಾರಿಗೆ ಜಿಲ್ಲಾ ಮಟ್ಟದ ಸಮಿತಿ ರಚಿಸಿದ್ದಾರೆ.

ಇದೇ ವಿಚಾರದಲ್ಲಿ ಡೀಸಿ ನೇತೃತ್ವದಲ್ಲಿ ಜಿಲ್ಲಾ ಸರ್ಕಾರಿ ಕಚೇರಿಗಳ ಸಂಕಿರ್ಣದಲ್ಲಿ ಅಧಿಕಾರಿಗಳ ಸಭೆ ನಡೆಯಿತು.  ಮಾಗಡಿಯ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಿಂದ ಮರುಭೂಮಿ ಮಿಡತೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು. ಜಿಲ್ಲೆಯಲ್ಲಿಯೂ ದಾಳಿ ಉಂಟಾದರೆ ಸರ್ಕಾರ ನೀಡಿರುವ ನಿರ್ದೇಶನ ದಂತೆ ನಿರ್ವಹಣೆ ಕ್ರಮ ವಹಿಸಲು ಬೇಕಿರುವ  ಕೀಟನಾಶಕ ಸಂಗ್ರಹಿಸಿಟ್ಟುಕೊಳ್ಳಲು ಸಭೆ ನಿರ್ಧರಿಸಿದೆ.

ಕೀಟನಾಶಕ ಸಿಂಪರಣೆಗೆ ಟ್ರ್ಯಾಕ್ಟರ್‌ ಮೌಂಟೆಡ್‌ ಸ್ಪ್ರೆಯರ್‌ ಹಾಗೂ ಅಗ್ನಿಶಾಮಕ  ಸಲಕರಣೆ ಸಿದ್ಧಪಡಿಸಿಕೊಳ್ಳಬೇಕು. ಕೃಷಿ, ತೋಟಗಾರಿಕೆ, ರೇಷ್ಮೆ ಹಾಗೂ ಅರಣ್ಯ ಇಲಾಖೆಯವರು ಸಭೆ ನಡೆಸಿ ಸಿಬ್ಬಂದಿಗೆ  ಮರುಭೂಮಿ ಮಿಡತೆಗಳು ಕಂಡರೆ ತಕ್ಷಣ ಮೇಲಾಧಿಕಾರಿಗಳಿಗೆ ಮಾಹಿತಿ ನೀಡುವಂತೆ ನಿರ್ದೇಶನ ಕೊಡಬೇಕು ಎಂದರು. ಮರುಭೂಮಿ ಮಿಡತೆ ವೈಜ್ಞಾನಿಕವಾಗಿ ಸಿಸ್ಟೋಸೆರಾ ಗ್ರಿಗೇರಿಯಾ  ಎಂದು ಹೆಸರು. ಈ ಕೀಟ ಆಥೋಪ್ಟೆರಾ ಗಣ ಹಾಗೂ ಅಕ್ರೀಡಿಡೆ ಕುಟುಂಬಕ್ಕೆ ಸೇರಿದೆ.

ಇದು ಆಫ್ರಿಕಾದಿಂದ ಬಂದಿದ್ದು, ವಿವಿಧ ದೇಶಗಳಲ್ಲಿ  ಅನೇಕ ಬೆಳೆ ಬಾಧಿಸಿ ಆಹಾರ ಕ್ಷಾಮ ಸೃಷ್ಟಿ ಮಾಡಿದ ಉಲ್ಲೇಖದೆ. ಮಿಡತೆಯು ಎರಡು ವಲಸೆ ಹಂತ ಹೊಂದಿರುತ್ತದೆ. ಒಬ್ಬಂಟಿ ಹಂತ ಮತ್ತು ಸಮೂಹ (ವಲಸೆ) ಹಂತ. ಮಿಡತೆಯೂ ಒಬ್ಬಂಟಿ ಹಂತದಲ್ಲಿ ಮರಿ (ಅಪ್ಸರೆ) ಕೀಟ ಹಸಿರು ಬಣ್ಣದ್ದು ಪ್ರೌಢ ಕೀಟ ಕಂದು ಅಥವಾ ಕಪ್ಪು ಬಣ್ಣ ಹೊಂದಿರುತ್ತದೆ. ಸಮೂಹ  ಹಂತದಲ್ಲಿ ಮಿಡತೆಯೂ ಹಳದಿ ಬಣ್ಣವನ್ನು ಹೊಂದಿದ್ದು, ಗುಂಪು ಗುಂಪಾಗಿ 5 ರಿಂದ 10 ಬಾರಿ ವಲಸೆ ಹೋಗುತ್ತವೆ. ಈ ಹಂತ ದಲ್ಲಿ ಮಿಡತೆಯ ಹಾನಿ ತಡೆಯಬಹು ದಾಗಿದೆ ಎಂದು ವಿಜ್ಞಾನಿಗಳು ಮಾಹಿತಿ ಕೊಟ್ಟರು.

ನಿರ್ವಹಣೆ ಕ್ರಮಗಳು: ಕೀಟ ಬೆಳೆಗಳಲ್ಲಿ ಕಂಡರೆ, ಡ್ರಮ್‌, ಪಾತ್ರೆ ಅಥವಾ ಫ‌ಲಕ ಬಡಿದು ಹೆಚ್ಚು ಶಬ್ದ ಮಾಡಿ, ಮಿಡತೆ ಸಮೂಹ ಓಡಿಸುವುದು. ಬೇವಿನ ಮೂಲದ ಕೀಟನಾಶಕಗಳನ್ನು (1500 ಪಿಪಿಎಂ 3 ಮಿ. ಲೀ./ಲೀ.) ಬೆಳೆಗಳಲ್ಲಿ  ಸಿಂಪಡಿಸುವುದರಿಂದ ಕೀಟವು ಬೆಳೆ ಹಾನಿ ಮಾಡುವುದು ಕಡಿಮೆಯಾಗುತ್ತದೆ. ಕೀಟ ಬಾಧಿತ ಪ್ರದೇಶದಲ್ಲಿ ಹೊಗೆ ಮತ್ತು ಬೆಂಕಿ ಹಾಕುವುದರಿಂದ ಕೀಟವನ್ನು ಬೇರೆಡೆಗೆ ಓಡಿಸಬಹುದು.

ಕೀಟ ಹುಳುಗಳಾಗಿದ್ದಲ್ಲಿ ಬಾಧಿತ ಪ್ರದೇಶ ಕನಿಷ್ಠ  2 ಅಡಿ ಆಳ ಮತ್ತು 3 ಅಡಿ ಅಗಲದ ಗುಂಡಿ ನಿರ್ಮಿಸಿ ಮರಿಹುಳುಗಳನ್ನು ಸೆರೆ ಹಿಡಿದು ನಾಶಪಡಿಸಬೇಕು. ಬೆಳೆಯ ಅಥವಾ ಮರಗಳ ಮೇಲೆ ಮರುಭೂಮಿ ಮಿಡತೆ ಕಂಡುಬಂದಲ್ಲಿ ಕೆಳಕಂಡ ಕೀಟನಾಶಕ ಬಳಸಿ ಹತೋಟಿ ಮಾಡಲು  ಕ್ರಮವಹಿಸಬಹುದು ಎಂದು ವಿಜ್ಞಾನಿಗಳು ಸಲಹೆ ಕೊಟ್ಟಿದ್ದಾರೆ.

ಮರುಭಮಿ ಮಿಡತೆ ಹಗಲಿನಲ್ಲಿ ಸಂಚರಿಸಿ, ರಾತ್ರಿ ವೇಳೆ ಮರಗಿಡಗಳ ಮೇಲೆ ವಿಶ್ರಾಂತಿ ಪಡೆಯುವುದರಿಂದ ಟ್ರಾಕ್ಟರ್‌ ಮೌಂಟೆಡ್‌ ಜೆಟ್‌ ಸ್ಪ್ರೆಯರ್‌ ಬಳಸಿ  ಕೀಟನಾಶಕವನ್ನು ಸಾಯಂಕಾಲ ಅಥವಾ ರಾತ್ರಿ ವೇಳೆ ಸಿಂಪಡಿಸು ವಂತೆ ವಿಜ್ಞಾನಿಗಳು ಸೂಚಿಸಿದ್ದಾರೆ. ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಸೇರಿದಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

cmNandini Milk ಮತ್ತಷ್ಟು ತುಟ್ಟಿ? ಶೀಘ್ರವೇ ದರ ಪರಿಷ್ಕರಣೆ: ಸಿದ್ದರಾಮಯ್ಯ ಸುಳಿವು

Nandini Milk ಮತ್ತಷ್ಟು ತುಟ್ಟಿ? ಶೀಘ್ರವೇ ದರ ಪರಿಷ್ಕರಣೆ: ಸಿದ್ದರಾಮಯ್ಯ ಸುಳಿವು

CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ

CM Siddaramaiah ಸುಳ್ಳು ಹೇಳುವ ಬಿಜೆಪಿ ನಂಬಬೇಡಿ

ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Ramanagara: ಎಚ್‌ಡಿಕೆಯನ್ನೇ ತನಿಖಾಧಿಕಾರಿ ಮಾಡಿ: ಶಾಸಕ ಬಾಲಕೃಷ್ಣ ಲೇವಡಿ

Ramnagar: ಜಿಲ್ಲೆಯಲ್ಲಿ 70ಕ್ಕೂ ಹೆಚ್ಚು ಕಿಮೀ ಎಸ್‌ಟಿಆರ್‌ಆರ್‌ ರಸ್ತೆ

Ramnagar: ಜಿಲ್ಲೆಯಲ್ಲಿ 70ಕ್ಕೂ ಹೆಚ್ಚು ಕಿಮೀ ಎಸ್‌ಟಿಆರ್‌ಆರ್‌ ರಸ್ತೆ

Ramanagar: ಗಣೇಶ ಮೂರ್ತಿ ಮೆರವಣಿಗೆಯಲ್ಲಿ ಬಿಜೆಪಿಗನಿಂದ ಲೈಂಗಿಕ ಕಿರುಕುಳ

Ramanagar: ಗಣೇಶ ಮೂರ್ತಿ ಮೆರವಣಿಗೆಯಲ್ಲಿ ಬಿಜೆಪಿಗನಿಂದ ಲೈಂಗಿಕ ಕಿರುಕುಳ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.