ಕಬ್ಬಿನ ಬಿಲ್‌ ಪಾವತಿ ವಿಳಂಬಕ್ಕೆ ಆಕ್ರೋಶ


Team Udayavani, Jun 1, 2020, 9:03 AM IST

ಕಬ್ಬಿನ ಬಿಲ್‌ ಪಾವತಿ ವಿಳಂಬಕ್ಕೆ ಆಕ್ರೋಶ

ಸಾಂದರ್ಭಿಕ ಚಿತ್ರ

ಮಹಾಲಿಂಗಪುರ: ಕಾರ್ಖಾನೆಗೆ ಕಬ್ಬು ಪೂರೈಸಿದ 15 ದಿನಗಳೊಳಗಾಗಿ ಕಬ್ಬಿನ ಬಿಲ್‌ ಕೊಡುತ್ತೇನೆ ಎಂದು ಒಪ್ಪಿಕೊಂಡ ಗೋದಾವರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಸುಮಾರು ನಾಲ್ಕು ತಿಂಗಳ ನಂತರ ಬಿಲ್‌ ಕೊಡುತ್ತಿದ್ದು ಖಂಡನೀಯ ಎಂದು ಕಬ್ಬು ಬೆಳೆಗಾರರ ಸಂಘದ ಪ್ರಧಾನ ಕಾರ್ಯದರ್ಶಿ ರಂಗನಗೌಡ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಜಿಎಲ್‌ಬಿಸಿ ಅತಿಥಿ ಗೃಹದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಲ್ಕು ತಿಂಗಳ ಹಿಂದೆ ಬಾಗಲಕೋಟೆ ಡಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಎಫ್‌ ಆರ್‌ಪಿ ಮತ್ತು ಶುಗರ್‌ ಕಂಟ್ರೋಲ್‌ ಕಾಯ್ದೆ ಪ್ರಕಾರ ರೈತರು ಕಬ್ಬು ಪೂರೈಸಿದ 15 ದಿನದೊಳಗಾಗಿ ಕಬ್ಬಿನ ಬಿಲ್‌ ಕೊಡುತ್ತೇನೆ ಮತ್ತು ಎಫ್‌ಆರ್‌ಪಿ ಪ್ರಕಾರ 2700 ರೂ. ಬದಲಾಗಿ 2500 ರೂ. ಕೊಡುತ್ತೇವೆ. ಏಕೆಂದರೆ 2700 ರೂ ಕೊಡುವುದಾದರೆ ತಡವಾಗುತ್ತದೆ. 2500 ರೂ. ಆದರೆ 15 ದಿನಗಳೊಳಗಾಗಿ ಕೊಡುತ್ತೇವೆ. ತಡವಾದರೆ ಅದಕ್ಕೆ ಬಡ್ಡಿ ಸೇರಿಸಿ ಕೊಡುತ್ತೇವೆ ಎಂದು ಆಡಳಿತ ಮಂಡಳಿಯವರು ಒಪ್ಪಿಕೊಂಡಿದ್ದರು.

ಆದರೆ ಸುಮಾರು ನಾಲ್ಕು ತಿಂಗಳ ನಂತರ ಈಗ ಕಬ್ಬಿನ ಬಿಲ್‌ ಪಾವತಿಸುತ್ತಿದ್ದಾರೆ. ಆದರೆ ಅದಕ್ಕೆ ಬಡ್ಡಿ ಕೂಡ ನೀಡುತ್ತಿಲ್ಲ. ಬಿಲ್‌ ಪಾವತಿಗೆ ತಡ ಮಾಡುತ್ತಿರುವುದಕ್ಕಾಗಿ ನಾವು ಕಾರ್ಖಾನೆಯವರಿಗೆ ನೋಟೀಸ್‌ ನೀಡುತ್ತ ಬಂದಿದ್ದೇವೆ. ಒಟ್ಟು 4 ಬಾರಿ ನೋಟೀಸ್‌ ನೀಡಿದ್ದೇವೆ. ಜಿಲ್ಲೆಯಲ್ಲಿ ಇಐಡಿ ಪ್ಯಾರಿ ಹೊರತು ಪಡಿಸಿ ಯಾವ ಕಾರ್ಖಾನೆಯವರೂ 15 ದಿನದೊಳಗಾಗಿ ಬಿಲ್‌ ನೀಡಿಲ್ಲ ಎಂದರು.

ಕಾರ್ಖಾನೆ ಆಡಳಿತ ಮಂಡಳಿ ರೈತರ ಹಣೆ ಬರಹದೊಂದಿಗೆ ಚೆಲ್ಲಾಟವಾಡುತ್ತಿದ್ದು ಅದನ್ನು ಸಹಿಸಲು ಸಾಧ್ಯವಿಲ್ಲ. ಕಳೆದ ಹಂಗಾಮಿನ ಬಾಕಿ 111 ರೂ. ಮತ್ತು ಈ ಹಂಗಾಮಿಗೆ ನೀಡುತ್ತಿರುವ 2500 ರೂ. ಗಳಿಗೆ ಬಡ್ಡಿ ಹಾಕಬೇಕು. ಬಾಕಿ ಉಳಿದ 200 ರೂ. ಕೂಡಲೇ ಪಾವತಿಸಬೇಕೆಂದು ಒತ್ತಾಯಿಸಿದರು. ಬೆಳೆಸಾಲ ಮನ್ನಾಗೆ ಆಗ್ರಹ: ಕೊರೊನಾ ರೈತರ ಬದುಕಿಗೆ ಹೊಡೆತ ನೀಡಿದ್ದು ಈಗ ಬಿತ್ತಲು ಬೀಜ, ಗೊಬ್ಬರ ಮತ್ತು ಮಕ್ಕಳ ಶಾಲೆ ಫೀಜ್ ಗಳಿಗಾಗಿ ಪರದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ರೈತರು ಬ್ಯಾಂಕ್‌ ಸಾಲ ತುಂಬುವ ಪರಿಸ್ಥಿತಿಯಲ್ಲಿ ಇಲ್ಲ. ಕಾರಣ ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕ್‌ಗಳಲ್ಲಿಯ ರೈತರ ಕಬ್ಬಿನ ಬೆಳೆ ಸಾಲ ಮನ್ನಾ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದರು.

ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಆರ್‌.ಬಿ. ಪಾಟೀಲ, ಬಿ.ಜಿ. ಹೊಸೂರ, ಈರಣ್ಣ ಕನಕರಡ್ಡಿ, ಎಲ್‌.ಟಿ. ಹುಚರಡ್ಡಿ, ಎಂ.ಬಿ. ನಾಡಗೌಡ, ರಾಮಕೃಷ್ಣ ಬುದ್ನಿ. ಕೆ.ಟಿ ಸಾರವಾಡ, ಕಲ್ಲಪ್ಪ ಕಂಕಣವಾಡಿ, ಶೇಖರ ಮುತ್ತಪ್ಪಗೋಳ, ಸದಾಶಿವ ಕಂಬಳಿ ಇದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ:ಕೋಟೆಕಲ್ಲದಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

ಬಾಗಲಕೋಟೆ:ಕೋಟೆಕಲ್ಲಲ್ಲೊಂದು ಅಪೂರ್ವ ಜ್ಞಾನದೇಗುಲ-ಉಲ್ಲಾಸದ ವಾತಾವರಣ

2-mudhol

Mudhola: ಮೆಕ್ಕೆಜೋಳಕ್ಕೂ ಕುತ್ತು; ರೈತರ ಆರ್ಥಿಕತೆಗೆ ಮಾರಕ ಹೊಡೆತ

ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ

ದೇಗುಲ ಕಟ್ಟಡಕ್ಕೆ ಭಕ್ತರ ದೇಣಿಗೆ ಮಾತ್ರ ಬಳಕೆ: ಗುಡಗುಂಟಿಮಠ

11-mudhol

ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ‌‌ ಪ್ರಯತ್ನಿಸುವೆ: ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪುರ

ಭೈರನಹಟ್ಟಿ: ಕಾರ್ಗಿಲ್‌ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

ಭೈರನಹಟ್ಟಿ: ಕಾರ್ಗಿಲ್‌ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.