ದ.ಕ.: 14 ಮಂದಿಗೆ ಕೋವಿಡ್ ದೃಢ : 2 ಮಂದಿ ಗುಣಮುಖರಾಗಿ ಬಿಡುಗಡೆ


Team Udayavani, Jun 1, 2020, 9:40 AM IST

ದ.ಕ.: 14 ಮಂದಿಗೆ ಕೋವಿಡ್ ದೃಢ : 2 ಮಂದಿ ಗುಣಮುಖರಾಗಿ ಬಿಡುಗಡೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು, ರವಿವಾರ ಮತ್ತೆ 14 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದ.ಕ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 133ಕ್ಕೆ ಏರಿಕೆಯಾಗಿದೆ. ಮೇ 22ರಂದು ಕತಾರ್‌ನಿಂದ ಬೆಂಗಳೂರಿಗೆ ಆಗ ಮಿಸಿ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿದ್ದ 50 ವರ್ಷಪ್ರಾಯದ ವ್ಯಕ್ತಿ ಮೇ 30ರಂದು ಮಂಗಳೂರಿಗೆ ಆಗಮಿಸಿದ್ದರು. ಮೇ 31ರಂದು ಅವರ ಗಂಟಲು ದ್ರವ ಮಾದರಿ ಸ್ವೀಕೃತವಾಗಿದ್ದು, ಕೋವಿಡ್ ದೃಢಪಟ್ಟಿದೆ. ಮೇ 22ರಂದು ಮಲೇಷಿಯಾದಿಂದ ಬೆಂಗಳೂರಿಗೆ ಆಗಮಿಸಿದ್ದ 38 ವರ್ಷ ಪ್ರಾಯದ ವ್ಯಕ್ತಿ 7 ದಿನಗಳ ಕ್ವಾರಂಟೈನ್‌ ಮುಗಿಸಿ ಮೇ 30ರಂದು ಮಂಗಳೂರಿಗೆ ಆಗಮಿಸಿದ್ದರು. ಮೇ 31ರಂದು ಗಂಟಲು ದ್ರವ ಮಾದರಿ ವರದಿ ಬಂದಿದ್ದು, ಕೋವಿಡ್ ಸೋಂಕು ದೃಢಪಟ್ಟಿದೆ.

ಮೇ 18ರಂದು ಮುಂಬಯಿಯಿಂದ ಆಗಮಿಸಿದ 22 ವರ್ಷ ಪ್ರಾಯದ ವ್ಯಕ್ತಿ, 52 ವರ್ಷ ಪ್ರಾಯದ ವ್ಯಕ್ತಿ, 50 ವರ್ಷ ಪ್ರಾಯದ ವ್ಯಕ್ತಿಯಲ್ಲಿ ಕೊರೊನಾ ದೃಢಪಟ್ಟಿದೆ. ಮೇ 18ರಂದು ಮಹಾರಾಷ್ಟ್ರದಿಂದ ಆಗಮಿಸಿದ 44 ವರ್ಷ ಪ್ರಾಯದ ವ್ಯಕ್ತಿ, 30 ವರ್ಷ ಪ್ರಾಯದ ವ್ಯಕ್ತಿಗೆ ಕೋವಿಡ್ ಸೋಂಕು ತಗಲಿದೆ.  ಮಹಾರಾಷ್ಟ್ರದಿಂದ ಇತ್ತೀಚೆಗೆ ಬಂದ ಮಂಗಳೂರಿನ ಕೆಂಜಾರು ಗ್ರಾಮದ ವ್ಯಕ್ತಿಯ ಸಂಪರ್ಕದಿಂದ ಒಂದೇ ಕುಟುಂಬದ 17 ವರ್ಷ ಪ್ರಾಯದ ಬಾಲಕ, 31 ವರ್ಷ ಪ್ರಾಯದ ವ್ಯಕ್ತಿ ಮತ್ತು 51 ವರ್ಷ ಪ್ರಾಯದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಅದೇ ರೀತಿ ಮೇ 20ರಂದು ಮುಂಬಯಿಯಿಂದ ಆಗಮಿಸಿದ 45 ವರ್ಷ ಪ್ರಾಯದ ಮಹಿಳೆ ಮತ್ತು 43 ವರ್ಷ ಪ್ರಾಯದ ಮಹಿಳೆಯಲ್ಲಿ ಕೋವಿಡ್ ಪಾಸಿಟಿವ್‌ ಕಾಣಿಸಿಕೊಂಡಿದೆ. ಮೇ 18ರಂದು ಮುಂಬಯಿಯಿಂದ ಆಗಮಿಸಿದ ಒಂದೇ ಕುಟುಂಬದ 40 ವರ್ಷ ಪ್ರಾಯದ ವ್ಯಕ್ತಿ ಮತ್ತು 38 ವರ್ಷ ಪ್ರಾಯದ ಮಹಿಳೆಗೆ ಸೋಂಕು ದೃಢಪಟ್ಟಿದೆ.

76ರ ವೃದ್ಧ ಸಹಿತ 12 ಮಂದಿ ಬಿಡುಗಡೆ ದ.ಕ. ಜಿಲ್ಲೆಯಲ್ಲಿ ರವಿವಾರ  76 ವರ್ಷ ಪ್ರಾಯದ ವೃದ್ಧ ಸಹಿತ ಒಟ್ಟು 12 ಮಂದಿ ಜಿಲ್ಲಾ ವೆನ್ಲಾಕ್ ಕೋವಿಡ್‌ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಮೇ 12ರಂದು ದುಬಾೖಯಿಂದ ಮಂಗಳೂರಿಗೆ ಆಗಮಿಸಿದ್ದ 76 ವರ್ಷ ಪ್ರಾಯದ ವ್ಯಕ್ತಿ ಮಧುಮೇಹ, ಅಧಿಕ ರಕ್ತದೊತ್ತಡ, ಕಾಲಿನ ತೊಂದರೆ ಮತ್ತು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದರು. ಮೇ 15ರಂದು ಇವರಲ್ಲಿ ಕೋವಿಡ್ ಸೋಂಕು ದೃಢಪಟ್ಟಿತ್ತು. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದ್ದು, ಮೇ 30ರಂದು ಬಂದ ವರದಿಯಲ್ಲಿ ಕೋವಿಡ್ ನೆಗೆಟಿವ್‌ ಬಂದಿದೆ. ಇದೇ ಕಾರಣಕ್ಕೆ ಮೇ 31ರಂದು ಅವರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ. ಅದೇ ರೀತಿ 39 ವರ್ಷ ಪ್ರಾಯದ ವ್ಯಕ್ತಿ, 40 ವರ್ಷ ಪ್ರಾಯದ ವ್ಯಕ್ತಿ, 69 ವರ್ಷ ಪ್ರಾಯದ ಮಹಿಳೆ, 44 ವರ್ಷ ಪ್ರಾಯದ ವ್ಯಕ್ತಿ, 41 ವರ್ಷ ಪ್ರಾಯದ ಮಹಿಳೆ, 42 ವರ್ಷ ಪ್ರಾಯದ ವ್ಯಕ್ತಿ, 36 ವರ್ಷ ಪ್ರಾಯದ ವ್ಯಕ್ತಿ, 11 ವರ್ಷ ಪ್ರಾಯದ ಬಾಲಕಿ, 3 ವರ್ಷ ಪ್ರಾಯದ ಮಗು, 50 ವರ್ಷ ಪ್ರಾಯದ ವ್ಯಕ್ತಿ ಜಿಲ್ಲಾ ವೆನ್ಲಾಕ್‌ ಆಸ್ಪತ್ರೆಯಿಂದ ರವಿವಾರ ಬಿಡುಗಡೆಗೊಂಡಿದ್ದಾರೆ.

ರವಿವಾರ ಒಟ್ಟು 120 ಮಂದಿಯ ಗಂಟಲು ದ್ರವ ಮಾದರಿಯ ವರದಿ ಬಂದಿದ್ದು, 14 ಮಂದಿಗೆ ಕೋವಿಡ್ ದೃಢಪಟ್ಟಿದೆ. ರವಿವಾರ 37 ಮಂದಿಯ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದ್ದು, ಒಟ್ಟು 231 ವರದಿ ಬರಲು ಬಾಕಿ ಇದೆ. ಎನ್‌ಐಟಿಕೆಯಲ್ಲಿ ಒಟ್ಟು 3 ಮಂದಿ, ಇಎಸ್‌ಐ ಆಸ್ಪತ್ರೆಯಲ್ಲಿ 17  ಮಂದಿ ಕ್ವಾರಂಟೈನ್‌ನಲ್ಲಿದ್ದಾರೆ. 40 ವರ್ಷ ಪ್ರಾಯದ ಮಹಿಳೆ ಮಧುಮೇಹ, ಮೂತ್ರದ ಸೋಂಕು, ಉಸಿರಾಟ ತೊಂದರೆಯಿಂದ ಬಳಲುತ್ತಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಬೋಳಿಯಾರು ಗ್ರಾಮದ ಕಾಪಿಕಾಡು ಸೀಲ್‌ಡೌನ್‌
ಬೋಳಿಯಾರು ಪ್ರದೇಶದ ವ್ಯಕ್ತಿಗೆ ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಬೋಳಿಯಾರು ಗ್ರಾಮದ ಕಾಪಿಕಾಡು ವ್ಯಾಪ್ತಿಯನ್ನು ಸೀಲ್‌ಡೌನ್‌ ಎಂದು ದ.ಕ. ಜಿಲ್ಲಾಡಳಿತ ಆದೇಶಿಸಿದೆ. ಅದರಂತೆ ಪೂರ್ವಭಾಗದಿಂದ ಓಪನ್‌ ಏರಿಯಾ, ಪಶ್ಚಿಮದಿಂದ ಉಮರ್‌ ಫಾರೂಕ್‌, ಕಲೀದ್‌ ಅಬ್ದುಲ್‌ ಶಕೂರ್‌ ಮನೆ, ಉತ್ತರಕ್ಕೆ ಕಿನ್ನಿಮನೆ ದೇವಸ್ಥಾನದ ಓಪನ್‌ ಏರಿಯಾ, ದಕ್ಷಿಣಕ್ಕೆ ಯಾಕುಬ್‌, ರಿಯಾಝ್, ಇಬ್ರಾಹಿಂ, ಸಾಫಿಯಾ ಅವರ ಮನೆ ವ್ಯಾಪ್ತಿಯನ್ನು ಜಿಲ್ಲಾಡಳಿತ ಕಂಟೈನ್ಮೆಂಟ್‌ ಝೋನ್‌ ಎಂದು ಗುರುತಿಸಿದೆ. ಪೂರ್ವಕ್ಕೆ ಬಶೀರ್‌ ಮನೆ, ಪಶ್ಚಿಮಕ್ಕೆ ಓಪನ್‌ ಏರಿಯಾ, ಉತ್ತರಕ್ಕೆ ಪಿಡಬ್ಲ್ಯೂಡಿ ರಸ್ತೆ, ದಕ್ಷಿಣಕ್ಕೆ ಅಬ್ದುಲ್‌ ಖಾದರ್‌ ಮನೆಯನ್ನು ಬಫರ್‌ ಝೋನ್‌ ಎಂದು ಘೋಷಣೆ ಮಾಡಲಾಗಿದೆ.

ಟಾಪ್ ನ್ಯೂಸ್

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

7

Mangaluru: ನಿತ್ಯ ಟ್ರಾಫಿಕ್‌ ಜಾಮ್‌ ಗೋಳು; ವಾಹನ ಸವಾರರ ಪರದಾಟ

Crime

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

4-bng-crime

Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.