ಕೋವಿಡ್ ಕಳವಳ: ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆ ಸೀಲ್ ಡೌನ್
Team Udayavani, Jun 1, 2020, 11:05 AM IST
ಶಿವಮೊಗ್ಗ: ಇಲ್ಲಿನ ಆರ್ ಎಎಸ್ ಐ ಅವರಿಗೆ ರವಿವಾರ ಕೋವಿಡ್-19 ಸೋಂಕು ದೃಢವಾಗಿದ್ದು, ಅವರ ಪುತ್ರಿ ಜಯನಗರ ಠಾಣೆಯಲ್ಲಿ ಕೆಲಸ ಮಾಡುತ್ತಿರುವ ಕಾರಣ ಮುನ್ನೆಚ್ಚರಿಕಾ ಕ್ರಮವಾಗಿ ಇಡೀ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿದೆ.
ಪೊಲೀಸ್ ಠಾಣೆಗೆ ಬ್ಯಾರಿಕೇಡ್ ಅಳವಡಿಸಿ ಸೀಲ್ ಡೌನ್ ಮಾಡಲಾಗಿದ್ದು, ಇಡೀ ಪೊಲೀಸ್ ಠಾಣೆಗೆ ಅಗ್ನಿ ಶಾಮದ ದಳದ ವಾಹನ ಬಳಸಿ ಸ್ಯಾನಿಟೈಸೀಂಗ್ ಮಾಡಲಾಗುತ್ತಿದೆ.
ರವಿವಾರ ಕೆಎಸ್ ಆರ್ ಪಿ ದಳದ ಆರ್ ಎಎಸ್ ಐ ಸೇರಿದಂತೆ ಆರು ಮಂದಿ ಪೊಲೀಸರಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿತ್ತು. ಆರ್ ಎಎಸ್ ಐ ಅವರು ಕೆಲ ದಿನಗಳ ಹೋಂ ಕ್ವಾರಂಟೈನ್ ನಲ್ಲಿದ್ದರು. ಬಳಿಕ ಇವರಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿತ್ತು. ಇವರ ಪ್ರಾಥಮಿಕ ಸಂಪರ್ಕ ಹೊಂದಿದ್ದ ಅವರ ಮಗಳು ಜಯನಗರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಈ ಕಾರಣದಿಂದ ಜಯನಗರ ಪೊಲೀಸ್ ಠಾಣೆಯನ್ನು ಸೀಲ್ ಡೌನ್ ಮಾಡಿ ಸ್ಯಾನಿಟೈಸ್ ಮಾಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.