ಕೋತಿಗುಡ್ಡದಲ್ಲಿ ಕೋವಿಡ್ ಪಾಸಿಟಿವ್‌

ಭಯದ ವಾತಾವರಣದಲ್ಲಿ ಗ್ರಾಮಸ್ಥರು ಕ್ವಾರಂಟೈನ್‌ ಕೇಂದ್ರದಲ್ಲಿ ಊಟ ಸಿಗದೇ ಪರದಾಟ

Team Udayavani, Jun 1, 2020, 12:07 PM IST

01-June-05

ದೇವದುರ್ಗ: ತಾಲೂಕಿನ ಕೋತಿಗುಡ್ಡ ಗ್ರಾಮದ ವ್ಯಕ್ತಿಗೆ ಶನಿವಾರ ರಾತ್ರಿ ಪಾಸಿಟಿವ್‌ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

ಕ್ವಾರಂಟೈನ್‌ ಕೇಂದ್ರದಲ್ಲಿರುವ ಜನರಿಗೆ ಸಮಯಕ್ಕೆ ಸರಿಯಾಗಿ ತಿಂಡಿ, ಊಟ ಸಿಗುತ್ತಿಲ್ಲ ಎಂಬ ಆರೋಪ ಕೇಳಿ ಬರುತ್ತಿದೆ. ಪಾಸಿಟಿವ್‌ ಪ್ರಕರಣಗಳು ಹೆಚ್ಚಾಗುತ್ತಿರುವ ಕಾರಣದಿಂದಾಗಿ ಕ್ವಾರಂಟೈನ್‌ ಕೇಂದ್ರದಲ್ಲಿರುವ ಜನರು ನಿತ್ಯ ಭಯದಲ್ಲಿಯೇ ದಿನ ದೂಡುವಂತಾಗಿದೆ. ಮಹಾರಾಷ್ಟ್ರದ ಕೋವಿಡ್ ವೈರಸ್‌ ವಿಷದ ಸೋಂಕು ತಾಲೂಕನ್ನು ಅಕ್ಷರಶಃ ನಲುಗಿಸಿದೆ. ಕ್ವಾರಂಟೈನ್‌ ಕೇಂದ್ರ ಸ್ಥಾಪಿಸಲಾದ ವಸತಿ ನಿಲಯದಲ್ಲಿ ಅಗತ್ಯಕ್ಕಿಂತ ಹೆಚ್ಚಿನ ಜನರನ್ನು ಸೇರಿಸಲಾಗಿದೆ. ಇಷ್ಟು ದಿನ ಕ್ವಾರಂಟೈನ್‌ಗೆ ಸೀಮಿತವಾಗಿದ್ದ ವೈರಸ್‌ ಈಗ ಗ್ರಾಮೀಣ ಭಾಗ, ದೊಡ್ಡಿ, ತಾಂಡಾಗಳಿಕ್ಕೆ ವಕ್ಕರಿಸಿ ಭೀತಿ ಹೆಚ್ಚಿಸಿದೆ.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ಮಹಾರಾಷ್ಟ್ರ, ಪುಣೆ, ಬೆಂಗಳೂರು, ಆಂಧ್ರದಿಂದ ಸುಮಾರು 25 ಸಾವಿರಕ್ಕೂ ಹೆಚ್ಚು ಜನರು ತಾಲೂಕಿಗೆ ಮರಳಿ ಬಂದಿದ್ದಾರೆ. ಆದರೆ, ಲಾಕ್‌ ಡೌನ್‌ ಸಡಿಲಿಕೆ ನಂತರ ಬಂದ ಜನರಲ್ಲಿ ಪಾಸಿಟಿವ್‌ ಕೇಸ್‌ ಪತ್ತೆಯಾಗುತ್ತಿದೆ. ಮೇ 3ರ ನಂತರ ನಿತ್ಯ ಸುಮಾರು 200ಕ್ಕೂ ಹೆಚ್ಚು ಜನರಂತೆ ಈವರೆಗೆ ಎರಡೂವರೆ ಸಾವಿರ ಜನರು ಮರಳಿ ಬಂದಿದ್ದಾರೆ. ಅವರನ್ನು ಸಮರ್ಪಕವಾಗಿ ಕ್ವಾರಂಟೈನ್‌ ಮಾಡಿಲ್ಲ ಎನ್ನುವ ಆರೋಪ ಕೇಳಿ ಬರುತ್ತಿದೆ. ಪ್ರತಿ ಹಾಸ್ಟೆಲ್‌ನಲ್ಲಿ ಸೀಮಿತ ಜನರನ್ನು ಇಟ್ಟಿದ್ದರೆ ಸೋಂಕು ಏರಿಕೆ ಕಡಿಮೆ ಮಾಡಬಹುದಿತ್ತು.

35 ಹಾಸ್ಟೆಲ್‌, ಕಲ್ಯಾಣ ಮಂಟಪ ಬಳಸಿಕೊಂಡು ಕ್ವಾರಂಟೈನ್‌ ಕೇಂದ್ರ ಹೆಚ್ಚಿಸಿ ಕಡಿಮೆ ಜನರನ್ನು ಸಾಮಾಜಿಕ ಅಂತರದಲ್ಲಿ ಇರಿಸಿದ್ದರೆ ವೈರಸ್‌ ನಿಯಂತ್ರಣಕ್ಕೆ ಬರಬಹುದಿತ್ತು. ಆದರೆ, ಮರಳಿ ಬಂದಿರುವ ಎರಡು ಸಾವಿರ ಜನರನ್ನು ಆರಂಭದಲ್ಲಿ ಪಟ್ಟಣದ 6 ಸೇರಿ 14 ಹಾಸ್ಟೆಲ್‌ನಲ್ಲಿ ಕ್ವಾರಂಟೈನ್‌ ಮಾಡಲಾಗಿದೆ. ಪ್ರತಿ ಕ್ವಾರಂಟೈನಲ್ಲಿ 150-200 ಜನರನ್ನು ಇರಿಸಲಾಗಿದೆ. ಪ್ರತಿ ಕೊಠಡಿಗೆ 20-25 ಜನರನ್ನು ಇರಿಸಲಾಗಿದೆ. ತಾಲೂಕಿನಲ್ಲಿ ವಿವಿಧ ಇಲಾಖೆಗೆ ಸೇರಿದ 35ಕ್ಕೂ ಹೆಚ್ಚು ವಸತಿ ನಿಲಯಗಳು, ಹತ್ತಕ್ಕೂ ಹೆಚ್ಚು ಕಲ್ಯಾಣ ಮಂಟಪಗಳು, 15ಕ್ಕೂ ಹೆಚ್ಚು ಕಾಲೇಜುಗಳು, ದೊಡ್ಡದೊಡ್ಡ ಖಾಸಗಿ ಕಟ್ಟಡಗಳಿವೆ. ಪಾಸಿಟಿವ್‌ ಕಂಡುಬಂದ ವ್ಯಕ್ತಿಗಳ ಜತೆ ಪ್ರಾಥಮಿಕ ಹಾಗೂ ದ್ವಿತೀಯ ಹಂತದ ಸಂಪರ್ಕ ಹೊಂದಿದವರನ್ನು ಪ್ರತೇಕವಾಗಿ ಇರಿಸಿಲ್ಲ. ಅವರನ್ನು ಅದೇ ಹಾಸ್ಟೆಲ್‌ನಲ್ಲಿ ಕೂಡಿ ಹಾಕಿರುವುದು ವೈರಸ್‌ ಹರಡಲು ಕಾರಣ ಎನ್ನಲಾಗಿದೆ. ಇದರಿಂದ ಪ್ರತಿ ಕೇಂದ್ರದಿಂದ ಕೇಸ್‌ಗಳು ಬರುತ್ತಿವೆ. ಅವರನ್ನು ಪ್ರತ್ಯೇಕಿಸಿದ್ದರೆ ಸೋಂಕು ಹರಡುವುದನ್ನು ತಡೆಯಬಹುದಿತ್ತು ಎನ್ನುತ್ತಾರೆ ಪ್ರಜ್ಞಾವಂತ ನಾಗರಿಕರು.

ನಮಗೆ ಲಭ್ಯವಾದ ಸೌಲಭ್ಯ, ವ್ಯವಸ್ಥೆ ಆಧಾರದಲ್ಲಿ ಕ್ವಾರಂಟೈನ್‌ ಕೇಂದ್ರ ತೆರೆಯಲಾಗಿತ್ತು. ನಿರೀಕ್ಷೆಗೆ ಮೀರಿ ಜನರು ಮರಳಿ ಬಂದಿದ್ದಾರೆ. ಜನರು ಸಹ ಸ್ವಲ್ಪ ಜಾಗೃತಿ ವಹಿಸಬೇಕಾಗಿತ್ತು. ಕೊರೊನಾ ನಿಯಂತ್ರಣಕ್ಕೆ ಅಧಿಕಾರಿಗಳು ಹಗಲು ರಾತ್ರಿ ಶ್ರಮಿಸುತ್ತಿದ್ದಾರೆ. ಅಗತ್ಯ ಕ್ರಮಕೈಗೊಳ್ಳಲಾಗಿದೆ.
ಮಧುರಾಜ ಯಾಳಗಿ,
ತಹಶೀಲ್ದಾರ್‌

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shrana-p

Hospital: ರಾಯಚೂರಿನಲ್ಲಿ ಏಮ್ಸ್‌ ಸ್ಥಾಪನೆಗಾಗಿ ಕೇಂದ್ರಕ್ಕೆ ಮನವಿ: ಸಚಿವ ಡಾ. ಶರಣಪ್ರಕಾಶ

Manvi

Raichuru: ಅಪಘಾತದಲ್ಲಿ ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರ: ಸಿಎಂ ಸಿದ್ದರಾಮಯ್ಯ

Manvi: ಶಾಲಾ ಬಸ್-‌ ಸರ್ಕಾರಿ ಬಸ್‌ ನಡುವೆ ಭೀಕರ ಅಪಘಾತ; ಇಬ್ಬರು ಮಕ್ಕಳು ಸಾವು

Manvi: ಶಾಲಾ ಬಸ್-‌ ಸರ್ಕಾರಿ ಬಸ್‌ ನಡುವೆ ಭೀಕರ ಅಪಘಾತ; ಇಬ್ಬರು ಮಕ್ಕಳು ಸಾವು

Muda Case: ಮುಡಾ‌ ಪ್ರಕರಣ ಅಂದುಕೊಂಡಿದ್ದಕ್ಕಿಂತ ಆಳವಾಗಿದೆ- ಸಚಿವ ವಿ.ಸೋಮಣ್ಣ

Muda Case: ಮುಡಾ‌ ಪ್ರಕರಣ ಅಂದುಕೊಂಡಿದ್ದಕ್ಕಿಂತ ಆಳವಾಗಿದೆ- ಸಚಿವ ವಿ.ಸೋಮಣ್ಣ

Raichur: ನಗರಸಭೆ ಕೈ ವಶ… ಅಧ್ಯಕ್ಷೆಯಾಗಿ ನರಸಮ್ಮ, ಉಪಾಧ್ಯಕ್ಷರಾಗಿ ಸಾಜಿದ್ ಸಮೀರ್

Election: ರಾಯಚೂರು ನಗರಸಭೆ ಕೈ ವಶ, ಅಧ್ಯಕ್ಷೆಯಾಗಿ ನರಸಮ್ಮ, ಉಪಾಧ್ಯಕ್ಷರಾಗಿ ಸಾಜಿದ್ ಸಮೀರ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.