ಕೋವಿಡ್ ಸೋಂಕಿನಿಂದ ಗುಣಮುಖ: 17 ಮಂದಿ ಬಿಡುಗಡೆ
Team Udayavani, Jun 1, 2020, 1:28 PM IST
ಶಿವಮೊಗ್ಗ: ಕೋವಿಡ್ ಸೋಂಕಿನಿಂದ ಗುಣಮುಖರಾದ 17 ಮಂದಿಯನ್ನು ಭಾನುವಾರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಕೊನೆ ಹಂತದ ತಪಾಸಣೆ ಬಳಿಕ ಕೋವಿಡ್ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ ಇವರನ್ನೆಲ್ಲ ಡಿಸ್ಚಾರ್ಜ್ ಮಾಡಲಾಯಿತು. ತೀರ್ಥಹಳ್ಳಿ ತಾಲೂಕಿನ ಆರು, ಶಿವಮೊಗ್ಗ ತಾಲೂಕಿನ ನಾಲ್ಕು, ಹೊಸನಗರದ ಮೂವರು, ಸೊರಬದ ಇಬ್ಬರು, ಶಿಕಾರಿಪುರದ ಒಬ್ಬರು, ಸಾಗರದ ಒಬ್ಬರನ್ನು ಬಿಡುಗಡೆ ಮಾಡಲಾಗಿದೆ ಎಂದು ಶಿವಮೊಗ್ಗ ಮೆಡಿಕಲ್ ಕಾಲೇಜು ನಿರ್ದೇಶಕ ಡಾ| ಗುರುಪಾದಪ್ಪ ತಿಳಿಸಿದ್ದಾರೆ.
ಮೊದಲಿಗೆ ತೀರ್ಥಹಳ್ಳಿ ತಾಲೂಕಿನ ಆರು ಮಂದಿಯನ್ನು ಡಿಸ್ಚಾರ್ಜ್ ಮಾಡಿ, ಬಿಡುಗಡೆ ಮಾಡಲಾಯಿತು. ಆಸ್ಪತ್ರೆ ಸಿಬ್ಬಂದಿ ಅವರಿಗೆ ಬೀಳ್ಕೊಡುಗೆ ನೀಡಿದರು. ಕೆಲವು ಹೊತ್ತಿನ ಬಳಿಕ ಮತ್ತೊಂದು ತಾಲೂಕಿನ ಕೆಲವರನ್ನು ಬೀಳ್ಕೊಡಲಾಯಿತು. ಸಂಜೆ ವೇಳೆ ಹಂತ ಹಂತವಾಗಿ ಎಲ್ಲರನ್ನೂ ಬಿಡುಗಡೆ ಮಾಡಲಾಯಿತು. ಸೋಂಕಿತರಿಗೆ ಚಿಕಿತ್ಸೆ ನೀಡಿ, ಎರಡು ಬಾರಿ ಕೋವಿಡ್ ಟೆಸ್ಟ್ಗೆ ಒಳಪಡಿಸಲಾಗಿದೆ. ಎರಡು ಬಾರಿಯೂ ವರದಿ ನೆಗೆಟಿವ್ ಬಂದ ಹಿನ್ನೆಲೆಯಲ್ಲಿ 17 ಮಂದಿಯನ್ನು ಬಿಡುಗಡೆ ಮಾಡಲಾಗಿದೆ. ಶಿವಮೊಗ್ಗದಲ್ಲಿ ಇಷ್ಟೊಂದು ಪ್ರಮಾಣದಲ್ಲಿ ಸೋಂಕಿತರು ಗುಣಮುಖವಾಗಿ ಬಿಡುಗಡೆಯಾಗುತ್ತಿರುವುದು ಇದೇ ಮೊದಲು. ಶಿವಮೊಗ್ಗದ ಒಟ್ಟು ಸೋಂಕಿತರು 41. ಈ ಪೈಕಿ ಮೇ 25ರಂದು ನಾಲ್ಕು ಮಂದಿಯನ್ನು ಬಿಡುಗಡೆ ಮಾಡಲಾಗಿತ್ತು. ಮೇ 29ರಂದು ಮೂವರನ್ನು ಡಿಸ್ಚಾರ್ಜ್ ಮಾಡಲಾಗಿತ್ತು. ಈಗ ಮೂರನೇ ಹಂತದಲ್ಲಿ 17 ಮಂದಿ ಗುಣಮುಖವಾಗಿ, ಬಿಡುಗಡೆಯಾಗುತ್ತಿದ್ದಾರೆ. ಇದರಿಂದ ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆ 17ಕ್ಕೆ ಇಳಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.