ತಂಬಾಕು ಸೇವನೆ-ಉಗುಳುವುದು ನಿಷೇಧ

ವಿಶ್ವ ತಂಬಾಕು ವಿರೋಧಿ ದಿನಾಚರಣೆ ಜನಜಾಗೃತಿ ಅಭಿಯಾನಕ್ಕೆ ಚಾಲನೆ

Team Udayavani, Jun 1, 2020, 4:03 PM IST

01-June-17

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬಳ್ಳಾರಿ: ವಿಶ್ವ ತಂಬಾಕು ವಿರೋಧಿ ದಿನಾಚರಣೆ ಅಂಗವಾಗಿ ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿ ಏರ್ಪಡಿಸಿದ್ದ ವಾಹನಗಳ ಮೂಲಕ ಜನಜಾಗೃತಿ ಅಭಿಯಾನಕ್ಕೆ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಮರಿಯಂಬಿ ಮತ್ತು ಜಿಲ್ಲಾ ಆರೋಗ್ಯ ತರಬೇತಿ ಕೇಂದ್ರದ ಪ್ರಾಂಶುಪಾಲ ಡಾ| ಗುರುರಾಜ ಚವ್ಹಾಣ ಭಾನುವಾರ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಮರಿಯಂಬಿ, ಸಮುದಾಯದಲ್ಲಿ ಅನಾದಿಕಾಲದಿಂದಲೂ ಬಳಕೆಯಲ್ಲಿರುವ ತಂಬಾಕಿನ ವಿವಿಧ ಉತ್ಪನ್ನಗಳನ್ನು ಸಾರ್ವಜನಿಕ ಆರೋಗ್ಯದ ಹಿನ್ನೆಲೆಯಲ್ಲಿ ಹಂತಹಂತವಾಗಿ ಬಳಕೆಯನ್ನು ನಿಯಂತ್ರಿಸುವ ಕಾರ್ಯ ಕಾನೂನಾತ್ಮಕ ರೀತಿಯಲ್ಲಿ ಹಾಗೂ ಜಾಗೃತಿ ನೀಡುವ ಮೂಲಕ ಕೈಗೊಳ್ಳಲಾಗುತ್ತಿದೆ. ಇತ್ತೀಚಿಗೆ ಜಾಗತಿಕವಾಗಿ ಕಂಡುಬಂದ ಕೋವಿಡ್ ವೈರಸ್‌ ನಿಯಂತ್ರಣಕ್ಕಾಗಿ ಸಾರ್ವಜನಿಕ ಸ್ಥಳಗಳಲ್ಲಿ ಜಗಿಯುವ ತಂಬಾಕು ಸೇವನೆ ಮತ್ತು ಉಗುಳುವುದನ್ನು ನಿಷೇಧಿಸಲಾಗಿದ್ದು ಇದಕ್ಕಾಗಿ ಸಾರ್ವಜನಿಕರು ಸಂಪೂರ್ಣವಾಗಿ ಸಹಕಾರ ನೀಡುವಂತೆ ಕೋರಿದರು.

“ಯುವ ಪೀಳಿಗೆಯನ್ನು ತಂಬಾಕು ಉದ್ಯಮಗಳ ಕುತಂತ್ರ ಹಾಗೂ ತಂಬಾಕು ಮತ್ತು ನಿಕೋಟಿನ್‌ ಬಳಕೆಯಿಂದ ರಕ್ಷಣೆ ಮಾಡುವುದು’ ಈ ವರ್ಷದ ಧ್ಯೇಯವಾಕ್ಯವಾಗಿದೆ ಎಂದರು. ನಂತರ ವಾಹನದಲ್ಲಿ ಧ್ವನಿವರ್ಧಕದ ಮೂಲಕ ಜನಜಾಗೃತಿ ಅಭಿಯಾನವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಹೊರಟು ಸಂಗಂ ವೃತ್ತ, ರಾಘವೇಂದ್ರ ಚಿತ್ರಮಂದಿರ ವೃತ್ತ, ಮೀನಾಕ್ಷಿ ವೃತ್ತ, ಜಿಲ್ಲಾಧಿಕಾರಿಗಳ ಕಾರ್ಯಾಲಯ, ರಾಯಲ್‌ ವೃತ್ತ, ಬೆಂಗಳೂರು ರಸ್ತೆ, ಬ್ರೂಸ್‌ಪೇಟೆ ಪೋಲೀಸ್‌ ಠಾಣೆ, ಎಪಿಎಂಸಿ ಯಾರ್ಡ್‌, ಬಾಪೂಜಿನಗರ, ಮಿಲ್ಲರ್‌ ಪೇಟೆ, ಶ್ರೀರಾಂಪುರ ಕಾಲೋನಿ, ಎಂ.ಜಿ. ವೃತ್ತ, ಪಟೇಲ್‌ ನಗರ, ಎಸ್‌.ಎನ್‌.ಪೇಟೆ, ಗಾಂಧಿ ನಗರ, ದುರ್ಗಮ್ಮ ಗುಡಿ ವೃತ್ತ, ಎಸ್‌ .ಪಿ.ಸರ್ಕಲ್‌, ಕೋಟೆ, ಕೌಲ್‌ ಬಜಾರ್‌, ಬೆಳಗಲ್‌ ಕ್ರಾಸ್‌, ರೇಡಿಯೋ ಪಾರ್ಕ್‌, ನಂದಿ ಸ್ಕೂಲ್‌ ಹೊಸಪೇಟೆ ರಸ್ತೆ, ಸುಧಾ ಕ್ರಾಸ್‌, ಓಪಿಡಿ ಇಂದಿರಾನಗರ, ದೇವಿನಗರ, ಮೋತಿ ವೃತ್ತ, ರಾಯಲ್‌ ವೃತ್ತ, ಪುನಃ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಮರಳಿತು.

ಈ ಸಂದರ್ಭದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ದುರುಗೇಶ ಎಸ್‌. ಮಾಚನೂರು, ಜಿಲ್ಲಾ ಕಾರ್ಯಕ್ರಮ ಸಂಯೋಜಕಿ ಜಬೀನ್‌ ತಾಜ್‌, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಜಿಲ್ಲಾ ಉಪ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣ ನಾಯಕ, ಡಾ| ಗುರುಪ್ರಸಾದ್‌ ಪುರೋಹಿತ್‌, ಶರತ್‌ ಬಾಬು ಹಾಗೂ ಜಿಲ್ಲಾ ಸರ್ವೇಕ್ಷಣಾ ಘಟಕ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan

Renukaswamy Case: ಏನೋ ಮಾಡಲು ಹೋಗಿ ಇನ್ನೇನೋ ಆಗಿ ಹೋಯ್ತು: ದರ್ಶನ್‌ ಪಶ್ಚಾತ್ತಾಪ

Siruguppa ಸಾವಿನ ಹೆದ್ದಾರಿಯಾದ ರಾಷ್ಟ್ರೀಯ ಹೆದ್ದಾರಿ 150ಎ

Siruguppa ಸಾವಿನ ಹೆದ್ದಾರಿಯಾದ ರಾಷ್ಟ್ರೀಯ ಹೆದ್ದಾರಿ 150ಎ

Vijayanagara Srikrishna Devaraya University Convocation; Honorary doctorates to three including Umashree

Vijayanagara: ಶ್ರೀಕೃಷ್ಣದೇವರಾಯ ವಿವಿ ಘಟಿಕೋತ್ಸವ; ಉಮಾಶ್ರೀ ಸೇರಿ ಮೂವರಿಗೆ ಗೌ.ಡಾಕ್ಟರೇಟ್

Bellary; ದರ್ಶನ್‌ ರನ್ನು ನೋಡಬೇಕು, ಅವರನ್ನು ಮದುವೆಯಾಗುತ್ತೇನೆಂದು ಪಟ್ಟು ಹಿಡಿದ ಮಹಿಳೆ

Bellary; ದರ್ಶನ್‌ ರನ್ನು ನೋಡಬೇಕು, ಅವರನ್ನು ಮದುವೆಯಾಗುತ್ತೇನೆಂದು ಪಟ್ಟು ಹಿಡಿದ ಮಹಿಳೆ

1-d-boss

Bellary Jail; ಪತ್ನಿಯೊಂದಿಗೆ 5 ನಿಮಿಷ ಮಾತನಾಡಿದ ದರ್ಶನ್

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.