ಎಪಿಎಂಸಿ ತಿದ್ದುಪಡಿ ಕಾಯ್ದೆಗೆ ವಿರೋಧ


Team Udayavani, Jun 2, 2020, 7:02 AM IST

ಎಪಿಎಂಸಿ ತಿದ್ದುಪಡಿ ಕಾಯ್ದೆಗೆ ವಿರೋಧ

ವಿಜಯಪುರ: ಕೇಂದ್ರ ಸರಕಾರ ಎಪಿಎಂಸಿ ಕಾಯ್ದೆ 2017ಕ್ಕೆ ತಿದ್ದುಪಡಿ ತಂದಿದ್ದು ರಾಜ್ಯ ಸರ್ಕಾರ ಮೇ 16ರಂದು ಕಾಯ್ದೆ ತಿದ್ದುಪಡಿ ಮಾಡಿ ಅಧಿಸೂಚನೆ ಹೊರಡಿಸಿದ್ದನ್ನು ವಿರೋಧಿ ಸಿ ನಗರದಲ್ಲಿ ವರ್ತಕರು ಸೋಮವಾರ ತಮ್ಮ ವಹಿವಾಟು ಬಂದ್‌ ಮಾಡಿ ಪ್ರತಿಭಟನೆ ನಡೆಸಿದರು. ಅಲ್ಲದೇ ಎಪಿಎಂಸಿ ಕಚೇರಿ ಎದುರು ತಿದ್ದುಪಡಿ ಕಾಯ್ದೆಯ ಅಧಿಸೂಚನೆ ಪ್ರತಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದರು.

ಮರ್ಚೆಂಟ್ಸ್‌ ಅಸೋಸಿಯೇಷನ್‌ ವಿಜಯಪುರ ಹಾಗೂ ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘ ಜಿಲ್ಲಾ ಸಮಿತಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಹೋರಾಟದಲ್ಲಿ ಪಾಲ್ಗೊಂಡ ಪ್ರಮುಖರು ಮಾತನಾಡಿ, ಸದರಿ ತಿದ್ದುಪಡಿ ಕಾಯ್ದೆಯಿಂದ ಬಹು ರಾಷ್ಟ್ರೀಯ ಕಂಪನಿಗಳು ರೈತರಿಂದ ನೇರವಾಗಿ ಖರೀದಿ ಮಾಡುವ ಕಾರಣ ಕೃಷಿ ಮಾರುಕಟ್ಟೆಯಲ್ಲಿ ಸಿಗುವ ಸ್ಪರ್ಧಾತ್ಮಕ ಬೆಲೆ ಸಿಗದೇ ರೈತರು ಸಂಕಷ್ಟಕ್ಕೆ ಸಿಲಕುತ್ತಾರೆ. 165 ಎಪಿಎಂಸಿ ಅಧಿಕಾರ ಮೊಟಕು ಮಾಡುವುದರಿಂದ ರಾಜ್ಯ ಸರಕಾರದ ಬೊಕ್ಕಸಕ್ಕೂ ಶೇ 1.50 ಅಂದರೆ 600 ಕೋಟಿ ರೂ. ಹಾಗೂ ಜಿಎಸ್‌ಟಿ ಆದಾಯ ಕೊರತೆ ಆಗಲಿದೆ. ಈಗಿರುವ ಇ-ಟೆಂಡರ್‌ ವ್ಯವಸ್ಥೆಯಿಂದ ರೈತರಿಗೆ ಸ್ಪರ್ಧಾತ್ಮಕ ಬೆಲೆ ದೊರೆಯುತ್ತಿದ್ದು ವರ್ತಕರಿಗೂ ಅನುಕೂಲವಾಗಿದೆ. ತಿದ್ದುಪಡಿ ಕಾಯ್ದೆ ಜಾರಿಗೆ ಬಂದಲ್ಲಿ ರೈತರು, ವರ್ತಕರು ಮಾತ್ರವಲ್ಲ ಈ ವ್ಯವಸ್ಥೆಯನ್ನು ನಂಬಿರುವ ಎಲ್ಲರ ಬದುಕು ಬೀದಿಗೆ ಬಳಲಿದೆ ಎಂದು ಆಕ್ರೋಶ ಹೊರ ಹಾಕಿದರು.

2017ರಲ್ಲಿ ಎಪಿಎಂಸಿ ಕಾಯ್ದೆ ತಿದ್ದುಪಡಿಗೆ ಮುಂದಾದಾಗ ರೈತರು, ವ್ಯಾಪಾರಸ್ಥರು, ದುಡಿಯುವ ವರ್ಗಗಳ ಜಂಟಿ ಹೋರಾಟದಿಂದ ಕಾಯ್ದೆಯನ್ನು ವಾಪಸ್‌ ಪಡೆಯಲಾಗಿತ್ತು. ಆದ್ದರಿಂದ ಈಗಲೂ ಈ ಕಾಯ್ದೆ ಅನುಷ್ಠಾನಕ್ಕೆ ತರದೇ ರೈತರಿಗೆ, ವ್ಯಾಪಾರಸ್ಥರಿಗೆ ಹಾಗೂ ದುಡಿಯುವ ವರ್ಗಕ್ಕೆ ಕಂಟಕವಾಗುವ ಎಪಿಎಂಸಿ ಕಾಯ್ದೆ ತಿದ್ದುಪಡಿ ಪ್ರಸ್ತಾವವನ್ನು ಕೈ ಬಿಡಬೇಕೆಂದು ಆಗ್ರಹಿಸಿದರು.

ಮರ್ಚೆಂಟ್‌ ಅಸೋಸಿಯೇಷನ್‌ ಅಧ್ಯಕ್ಷ ರವೀಂದ್ರ ಬಿಜ್ಜರಗಿ, ಕರ್ನಾಟಕ ರಾಜ್ಯ ಪ್ರಾಂತ ರೈತ ಸಂಘ ರಾಜ್ಯ ಉಪಾಧ್ಯಕ್ಷ ಭೀಮಶಿ ಕಲಾದಗಿ, ಅಖಂಡ ಕರ್ನಾಟಕ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಅಣ್ಣಾರಾಯ ಈಳಗೇರ, ಸದಾಶಿವ ಬರಟಗಿ, ಸಿದ್ರಾಮ ಅಂಗಡಗೇರಿ, ಭೀಮರಾಯ ಪೂಜಾರಿ, ಬಸನಗೌಡ ಧರ್ಮಗೊಂಡ, ಬಾಳು ಜೇವೂರ, ಚಂದ್ರಾಮ ತೆಗ್ಗಿ, ಶೇಕಪ್ಪ ಕರಾಬಿ, ರಾಮಣ್ಣ ಶಿರಗೋಳ ಇದ್ದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Arrested: ವಿಜಯಪುರ ಪೊಲೀಸರ ಯಶಸ್ವಿ ಕಾರ್ಯಾಚರಣೆ: ಅಂತರಾಜ್ಯ ನಾಲ್ವರು ಕಳ್ಳರ ಬಂಧನ

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

Vijayapura; ಯತ್ನಾಳ ಭಾವಚಿತ್ರವಿದ್ದ ಬೆಂಬಲಿಗರ ಬ್ಯಾನರ್ ಹರಿದ ಕಿಡಿಗೇಡಿಗಳು

dw

Muddebihal: ಬೈಕ್ ವ್ಹೀಲಿಂಗ್ ನಾಲ್ವರು ಯುವಕರ ಬಲಿ

Yathanal

Ganesh Festival: ಪ್ರಸಾದಕ್ಕೆ ಪರವಾನಗಿ: ಹಿಂದೂ ಹಬ್ಬಗಳ ಹತ್ತಿಕ್ಕುವ ಪ್ರಯತ್ನ: ಯತ್ನಾಳ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.