ಗ್ರಾಮಸ್ಥರಿಗೆ ಬಯಲು ಶೌಚವೇ ಗತಿ!


Team Udayavani, Jun 2, 2020, 7:14 AM IST

showchala

ನೆಲಮಂಗಲ: ಬಯಲು ಶೌಚ ಮುಕ್ತ ಉದ್ದೇಶಕ್ಕೆ ನಿರ್ಮಾಣವಾದ ಶೌಚಾಲಯಗಳು ನೀರಿಲ್ಲದೆ ಪಾಳುಬಿದ್ದಿವೆ. ಮೂಲಸೌಕರ್ಯಗಳ ಅಭಿವೃದ್ಧಿಯಾಗಿಲ್ಲ. ಸಾಕಷ್ಟು ಬಾರಿ ಗ್ರಾಪಂ ಅಧಿಕಾರಿ ಗಳಿಗೆ ಮನವಿ ಮಾಡಿದ್ದರೂ ನಿರ್ಲಕ್ಷ್ಯ  ಹಾಗೂ ಅತ್ಯಂತ ಬೇಜವಾಬ್ದಾರಿತನ ದಿಂದ ವರ್ತಿಸಿದ್ದಾರೆ. ಇನ್ನಾದರೂ ಸಂಬಂಧಿಸಿದವರು ಕ್ರಮಕೈ  ಗೊಳ್ಳ ಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಲೂಕಿನ ಅರೆಬೊಮ್ಮನಹಳ್ಳಿ ಗ್ರಾಪಂನ ತಿಮ್ಮಸಂದ್ರದ ಸಮುದಾಯದ ಜನರ 40ಕ್ಕೂ ಹೆಚ್ಚು ಮನೆಗಳಿಗೆ ಶೌಚಾಲಯ ನಿರ್ಮಾಣಕ್ಕೆ ಬಂಡೆ ಸಮಸ್ಯೆ ಎಂದು ಸರಕಾರ 20ಕ್ಕೂ ಹೆಚ್ಚು ಶೌಚಾಲಯಗಳನ್ನು ಒಂದೆಡೆ ನಿರ್ಮಿಸಿದೆ. ಆದರೆ   ವರ್ಷಗಳಾದರೂ ನೀರಿನ ಸರಬರಾಜು ವ್ಯವಸ್ಥೆ ಮಾಡಿಲ್ಲೆ ಎಂಬುದು ಗ್ರಾಮಸ್ಥರು ದೂರಿದ್ದಾರೆ.

ಪಾಳು ಬಿದ್ದಿರುವ ಶೌಚಾಲಯಗಳು: ಬಯಲು ಶೌಚ ಮುಕ್ತ ಗ್ರಾಮದ ಪಟ್ಟಿಗೆ ಸೇರ ಬೇಕಾದ ಗ್ರಾಮದಲ್ಲಿ ಸರಕಾರ ನಿರ್ಮಿಸಿರುವ ಶೌಚಾಲಯಗಳ ಹಸ್ತಾಂತರ ಹಾಗೂ ನೀರು ಸರಬರಾಜು ಮಾಡಿಲ್ಲ. ಹೀಗಾಗಿ ಪಾಳು ಬಿದ್ದಿರುವ  ಶೌಚಾಲಯಗಳ ಬಾಗಿಲು ಮುರಿದಿವೆ. ಸುತ್ತಲೂ ಬೇಲಿ ಬೆಳೆದಿದೆ. ಆದರೆ ಸರಕಾರದ ದಾಖಲೆಯಲ್ಲಿ ಬಯಲು ಶೌಚ ಮುಕ್ತ ಗ್ರಾಪಂ ಎಂದು ಘೋಷಣೆ ಮಾಡಿದ್ದಾರೆ. ಗ್ರಾಮದ ಜನರ ಬಯಲು ಶೌಚ ಮಾತ್ರ ನಿಂತಿಲ್ಲ ಎಂದು ಗ್ರಾಮದ ಯುವಕರು ಆರೋಪಿಸಿದ್ದಾರೆ.

ಮೂಲಸೌಕರ್ಯ ವಂಚಿತ ಜನರು: ತಿಮ್ಮಸಂದ್ರ ಗ್ರಾಮದಲ್ಲಿ 40ಕ್ಕೂ ಹೆಚ್ಚು ಮನೆಗಳಿಗೆ ಉತ್ತಮ ಕುಡಿಯುವ ನೀರಿನ ವ್ಯವಸ್ಥೆ, ಚರಂಡಿ, ಬೀದಿ ದೀಪಗಳು ಸೇರಿ ದಂತೆ ಮೂಲ ಸೌಕರ್ಯ ನೀಡಲು ಗ್ರಾಪಂ ಅಧಿಕಾರಿಗಳು ಮುಂದಾಗಿಲ್ಲ.  ಅನೇಕ ಬಾರಿ ಮನವಿ ಪತ್ರ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ.

ಕೊಳಕು ನೀರು ಸರಬರಾಜು: ಗ್ರಾಮದ ಕೊಳವೆ ಬಾವಿಯಿಂದ ವಾಟರ್‌ ಟ್ಯಾಂಕ್‌ಗೆ ನೀರು ಸರಬರಾಜು ಮಾಡಲು ಹಾಕಿರುವ ಪೈಪುಗಳು ಹೊಡೆದುಹೋಗಿ ಕೊಳಕು ನೀರು ಟ್ಯಾಂಕ್‌ಗೆ ಸೇರುತ್ತಿದೆ. ಆದರೆ ಸರಿಪಡಿಸುವ ಕೆಲಸವಾಗಿಲ್ಲ.  ಕೇಳಿದರೆ ಮಾಡೋಣ ಬಿಡಿ ಎಂದು ಸುಮ್ಮನಾಗುತ್ತಾರೆ ಎಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದರು.

ಪಿಡಿಒ ಕೆಲಸ ಏನು?: ಪಂಚಾಯಿತಿ ಅಭಿವೃದ್ಧಿ ಮಾಡಬೇಕಾದ ಅಧಿಕಾರಿ, ಗ್ರಾಮಗಳಿಗೆ ಬಂದು ಜನರ ಸಮಸ್ಯೆ ಕೇಳಿ ಪರಿಹರಿಸುವ ಬದಲು ಪ್ರಭಾವಿಗಳ ಮಾತಿಗೆ ತಲೆಬಾಗುತ್ತಿದ್ದಾರೆ. ಹತ್ತಾರು ಬಾರಿ ಸಮಸ್ಯೆ ಬಗೆಹರಿಸುವಂತೆ ಮನವಿ  ಪತ್ರ ಸಲ್ಲಿಸಿದರೂ ಸಮಸ್ಯೆ ಹೆಚ್ಚಾಗಿದೆ ವಿನಾ ಬಗೆಹರಿಸಲು ಮಾತ್ರ ಬಂದಿಲ್ಲ. ಪಿಡಿಒ ಕೆಲಸ ಮರೆತು ಅಧಿಕಾರದ ಅಮಲಿನಲ್ಲಿದ್ದಾರೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದರು.

ತಿಮ್ಮಸಂದ್ರ ಗ್ರಾಮದ ಸಮಸ್ಯೆಯ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗಿದೆ. ಶೌಚಾಲಯ ಬಳಕೆ ಹಾಗೂ ನೀರಿನ ಸರಬರಾಜಿಗೆ ತಿಳಿಸಲಾಗಿದೆ. 
-ನಾಗರಾಜು, ಜಿಪಂ ಇಒ

* ಕೊಟ್ರೇಶ್‌ ಆರ್.

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.