ಅಮ್ಮೇರಹಳ್ಳಿ ಕೆರೆಗೆ ಕೆ.ಸಿ.ವ್ಯಾಲಿ ನೀರು


Team Udayavani, Jun 2, 2020, 7:26 AM IST

ammerahalli

ಕೋಲಾರ: ನಗರಕ್ಕೆ ಕುಡಿಯುವ ನೀರಿಗೆ ಮೀಸಲಾಗಿದ್ದ ಅಮ್ಮೇರಹಳ್ಳಿ ಕೆರೆಗೆ ಕೆ.ಸಿ. ವ್ಯಾಲಿ ನೀರು ಹರಿದು ಬರುತ್ತಿದ್ದು, ನೇರವಾಗಿ ಕೊಳವೆ ಬಾವಿಗಳ ಮೂಲಕ ಅಂತರ್ಜಲ ಕಲುಷಿತಗೊಳ್ಳುವ ಭೀತಿ ಎದುರಾಗಿದೆ. ಅಮ್ಮೇರಹಳ್ಳಿ ಹಾಗೂ  ಕೊಂಡರಾಜನಹಳ್ಳಿ ಯ ಗ್ರಾಮಸ್ಥರು ಜಿಲ್ಲಾಡಳಿತದ ಮೇಲೆ ಒತ್ತಡ ಹೇರುವ ಮೂಲಕ ಕುಡಿಯುವ ನೀರಿಗೆ ಮೀಸಲಾಗಿದ್ದ ಅಮ್ಮೇರಹಳ್ಳಿ ಕೆರೆಗೆ ಕೆ.ಸಿ. ವ್ಯಾಲಿ ನೀರು ಹರಿದು ಬರುವಂತೆ ಮಾಡುವಲ್ಲಿ ಸಫ‌ಲವಾಗಿದ್ದರು.

ಒಂದು  ವಾರದಿಂದಲೂ ಕೆ.ಸಿ. ವ್ಯಾಲಿ ನೀರು ಅಮ್ಮೇರಹಳ್ಳಿ ಕೆರೆ ನೀರು ಹರಿದು ಬರು ತ್ತಿದ್ದು, ಮಡೇರಹಳ್ಳಿ ಹಾಗೂ ಅಮ್ಮೇರಹಳ್ಳಿ ಕೆರೆ ಅಂಗಳದಲ್ಲಿ ಕೋಲಾರ ನಗರಸಭೆ ನೀರು ಸರಬರಾಜು ಮಾಡಲು 80ಕ್ಕೂ ಹೆಚ್ಚು ಕೊಳವೆಬಾವಿ  ಕೊರೆದಿತ್ತು. ಕೆಲವು ಕೊಳವೆ ಬಾವಿಗಳು ಬತ್ತಿ ಹೋಗಿದ್ದವು, ಕೆಲವು ಬೋರ್‌ಗಳಲ್ಲಿ ನೀರು ಲಭ್ಯವಾಗುತ್ತಿತ್ತು.

ಅಂತರ್ಜಲ ಕಲುಷಿತ: ಇದೀಗ ಈ ಕೆರೆಗಳಿಗೆ ಕೆ.ಸಿ. ವ್ಯಾಲಿ ನೀರು ಹರಿದು ಬರುತ್ತಿದ್ದು, ಬಹುತೇಕ ಕೊಳವೆ ಬಾವಿಗಳಿಗೆ ನಗರಸಭೆ ಮುಚ್ಚಳ ಹಾಕದೇ ಬಿಟ್ಟಿದೆ. ಇದರಿಂದ ಕೆ.ಸಿ. ವ್ಯಾಲಿ ನೀರು ನೇರವಾಗಿ ಈ ಕೊಳವೆ ಬಾವಿಗಳ ಮೂಲಕ  ಸಾವಿರಾರು ಅಡಿ ಆಳದ ಅಂತರ್ಜಲ ಭೂಗರ್ಭಕ್ಕೆ ನೇರವಾಗಿ ತಲುಪಲಿದೆ. ಇದರಿಂದ ಅಂತರ್ಜಲ ಕಲುಷಿತವಾಗುವ ಭೀತಿ ಎದುರಾಗಿದೆ.

ಆರೋಗ್ಯದ ಮೇಲೆ ಪರಿಣಾಮ: ಇತ್ತೀಚಿಗೆ ಜಿಲ್ಲೆಗೆ ಆಗಮಿಸಿದ್ದ ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿಗೂ ನಗರಸಭಾ ಸದಸ್ಯ ಮುರಳೀಗೌಡ ಕೊಳವೆ ಬಾವಿಗಳಿಗೆ ಮುಚ್ಚಳ ಮನವಿ ಸಲ್ಲಿಸಿದ್ದರು. ಆದರೆ, ಈ ಬಗ್ಗೆ ಇದುವರೆಗೂ  ಯಾವುದೇ ಕ್ರಮ ಕೈಗೊಂಡಿಲ್ಲ. ಇದು ಅಮ್ಮೇರಹಳ್ಳಿ ಹಾಗೂ ಕೊಂಡರಾಜನ ಹಳ್ಳಿ ಮತ್ತು ಈ ನೀರಿನ ಮೇಲೆ ಅವಲಂಬಿತ ವಾಗಿರುವ ನಗರದ ವಿವಿಧ ವಾರ್ಡ್‌ಗಳ ಜನತೆಯ ಆರೋಗ್ಯದ ಮೇಲೆ ಪರಿಣಾಮ ಬೀರುವ ಆತಂಕಕ್ಕೂ  ಕಾರಣವಾಗಿದೆ.

ಆದ್ದರಿಂದ ಕೂಡಲೇ ನಗರಸಭೆ ಮಡೇರಹಳ್ಳಿ ಹಾಗೂ ಅಮ್ಮೇರಹಳ್ಳಿ ಮತ್ತು ಮುಂದಿನ ದಿನಗಳಲ್ಲಿ ಕೆಸಿ ವ್ಯಾಲಿ ನೀರು ಹರಿಯಲಿರುವ ಕೋಲಾರಮ್ಮ ಕೆರೆ ಅಂಗಳದ ಕೊಳವೆ ಬಾವಿಗಳಿಗೆ ಮುಚ್ಚಳ ಹಾಕುವ ಮೂಲಕ ಅಂತರ್ಜಲ ಕಲುಷಿತವಾಗದಂತೆ ಎಚ್ಚರವಹಿಸಬೇಕೆಂದು ಜನತೆ ಒತ್ತಾಯಿಸುತ್ತಿದ್ದಾರೆ.

ಮಡೇರಹಳ್ಳಿ, ಅಮ್ಮೇರಹಳ್ಳಿ ಕೆರೆ ಅಂಗಳದಲ್ಲಿ ನಗರಸಭೆಯಿಂದ 80ಕ್ಕೂ ಹೆಚ್ಚು ಕೊಳವೆ ಬಾವಿ ಕೊರೆಯಲಾಗಿದೆ. ಎಲ್ಲದಕ್ಕೂ ಮುಚ್ಚಳ ಹಾಕಲು 50 ಲಕ್ಷ ರೂ. ಅಗತ್ಯವಿದೆ. ಟೆಂಡರ್‌ ಕರೆಯಲು ಸೂಕ್ತ ಕ್ರಮ ವಹಿಸಲಾಗುತ್ತಿದೆ.
-ಶ್ರೀಕಾಂತ್‌, ಪೌರಾಯುಕ್ತ, ನಗರಸಭೆ

ಅಮ್ಮೇರಹಳ್ಳಿ ಕೆರೆಗೆ ಶೇ.20 ಕೆ.ಸಿ. ವ್ಯಾಲಿ ನೀರು ಹರಿದು ಬಂದಿದೆ. ಕೆಲವೇ ದಿನಗಳಲ್ಲಿ ಕೆರೆ ತುಂಬಲಿದೆ. ನೀರು ನೇರವಾಗಿ ಕೊಳವೆ ಬಾವಿ ಮೂಲಕ ಅಂತರ್ಜಲ ಸೇರುವ ಅಪಾಯವಿದೆ. 
-ರೈತ ಚಲಪತಿ, ಅಮ್ಮೇರಹಳ್ಳಿ

* ಕೆ.ಎಸ್‌.ಗಣೇಶ್‌

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Kolar: ಬಾಲಕಿ ಮೇಲೆ  ಅತ್ಯಾ*ಚಾರ: ಅಪರಾಧಿಗೆ 20 ವರ್ಷ ಶಿಕ್ಷೆ

Sriramulu

BJP President Post: ಅವಕಾಶ ಸಿಕ್ಕಿದರೆ ರಾಜ್ಯಾಧ್ಯಕ್ಷ ಆಗಲು ಸಿದ್ಧ: ಶ್ರೀರಾಮುಲು

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Kolar: ನಶೆಯಲ್ಲಿ ರೈಲು ನಿಲ್ದಾಣಕ್ಕೆ ಕಾರು ನುಗ್ಗಿಸಿದ!

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Kolara-RSS

Kolara: ಹೈಕೋರ್ಟ್‌ ಅನುಮತಿ ಬಳಿಕ ಬಿಗಿ ಭದ್ರತೆಯಲ್ಲಿ ಆರೆಸ್ಸೆಸ್‌ ಪಥಸಂಚಲನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.