ಶೇ.5 ಆಸ್ತಿ ಕರ ರಿಯಾಯ್ತಿ ಜುಲೈವರೆಗೆ ವಿಸ್ತರಣೆ


Team Udayavani, Jun 2, 2020, 8:23 AM IST

ಶೇ.5 ಆಸ್ತಿ ಕರ ರಿಯಾಯ್ತಿ ಜುಲೈವರೆಗೆ ವಿಸ್ತರಣೆ

ಹುಬ್ಬಳ್ಳಿ: ಮಹಾನಗರ ಪಾಲಿಕೆ ವಾಪ್ತಿಯ ಆಸ್ತಿಕರ ಪಾವತಿಗೆ ಶೇ. 5 ರಿಯಾಯಿತಿ ಅವಕಾಶವನ್ನು ಜುಲೈ ಅಂತ್ಯದವರೆಗೆ ವಿಸ್ತರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್ ಹಾಗೂ ಲಾಕ್‌ಡೌನ್‌ ಸ್ಥಿತಿಯಲ್ಲಿ ಈ ವರ್ಷ ಆಸ್ತಿಕರ ಹೆಚ್ಚಳ ಅನುಷ್ಠಾನ ಬೇಡ ಎಂಬುದು ವೈಯಕ್ತಿಕ ಅಭಿಪ್ರಾಯವಾಗಿತ್ತು. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲೂ ಪ್ರಸ್ತಾಪಿಸಿದ್ದೆ, ಮುಖ್ಯಮಂತ್ರಿಯವರ ಗಮನಕ್ಕೂ ತಂದಿದ್ದೆ. ಆದರೆ, ಕೇಂದ್ರ ಸರಕಾರದ ಸೂಚನೆಯಂತೆ ವಿವಿಧ ಅನುದಾನ ಪಡೆಯಲು ಆಸ್ತಿಕರ ಪರಿಷ್ಕರಣೆ ಜಾರಿ, ಒಂದು ದೇಶ ಒಂದು ಪಡಿತರ, ನಗರ ಬಳಕೆದಾರರ ಸುಧಾರಣೆ, ವಿದ್ಯುತ್‌ ಸುಧಾರಣೆ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಈ ಹಿನ್ನೆಲೆಯಲ್ಲಿ ನಗರಾಭಿವೃದ್ಧಿ ಸಚಿವರು ಆಸ್ತಿಕರ ಪರಿಷ್ಕರಣೆ ಜಾರಿ ಅನಿವಾರ್ಯ ಎಂದಿದ್ದರಿಂದ ಅದರ ಅನುಷ್ಠಾನಕ್ಕೆ ಮುಂದಾಗಬೇಕಾಯಿತು ಎಂದರು.

ಆಸ್ತಿಕರವನ್ನು ಶೇ.20-30 ಇದ್ದದ್ದನ್ನು ಶೇ.15-25ಕ್ಕೆ ಇಳಿಸಲಾಗಿದೆ. ಅದೇ ರೀತಿ ಆಸ್ತಿಕರ ಪಾವತಿಯನ್ನು ಏಪ್ರಿಲ್‌ ಅಂತ್ಯದೊಳಗೆ ಪಾವತಿಸಿದರೆ ಶೇ.5 ರಿಯಾಯಿತಿ ನೀಡಲಾಗುತ್ತಿದೆ. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಆಸ್ತಿಕರ ಹೆಚ್ಚಳ ಬೇಡ ಎಂಬುದು ಹಾಗೂ ಜಾರಿಯಾದರೆ ರಿಯಾಯಿತಿ ವಿಸ್ತರಣೆ ಬೇಡಿಕೆ ಇತ್ತು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವರ ಗಮನಕ್ಕೆ ತಂದಿದ್ದರಿಂದ ಇದೀಗ ರಿಯಾಯಿತಿ ಅವಕಾಶವನ್ನು ಜುಲೈ ಅಂತ್ಯದವರೆಗೆ ವಿಸ್ತರಿಸಿ ಸರಕಾರ ಮೇ 22ರಂದು ಆದೇಶ ಹೊರಡಿಸಿದೆ ಎಂದರು.

ಕಳಸಾ-ಬಂಡೂರಿ ನಾಲಾ ಯೋಜನೆಗೆ ರಾಜ್ಯ ಸರಕಾರ ಈಗಾಗಲೇ 500 ಕೋಟಿ ರೂ. ನಿಗದಿ ಪಡಿಸಿದ್ದು, ಹೊಸ ಡಿಪಿಆರ್‌ ಸಿದ್ಧತೆ ನಡೆಯುತ್ತಿದೆ. ಇದಕ್ಕೆ ಗೋವಾದಿಂದ ಎಷ್ಟೇ ಆಕ್ಷೇಪ ವ್ಯಕ್ತವಾದರೂ ಯೋಜನೆ ಜಾರಿಗೆ ಎಲ್ಲ ರೀತಿಯ ಯತ್ನ ಕೈಗೊಳ್ಳಲಾಗುವುದು. ಅದೇ ರೀತಿ ಬೆಣ್ಣೆಹಳ್ಳದ ಅಭಿವೃದ್ಧಿಗೂ ಈಗಾಗಲೇ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

ರೈತರಿಗೆ ಬೆಳೆ ವಿಮೆ ಪರಿಹಾರ ಕುರಿತಾಗಿ ವಿಳಂಬವಾಗಿದ್ದರೆ ಅದನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು. ಶಾಸಕರಾದ ಶಂಕರ ಪಾಟೀಲ ಮುನೇನಕೊಪ್ಪ, ಅಮೃತ ದೇಸಾಯಿ, ಎಸ್‌.ವಿ. ಸಂಕನೂರು, ಪ್ರದೀಪ ಶೆಟ್ಟರ, ಬಿಜೆಪಿ ಮುಖಂಡರಾದ ಮಹೇಶ ಟೆಂಗಿನಕಾಯಿ, ಲಿಂಗರಾಜ ಪಾಟೀಲ, ನಾಗೇಶ ಕಲಬುರ್ಗಿ, ಮಲ್ಲಿಕಾರ್ಜುನ ಸಾವಕಾರ, ಸಂತೋಷ ಚವ್ಹಾಣ ಇನ್ನಿತರರು ಇದ್ದರು.

ಟಾಪ್ ನ್ಯೂಸ್

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Battery theft at Dharwad District Collector’s Office

Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

ಮಾಣಿಪ್ಪಾಡಿ ಪ್ರಕರಣವನ್ನು ಸರಕಾರ ಸಿಬಿಐ ಗೆ ನೀಡಲಿ, ಸತ್ಯಾಸತ್ಯತೆ ಹೊರಬರುತ್ತೆ: ಈಶ್ವರಪ್ಪ

13-

Hubli: ಬಿಜೆಪಿಯವರಿಗೆ ಯಾವುದೇ ಆಸಕ್ತಿ ಇಲ್ಲ. ಅವರಿಗೆ ರಾಜಕಾರಣವೇ ಮುಖ್ಯ :ಡಿ.ಕೆ.ಶಿ

AV-Bellad

Hubballi: ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಮುತ್ತು ಕೊಡ್ತಾರೆ, ನಮಗೆ ಲಾಠಿ ಏಟು: ಬೆಲ್ಲದ್‌

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

Hubli: ಕ್ರಿಮಿನಲ್‌ ಜತೆಯೇ ಪೊಲೀಸ್‌ ಪೇದೆ ಎಸ್ಕೇಪ್! ಹುಬ್ಬಳ್ಳಿಯಲ್ಲಿ ಪೊಲೀಸ್‌ ಕಾರ್ಯಾಚರಣೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

6-ptr

Puttur: ಬಸ್ – ಬೈಕ್‌ ಅಪಘಾತ; ಸವಾರ ಸಾವು

Parliament; Pushing in front of Parliament House; Two MPs injured, allegations against Rahul Gandhi

Parliament; ಸಂಸತ್‌ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್‌ ವಿರುದ್ದ ಆರೋಪ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.