![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 2, 2020, 9:11 AM IST
ಮೈಸೂರು: ಜಿಲ್ಲೆಯ ನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಬುಲೆಟ್ಗಳು ನಾಪತ್ತೆಯಾಗಿವೆ. ಠಾಣೆಯಲ್ಲಿ ಪಾಯಿಂಟ್ 303 ರೈಫಲ್ಸ್ನ ಬುಲೆಟ್ಗಳನ್ನು ಇರಿಸಲಾಗಿದ್ದು, ಅದರಲ್ಲಿ 50 ಬುಲೆಟ್ಗಳು ನಾಪತ್ತೆಯಾಗಿರುವುದು ಸಶಸ್ತ್ರ ಮೀಸಲು ಪಡೆಯ ಪೊಲೀಸ್ ಅಧಿಕಾರಿಗಳ ತಪಾಸಣೆ ವೇಳೆ ಬೆಳಕಿಗೆ ಬಂದಿದೆ.
ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಸಿಬ್ಬಂದಿಗಳಿಗೆ ಬ್ರಿಟಿಷ್ ಕಾಲದ ರೈಫಲ್ ಗಳನ್ನು ನೀಡಲಾಗಿದ್ದು, ತುರ್ತು ಕಾರ್ಯಾಚರಣೆ ವೇಳೆ ಬಳಸಲು ಬುಲೆಟ್ ಗಳನ್ನು ಸಹ ನೀಡಲಾಗಿತ್ತು. ಪ್ರತಿ ವರ್ಷದ ಡಿಎಆರ್ನ ಪೊಲೀಸ್ ಅಧಿಕಾರಿಗಳು ಪ್ರತಿ ಠಾಣೆಗೆ ತೆರಳಿ, ಶಸ್ತ್ರಾಸ್ತ್ರಗಳ ಬಗ್ಗೆ ಮಾಹಿತಿ ಪಡೆದು ಹಿಂದಿರುಗುತ್ತಿದ್ದರು.
ಅದರಂತೆ ಶನಿವಾರ ಕೂಡ ಪೊಲೀಸ್ ಅಧಿಕಾರಿಗಳು ಬಂದು ತಪಾಸಣೆ ನಡೆಸಿದ್ದು, 50 ಬುಲೆಟ್ಗಳು ನಾಪತ್ತೆಯಾಗಿರುವುದು ಕಂಡು ಬಂದಿದೆ. ತಕ್ಷಣ ಎಸ್ಪಿ ಅವರ ಗಮನಕ್ಕೆ ಬಂದಿದೆ. ಮತ್ತೆ ಎಲ್ಲಾದರೂ ಬುಲೆಟ್ಗಳು ಮಿಸ್ ಆಗಿದೆಯೇ ಎಂಬುದರ ಬಗ್ಗೆ ಇಡೀ ಠಾಣೆಯಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ಬಳಿಕ ಬುಲೆಟ್ಗಳು ಸಿಗದೇ ಇರವುದು ಗಮನಕ್ಕೆ ಬಂದಿದೆ. ಈ ಹಿನ್ನಲೆಯಲ್ಲಿ ಎಸ್ ಪಿ ರಿಷ್ಯಂತ್ ಬುಲೆಟ್ಗಳ ನಾಪತ್ತೆಯ ಬಗ್ಗೆ ತನಿಖೆಗೆ ಆದೇಶ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಎಸ್ ಪಿ ಸಿ.ಬಿ.ರಿಷ್ಯಂತ್, ನರಸೀಪುರ ಪೊಲೀಸ್ ಠಾಣೆಯಲ್ಲಿ ಪಾಯಿಂಟ್ 303 ರೈಫಲ್ನ ಬುಲೆಟ್ಗಳು ನಾಪತ್ತೆಯಾಗಿರುವುದು ಡಿಎಆರ್ನ ಪೊಲೀಸ್ ಅಧಿಕಾರಿಗಳ ತಪಾಸಣೆ ವೇಳೆ ಪತ್ತೆಯಾಗಿದೆ. ಈ ಸಂಬಂಧ ತನಿಖೆಗೆ ಆದೇಶದ ಮಾಡಲಾಗಿದ್ದು, ತನಿಖೆ ಬಳಿಕ ಹೆಚ್ಚಿನ ಮಾಹಿತಿ ತಿಳಿಯಲಿದೆ ಎಂದಿದ್ದಾರೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.