ಕುಡಿಯುವ ನೀರು ಅನುದಾನ ದುರ್ಬಳಕೆ; ತನಿಖೆಗೆ ಆಗ್ರಹ


Team Udayavani, Jun 2, 2020, 10:54 AM IST

ಕುಡಿಯುವ ನೀರು ಅನುದಾನ ದುರ್ಬಳಕೆ; ತನಿಖೆಗೆ ಆಗ್ರಹ

ಬೆಳಗಾವಿ: ಕಳೆದ 2015-16 ರಿಂದ 2019-20ರ ಅವಧಿಯಲ್ಲಿ ಕುಡಿಯುವ ನೀರಿನ ಕಾಮಗಾರಿ ಹೆಸರಿನಲ್ಲಿ ಬೋಗಸ್‌ ಬಿಲ್ಲು, ಕಳಪೆ ಕಾಮಗಾರಿ, ಹೆಚ್ಚುವರಿ   ಹಣ ಪಾವತಿಯಿಂದ ಆಗಿರುವ ಹಣದ ದುರ್ಬಳಕೆ ಬಗ್ಗೆ ಸಮಗ್ರ ತನಿಖೆ ನಡೆಸಿ, ಹಣವನ್ನು ಮರಳಿ ಸರಕಾರಕ್ಕೆ ಪಡೆದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಮದುರ್ಗದ ಮಾಹಿತಿ ಹಕ್ಕು ಕಾರ್ಯಕರ್ತ ಶ್ರೀನಿವಾಸಗೌಡ ಪಾಟೀಲ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ರಾಮದುರ್ಗ ತಾಲೂಕಿನ ಸೊಪ್ಪಡ್ಲ, ಓಬಳಾಪೂರ ಎಸ್‌ ಎಲ್‌ಟಿ, ಓಬಳಾಪೂರ ಆರ್‌ಎಲ್‌ಟಿ, ಓಬಳಾಪೂರ ಗ್ರಾಮಗಳಲ್ಲಿ ಗ್ರಾಮೀಣ  ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 2015-16 ರಿಂದ 2019-20 ರ ಅವಧಿಯಲ್ಲಿ ಕುಡಿಯುವ ನೀರು ಯೋಜನೆಗೆ 1 ಕೋಟಿಗೂ ಹೆಚ್ಚು ಅನುದಾನ ಮೀಸಲಿಡಲಾಗಿತ್ತು. ಆದರೆ, ಸಾರ್ವಜನಿಕರಿಗೆ ಶಾಶ್ವತವಾಗಿ ಕುಡಿಯುವ ನೀರಿನ ವ್ಯವಸ್ಥೆ ಆಗಿಲ್ಲ. ಅಧಿಕಾರಿಗಳು ಕೆಲ ವ್ಯಕ್ತಿಗಳ ಜೊತೆ ಸೇರಿಕೊಂಡು ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಬೋಗಸ್‌ ಬಿಲ್ಲು, ಕಳಪೆ ಕಾಮಗಾರಿ ತೋರಿಸಿ ಹಣ ಪಡೆದಿರುವುದು, ಹೆಚ್ಚುವರಿ ಹಣ ಪಾವತಿ, ನಕಲಿ ದಾಖಲೆ ಸೃಷ್ಟಿಸಿ ಭ್ರಷ್ಟಾಚಾರ ಮಾಡಲಾಗಿದೆ. ಓಬಳಾಪೂರ ತಾಂಡಾದಲ್ಲಿಯೂ ಕಳಪೆ ಕಾಮಗಾರಿ ಮುಂದುವರೆದಿದೆ. ಮಾಹಿತಿ ಹಕ್ಕು ಅಡಿಯಲ್ಲಿ ಪೂರ್ಣ ಮಾಹಿತಿ ಒದಗಿಸಿಲ್ಲ ಎಂದು ದೂರಿದ್ದಾರೆ. 2019-20 ನೇ ಸಾಲಿನ ಕುಡಿಯುವ ನೀರಿನ ಯೋಜನೆಯಲ್ಲಿ ಓಬಳಾಪೂರ ಗ್ರಾಮಕ್ಕೆ 12 ಲಕ್ಷ, ಸೊಪ್ಪಡ್ಲ ಗ್ರಾಮಕ್ಕೆ 10 ಲಕ್ಷ, ಓಬಳಾಪೂರ ಎಸ್‌ಎಲ್‌ಟಿ ತಾಂಡಾಗೆ 35 ಲಕ್ಷ, ಓಬಳಾಪೂರ ಆರ್‌ಎಲ್‌ಟಿ ಗ್ರಾಮಕ್ಕೆ 10 ಲಕ್ಷ ರೂ ಯೋಜನೆ ರೂಪಿಸಲಾಗಿದೆ. ಆದರೆ, ಓಬಳಾಪೂರ ಎಸ್‌ಎಲ್‌ಟಿ ತಾಂಡಾದಲ್ಲಿ ಕಳಪೆ ಕಾಮಗಾರಿ ಮಾಡಲಾಗಿದೆ. ಅಲ್ಲದೆ ಅಪೂರ್ಣ ಕಾಮಗಾರಿಗೆ 30, 85, 419 ರೂ. ಬಿಲ್ಲು ಸಂದಾಯ ಮಾಡಲಾಗಿದೆ. ಕೋವಿಡ್‌ ಲಾಕ್‌ಡೌನ್‌ ಸಮಯದಲ್ಲಿಯೇ 13,24,104 ಹಣ ಪಾವತಿಸುವ ಮೂಲಕ ಅಧಿಕಾರಿಗಳುಕರ್ತವ್ಯ ಲೋಪವೆಸಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಈ ಕಾಮಗಾರಿಗಳಲ್ಲಿ ಸುಮಾರು ಒಂದು ಕೋಟಿ ರೂ. ಅವ್ಯವಹಾರ ನಡೆದಿದ್ದು ವಿಶೇಷ ತಂಡ ರಚಿಸುವ ಮೂಲಕ ಸಮಗ್ರ ತನಿಖೆ ನಡೆಸಬೇಕು. ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.