ರಾಜ್ಯಸಭೆಗೆ ಹೋಗುವ ಆಲೋಚನೆಯಿಲ್ಲ!


Team Udayavani, Jun 3, 2020, 6:43 AM IST

rajyasabhe-hdk

ಚನ್ನಪಟ್ಟಣ: ವಿಧಾನಸಭೆ ಕ್ಷೇತ್ರ ಬಿಟ್ಟುಕೊಟ್ಟು ರಾಜ್ಯಸಭೆಗೆ ಹೋಗುವ ಆಲೋಚನೆಯಿಲ್ಲ. ಮುಂದೆಯೂ ಇದೇ ಕ್ಷೇತ್ರದಲ್ಲೇ ಸ್ಪರ್ಧಿಸುತ್ತೇನೆ. ರಾಜ್ಯಸಭೆಗೆ ಯಾರನ್ನು ಕಳುಹಿಸಬೇಕೆಂಬ ಬಗ್ಗೆ ಪಕ್ಷದಲ್ಲಿ ಇನ್ನೂ ಚರ್ಚೆ ನಡೆದಿಲ್ಲ  ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು. ನಗರಸಭೆ ಆವರಣದಲ್ಲಿ ಪೌರಕಾರ್ಮಿಕ ರಿಗೆ ಆಹಾರ ಕಿಟ್‌ ವಿತರಿಸಿ ಮಾತನಾಡಿದರು.

ಜನಸಾಮಾನ್ಯರ ಕಷ್ಟವನ್ನು ಹತ್ತಿರದಿಂದ ತಿಳಿದುಕೊಳ್ಳಬೇಕೆಂಬ  ಉದ್ದೇಶದಿಂದ ನಿಖೀಲ್‌ ಅವರನ್ನು ಜತೆಯಲ್ಲಿ ಕರೆದುಕೊಂಡು ಬರುತ್ತಿದ್ದೇನೆಯೇ, ಹೊರತು ಅವರನ್ನು ಕ್ಷೇತ್ರದಲ್ಲಿ ಪ್ರತಿಷ್ಠಾಪಿಸಲಲ್ಲ. ಇದುವರೆಗೆ ರಾಜ್ಯಸಭೆ ಚುನಾವಣೆ ಸಂಬಂಧ ಯಾವ ಪಕ್ಷದೊಂದಿಗೂ ಚರ್ಚಿಸಿಲ್ಲ ಎಂದರು.  ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ  ಹೋರಾಟದಿಂದಲೇ ಜನರಿಂದ ಆರಿಸಿಯೇ ಅಧಿಕಾರ ಪಡೆದುಕೊಂಡಿದ್ದಾರೆ. ಹಿಂಬಾಗಿಲಿ ನಿಂದ ಅಧಿಕಾರ ಪಡೆದುಕೊಂಡಿಲ್ಲ. ಸದ್ಯ ಕಾಂಗ್ರೆಸ್‌ಗೆ 1, ಬಿಜೆಪಿಗೆ 2 ಸ್ಥಾನಗಳು ಅನಾಯಾಸವಾಗಿ  ದಕ್ಕಲಿವೆ. 4ನೇ ಸ್ಥಾನ ಇನ್ನೂ ತೀರ್ಮಾನ ಮಾಡಿಲ್ಲ ಎಂದರು.

ಶೋ ಕೊಡಲು ಬರ್ತೀಲ್ಲ: ಕ್ಷೇತ್ರದ ಜನತೆ ಸಂಕಷ್ಟಕ್ಕೀಡಾದಾಗ ಯಾರೂ ಬಂದು ನೆರವಿಗೆ ನಿಲ್ಲಲಿಲ್ಲ. ಎಪಿಎಂಸಿ ಬಳಿ ಕಾರ್ಮಿಕರ ಮನೆಗಳು ಜಲಾವೃತವಾದಾಗ, ರೈತರ ಬಾಳೆ, ತೆಂಗು ಬೆಳೆಗಳು ಬಿರುಗಾಳಿಗೆ ನೆಲಕಚ್ಚಿದಾಗ  ವೈಯಕ್ತಿಕವಾಗಿ ಪರಿಹಾರ ನೀಡಿದ್ದೇನೆ. ಶೋ ಕೊಡುವ ಜಾಯಮಾನ ನನ್ನದಲ್ಲ. ಜನಸೇವೆಯನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ. ಅನಾಹುತ ಸಂಭವಿಸಿದಾಗ ಕಾಂಗ್ರೆಸ್‌ ನಾಯಕರು ಬಂದಿದ್ದರಾ? ಎಂದು ಹರಿಹಾಯ್ದರು. ನಾನೇನು ಅಭಿವೃದಿಟಛಿ ಮಾಡಿಲ್ಲ, ಎಲ್ಲವನ್ನೂ ಕಾಂಗ್ರೆಸ್‌ನವರೇ ಮಾಡಿದ್ದಾರೆ. ಕೆಲವರು ರಾಮನಗರ ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಗೆಲ್ಲಿಸಿಕೊಳ್ಳುತ್ತೇವೆಂದು ಹೊರಟಿದ್ದಾರೆ.

ಕುಮಾರಸ್ವಾಮಿ ಸಿಎಂ ಆಗಿದ್ದಾಗ ಭಾರೀ ಬೆಂಬಲ  ಕೊಟ್ಟಿದ್ದೇವೆಂದು ಅನುಕಂಪ ಪಡೆದುಕೊಳ್ಳಲು ಹೊರಟಿದ್ದಾರೆ. ಸಿಎಂ ಆಗಿದ್ದಾಗ ಯಾರು, ಯಾವ ರೀತಿ ಬೆಂಬಲ ಕೊಟ್ಟಿದ್ದಾರೆಂಬುದು ತಿಳಿದಿದೆ. ಹೇಗೆ ಪ್ರಚಾರ ತೆಗೆದುಕೊಂಡಿದ್ದಾರೆಂದು ತಿಳಿದಿದೆ. ರಾಮನಗರ ಜಿಲ್ಲೆ ವಶಕ್ಕೆ  ಪಡೆಯುತ್ತೇವೆಂದು ಹೊರಟಿದ್ದಾರೆ. ಜಿಲ್ಲೆಯಲ್ಲಿ ನನ್ನ ಕಾರ್ಯಕರ್ತರು ಶಕ್ತಿಯುತವಾಗಿದ್ದಾರೆ. ಅವರು ಸುಮ್ಮನೆ ಕುಳಿತಿಲ್ಲ. ಡಬಲ್‌ ಗೇಮ್‌ ರಾಜಕೀಯ ಬಿಡಬೇಕೆಂದು ಪರೋಕ್ಷವಾಗಿ ಕಾಂಗ್ರೆಸ್‌ ವಿರುದಟಛಿ ಹರಿಹಾಯ್ದರು.

ನಾನು  ಯಾರ ಋಣದಲ್ಲೂ ಇಲ್ಲ: ನನ್ನನ್ನು ಸಿಎಂ ಮಾಡಿ ಎಂದು ಯಾರ ಬಳಿಗೂ ಹೋಗ ಲಿಲ್ಲ. ನಾಲ್ಕು ವರ್ಷ ಸಮಸ್ಯೆಯಾಗದಂತೆ ನೋಡಿಕೊಳ್ಳುತ್ತೇನೆ ಎಂದು ಬಜೆಪಿಯವರು ಹೇಳಿದಾಗಲೂ ನಾನು ಹೋಗಿಲ್ಲ. ನಾನು ರೈತರ ಋಣದಲ್ಲಿದ್ದೇನೆ. 14 ತಿಂಗಳಲ್ಲಿ 24 ಸಾವಿರ ಕೋಟಿ ರೂ. ಒದಗಿಸಿ ರೈತರ ಸಾಲ ಮನ್ನಾ ಮಾಡಿದ್ದೇನೆ. ಎಂದೆಂದಿಗೂ ಅವರ ಋಣ ತೀರಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಜೆಡಿಎಸ್‌ ಯುವ ಘಟಕದ ರಾಜಾಧ್ಯಕ್ಷ  ನಿಖೀಲ್‌ಕುಮಾರಸ್ವಾಮಿ, ತಾಲೂಕು ಘಟಕದ ಅಧ್ಯಕ್ಷ ಜಯಮುತ್ತು, ನಗರ ಘಟಕದ ಅಧ್ಯಕ್ಷ ರಾಜಣ್ಣ, ಪಿಎಲ್‌ಡಿ ಬ್ಯಾಂಕ್‌ ಅಧ್ಯಕ್ಷ ಗೋವಿಂದಹಳ್ಳಿ ನಾಗರಾಜು, ಎಂ.ಸಿ. ಕರಿಯಪ್ಪ, ಹಾಪ್‌ಕಾಮ್ಸ್‌ ದೇವರಾಜು, ವಡ್ಡರಹಳ್ಳಿ ರಾಜಣ್ಣ,  ಹನುಮಂತು, ಬೋರ್‌ ವೆಲ್‌ ರಾಮಚಂದ್ರು ಸೇರಿದಂತೆ ತಾಲೂಕು ಜೆಡಿಎಸ್‌ ಮುಖಂಡರು ಹಾಜರಿದ್ದರು.

ಟಾಪ್ ನ್ಯೂಸ್

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

BY Election: ಚನ್ನಪಟ್ಟಣ ಜೆಡಿಎಸ್‌ಗೇ ಉಳಿಸಿಕೊಳ್ಳಲು ತೀರ್ಮಾನ? ಮೈತ್ರಿ ಅಭ್ಯರ್ಥಿ ಜಿಜ್ಞಾಸೆ

Channapatna: ಜೆಡಿಎಸ್‌ಗೇ ಉಳಿಸಿಕೊಳ್ಳಲು ತೀರ್ಮಾನ? ಮೈತ್ರಿ ಅಭ್ಯರ್ಥಿ ಜಿಜ್ಞಾಸೆ

Channapatna ಗರಿಗೆದರಿದ ʼಕೈʼ ಕಸರತ್ತು; ಡಿಕೆ ಸುರೇಶ್‌ ಪರವಾಗಿ ಎಂ.ಸಿ.ಅಶ್ವಥ್ ಚಂಡಿಕಾಯಾಗ

1-yog

Channapatna By Election; ಮೈತ್ರಿ ಅಭ್ಯರ್ಥಿ ನಾನೆ: ಸಿ.ಪಿ.ಯೋಗೇಶ್ವರ್ ವಿಶ್ವಾಸದ ನುಡಿ

1-bb-ele

Channapatna By Election; 3 ಸಾವಿರ ಮಂದಿಗೆ ಸಿದ್ದ ಮಾಡಿದ್ದ ಬಿರಿಯಾನಿ ವಶಕ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.