ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಕಲ ಸಿದ್ಧತೆ

ಯಾವುದೇ ವಿದ್ಯಾರ್ಥಿ ವಂಚಿತರಾಗದಂತೆ ಅಗತ್ಯ ಕ್ರಮಕ್ಕೆ ಸೂಚನೆ

Team Udayavani, Jun 3, 2020, 11:26 AM IST

03-June-05

ದಾವಣಗೆರೆ: ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಸಭೆಯಲ್ಲಿ ಎಸ್‌.ಆರ್‌. ಉಮಾಶಂಕರ್‌ ಮಾತನಾಡಿದರು

ದಾವಣಗೆರೆ: ಕೋವಿಡ್ ವೈರಸ್‌ ಹಿನ್ನೆಲೆಯಲ್ಲಿ ಎಲ್ಲಾ ಮುಂಜಾಗ್ರತಾ ಕ್ರಮಗಳೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆಗಿರುವ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್‌.ಆರ್‌. ಉಮಾಶಂಕರ್‌ ತಿಳಿಸಿದ್ದಾರೆ.

ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಮಂಗಳವಾರ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರ್ವಸಿದ್ಧತೆಗಾಗಿ ಆಯೋಜಿಸಲಾಗಿದ್ದ ಶಿಕ್ಷಣ ಇಲಾಖೆಯ ಅಧಿಕಾರಿಗ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜೂ.25ರಿಂದ ಆರಂಭವಾಗುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಿಂದ ಯಾವುದೇ ವಿದ್ಯಾರ್ಥಿ ವಂಚಿತರಾಗದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆ ವಿದ್ಯಾರ್ಥಿ ಜೀವನದಲ್ಲಿ ಬಹಳ ಮುಖ್ಯವಾದ ಘಟ್ಟ. ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಪರೀಕ್ಷೆ ಬರೆಯಲು ಮಾನಸಿಕವಾಗಿ ಸಿದ್ಧರಾಗಿರುವಂತೆ ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಜೂ.25 ರಿಂದ ಜು.4ರವರೆಗೆ ನಡೆಯುವ ಪರೀಕ್ಷೆಯಲ್ಲಿ ಒಂದು ಕೊಠಡಿಯಲ್ಲಿ 18ರಿಂದ 20 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪ್ರತಿ ವಿದ್ಯಾರ್ಥಿಗೆ 2 ಮಾಸ್ಕ್ ಹಾಗೂ ಸ್ಯಾನಿಟೈಸರ್‌ ವಿತರಣೆ ಮಾಡಲಾಗುವುದು. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್‌ ಸ್ಕ್ರೀನಿಂಗ್‌ ವ್ಯವಸ್ಥೆ ಮಾಡಲಾಗುವುದು, ಸಾಮಾಜಿಕ ಅಂತರ ಒಳಗೊಂಡಂತೆ ಎಲ್ಲ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಬಹುದಿನಗಳಿಂದ ವಿದ್ಯಾರ್ಥಿಗಳು ಪರೀಕ್ಷೆ ಎದುರು ನೋಡುತ್ತಿದ್ದರು. ಈಗ ಪರೀಕ್ಷೆ ದಿನಾಂಕ ಪ್ರಕಟಗೊಂಡಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಿಲ್ಲ. ಕೆಲ ರಾಜ್ಯಗಳಲ್ಲಿ ಈಗಾಗಲೇ ಪರೀಕ್ಷೆ ನಡೆಸಲಾಗುತ್ತಿದೆ. ರಾಜ್ಯದಲ್ಲೂ ಪರೀಕ್ಷೆ ನಡೆಸಲು ಎಲ್ಲಾ ರೀತಿಯಿಂದಲೂ ಚರ್ಚಿಸಿ ಹಾಗೂ ಶಿಕ್ಷಣ ತಜ್ಞರ ಅಭಿಪ್ರಾಯ ಸಂಗ್ರಹಿಸಿ ಜೊತೆಗೆ ಅಧಿಕಾರಿಗಳ ಸಭೆ ನಡೆಸಿ ಸರ್ಕಾರ ನಿರ್ಧಾರ ಕೈಗೊಂಡಿದೆ. ಕೋವಿಡ್ ಬಗ್ಗೆ ವಿದ್ಯಾರ್ಥಿಗಳಲ್ಲಿ ಯಾವುದೇ ಆತಂಕ ಬೇಡ. ಬದಲಾಗಿ ಎಚ್ಚರಿಕೆಯಿಂದ ಇರಬೇಕು ಎಂದು ಎಂದು ತಿಳಿಸಿದರು.

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಖಾಸಗಿ ಶಾಲಾ ವಾಹನ ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ. ಬಸ್  ಸಂಚಾರ ಇಲ್ಲದಿರುವೆಡೆ ವಿದ್ಯಾರ್ಥಿಗಳನ್ನು ಕರೆದುಕೊಂಡು ಪರೀಕ್ಷಾ ಕೇಂದ್ರಗಳಿಗೆ ಬಿಡಬೇಕು. ಬಳಿಕ ಅವರ ಕೇಂದ್ರಸ್ಥಾನದಿಂದ ಕರೆದುಕೊಂಡ ಹೋಗಬೇಕು ಎಂದರು.

ಬಹುತೇಕ ಜಿಲ್ಲೆಗಳಲ್ಲಿ ಹಾಗೂ ಗಡಿಭಾಗದಲ್ಲಿನ ಶಾಲೆಗಳು ಕ್ವಾರಂಟೈನ್‌ ಕೇಂದ್ರಗಳಾಗಿದ್ದುವು. ಅಂತಹ ಶಾಲೆಗಳು ಪರೀಕ್ಷಾ ಕೇಂದ್ರಗಳಾಗಿದ್ದಲ್ಲಿ ಅವುಗಳನ್ನು ಮೂರು ದಿನಗಳ ಮುಂಚಿತವಾಗಿ ಡಿಸ್‌ ಇನ್‌ಫೆಕ್ಷನ್‌ ಮಾಡಬೇಕು. ಜಾಲಿನಗರದ ದುರ್ಗಾಬಿಂಕಾ ಶಾಲೆ ಕಂಟೈನ್‌ಮೆಂಟ್‌ ಝೋನ್‌ನಲ್ಲಿರುವ ಕಾರಣಕ್ಕೆ ಪೂರಕ ಶಾಲೆ ಗೊತ್ತು ಮಾಡಲಾಗಿದೆ ಎಂದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾತನಾಡಿ, ವಿವಿಧ ಇಲಾಖೆಗಳ ಸಮನ್ವಯ ಸಾಧಿಸಿಕೊಂಡು ಸಹಕಾರದೊಂದಿಗೆ ಯಶಸ್ವಿಯಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲಾಗುವುದುಎಂದರು.  ಡಿಡಿಪಿಐ ಸಿ.ಆರ್‌. ಪರಮೇಶ್ವರಪ್ಪ  ಮಾತನಾಡಿ, ಒಟ್ಟು 435 ಸರ್ಕಾರಿ ಶಾಲೆಗಳಲ್ಲಿ
1150 ಕೊಠಡಿಗಳ ವ್ಯವಸ್ಥೆ ಇದೆ, ಒಂದು ಕೊಠಡಿಯಲ್ಲಿ 18 ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಬರೆಯಲು ಅವಕಾಶವಿದೆ. ಒಟ್ಟು 20.927 ಪರೀಕ್ಷಾರ್ಥಿಗಳಿದ್ದಾರೆ. 10.311 ಬಾಲಕರು, 10.616 ಬಾಲಕಿಯರಿದ್ದಾರೆ. ಸ್ಕೌಟ್‌ ಆ್ಯಂಡ್‌ ಗೈಡ್ಸ್‌ ಸಂಸ್ಥೆಯಿಂದ 22 ಸಾವಿರ ಮಾಸ್ಕ್ ನೀಡಲಾಗಿದೆ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

1-iran

Hijab ಧರಿಸದೆ, ಕೇಶ ಕಟ್ಟದೇ ಬೀದಿಗಿಳಿದ ಇರಾನ್‌ ಮಹಿಳೆಯರು!

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; Argument over flag hoisting: Complaint filed against 8 people

Davanagere; ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ: 8 ಜನರ ವಿರುದ್ಧ ದೂರು ದಾಖಲು

ಇನ್ನು ಹತ್ತು ವರ್ಷಗಳಲ್ಲಿ ದಾವಣಗೆರೆ ಐಎಎಸ್‌ ಹಬ್‌- ಜಿ.ಬಿ. ವಿನಯ್‌ ಕುಮಾರ್‌

Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್‌: ರೇಣು

Congress ಆಡಳಿತ ವೈಫಲ್ಯ ಮರೆಮಾಚಲು ಮಾನವ ಸರಪಳಿ ಗಿಮಿಕ್‌: ರೇಣು

Davanagere-JCB

Davanagere: ಗಣೇಶ ವಿಸರ್ಜನೆ ವೇಳೆ ಜೆಸಿಬಿ ಹರಿದು ಮಹಿಳೆ ಸೇರಿ 5-6 ಮಂದಿಗೆ ಗಂಭೀರ ಗಾಯ

davanagere

Davanagere: 80 ಕಿಲೋಮೀಟರ್ ಉದ್ದದ ಮಾನವ ಸರಪಳಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

cOurt

Udupi: ಪಾತಕಿ ಬನ್ನಂಜೆ ರಾಜ ಸಹಚರನಿಗೆ ಜಾಮೀನು

Suside-Boy

Padubidri: ಸ್ನಾನದ ಕೋಣೆಯಲ್ಲಿ ವಿಷ ಕುಡಿದು ಆತ್ಮಹತ್ಯೆ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

Dhankar

CBI ಪಂಜರದ ಗಿಳಿ: ಸುಪ್ರೀಂ ಅಭಿಪ್ರಾಯಕ್ಕೆ ಉಪರಾಷ್ಟ್ರಪತಿ ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.