ಬಿತ್ತನೆ ಬೀಜ-ಕೃಷಿ ಪರಿಕರ ವಿತರಿಸಲು ಕ್ರಮ
Team Udayavani, Jun 4, 2020, 4:25 PM IST
ಸಾಂದರ್ಭಿಕ ಚಿತ್ರ
ಚಳ್ಳಕೆರೆ: ಪ್ರಸ್ತುತ ವರ್ಷದ ಮುಂಗಾರು ಈಗಾಗಲೇ ಪ್ರಾರಂಭವಾಗಿದೆ. ಎಲ್ಲೆಡೆ ಉತ್ತಮ ಹದ ಮಳೆಯಾದ ಹಿನ್ನೆಲೆಯಲ್ಲಿ ರೈತರು ತಮ್ಮ ಕೃಷಿ ಚಟುವಟಿಕೆ ಆರಂಂಭಿಸಿದ್ದು, ಬಿತ್ತನೆ ಕಾರ್ಯಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ರೈತರಿಗೆ ಬಿತ್ತನೆ ಬೀಜ ಹಾಗೂ ಕೃಷಿ ಪರಿಕರ ವಿತರಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಇಲಾಖೆಯ ಉಪ ಕೃಷಿ ನಿರ್ದೇಶಕ-2 ಪ್ರಭಾಕರ್ ತಿಳಿಸಿದರು.
ಇಲಾಖೆ ಆವರಣದಲ್ಲಿ ತಾಲೂಕಿನ ರೈತರಿಗೆ ಸಬ್ಸಿಡಿ ದರದಲ್ಲಿ ವಿತರಣೆ ಮಾಡುವ ಶೇಂಗಾ ಬೀಜ ಹಾಗೂ ಇತರೆ ಬೀಜಗಳನ್ನು ವಿತರಿಸುವ ಸಂದರ್ಭದಲ್ಲಿ ರೈತರಿಗೆ ಅನೇಕ ಉಪಯುಕ್ತ ಮಾಹಿತಿ ನೀಡಿದರು. ಪ್ರಸ್ತುತ ಸ್ಥಿತಿಯಲ್ಲಿ ಎಲ್ಲರೂ ಸಹ ತಮ್ಮ ಜಮೀನುಗಳಿಗೆ ಶೇಂಗಾ ಬೀಜವನ್ನು ಬಿತ್ತಲು ಹೆಚ್ಚು ಉತ್ಸಾಹಕರಾಗಿದ್ದು, ಶೇಂಗಾದ ಜೊತೆಗೆ ಇತರೆ ಬೀಜಗಳನ್ನು ಬಿತ್ತುವಂತೆ ಮನವಿ ಮಾಡಿದರು. ರೈತರು ತಮ್ಮ ಯಾವುದೇ ಸಮಸ್ಯೆಗಳಿದ್ದಲ್ಲಿ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಿ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವಂತೆ ಮನವಿ ಮಾಡಿದರು.
ತಾಪಂ ಅಧ್ಯಕ್ಷೆ ವಿಜಯಲಕ್ಷ್ಮೀ ಬಿತ್ತನೆ ಬೀಜ ವಿತರಿಸಿ ಮಾತನಾಡಿ, ಕೃಷಿ ಇಲಾಖೆ ಯಾವುದೇ ಸಂದರ್ಭದಲ್ಲೂ ರೈತರಿಗೆ ಕೊರತೆ ಉಂಟಾಗದಂತೆ ಜಾಗ್ರತೆ ವಹಿಸಬೇಕು ಎಂದರು. ಸಹಾಯಕ ಕೃಷಿ ನಿರ್ದೇಶಕ ಡಾ| ಮೋಹನ್ಕುಮಾರ್ ಮಾತನಾಡಿ, ತಾಲೂಕಿನಾದ್ಯಂತ ಒಟ್ಟು 85 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡುವ ಅವಕಾಶವಿದೆ. ಈಗಾಗಲೇ ಸುಮಾರು 11 ಸಾವಿರ ಕ್ವಿಂಟಲ್ ಶೇಂಗಾ ಬಿತ್ತನೆ ಬೀಜ ದಾಸ್ತಾನು ಮಾಡಲಾಗಿದೆ. ತಾಲ್ಲೂಕಿನ 10 ರೈತ ಸಂಪರ್ಕ ಕೇಂದ್ರಗಳಲ್ಲಿ ಬೀಜಗಳನ್ನು ವಿತರಿಸಲಾಗುವುದು ಎಂದರು. ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಆಂಜನೇಯ, ಸದಸ್ಯರಾದ ಎಚ್.ಸಮರ್ಥರಾಯ, ರಂಜಿತಾ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.