![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Jun 7, 2020, 4:13 AM IST
ಕನ್ನಡದಲ್ಲಿ ದಿನ ಕಳೆದಂತೆ ಹೊಸಬರ ಆಗಮನವಾಗುತ್ತಲೇ ಇದೆ. ಆ ಸಾಲಿಗೆ ಈಗ “ಕಾಸ್ಮಿಕ್ ಕ್ಲೋನ್ಸ್’ ಎಂಬ ಹೊಸ ಸಿನಿಮಾ ಕೂಡ ಸೇರಿದೆ. ಈ ಹೆಸರಲ್ಲೊಂದು ವಿಶೇಷವಿದೆ. ಕಾಸ್ಮಿಕ್ ಅಂದರೆ ಬ್ರಹ್ಮಾಂಡ. ಕ್ಲೋನ್ಸ್ ಅನ್ನೋದು ಡಿಫರೆಂಟ್. ಅಲ್ಲಿಗೆ ಒಂದು ರೀತಿಯಂತೆ ಮತ್ತೂಂದು ಇರೋದಿಲ್ಲ ಎಂಬ ಕಾನ್ಸೆಪ್ಟ್ ಮೇಲೆ ಮಾಡುತ್ತಿರುವ ಸಿನಿಮಾ ಇದು.
ಈ ಚಿತ್ರಕ್ಕೆ ರಾಕೇಶ್ ನಿರ್ದೇಶಕರು. ಮೊದಲ ನಿರ್ದೇಶನದ ಸಿನಿಮಾ ಇದು. ಇಲ್ಲಿ ರಾಕೇಶ್ ಅವರು, ಕಥೆ, ಚಿತ್ರಕಥೆ, ಸಂಭಾಷಣೆಯ ಜೊತೆಯಲ್ಲಿ ನಟನೆಯನ್ನೂ ಮಾಡಿದ್ದಾರೆ. ಸಿನಿಮಾ ಬಗ್ಗೆ ಹೇಳುವ ನಿರ್ದೇಶಕ ರಾಕೇಶ್, ಒಂದು ಸಸ್ಪೆನ್ಸ್ ವಿಷಯ ಇಲ್ಲಿದೆ. ಅದನ್ನು ಸಿನಿಮಾದಲ್ಲೇ ನೋಡಬೇಕು. ಈ ರೀತಿಯ ಸಿನಿಮಾಗಳು ಹೆಚ್ಚಾಗಿ ಯುರೋಪಿಯನ್ ದೇಶಗಳಲ್ಲಿ ಕಾಣಬಹುದು.
ಕನ್ನಡದಲ್ಲಿ ಒಂದು ವಿಭಿನ್ನ ಪ್ರಯತ್ನ ಎನ್ನುವ ರಾಕೇಶ್, ಇಲ್ಲಿ ಸೈನ್ಸ್ ಫಿಂಕ್ಷನ್ ವಿಷಯ ಹೇಳಹೊರಟಿದ್ದೇವೆ. ಸೈನ್ಸ್ಗೆ ಇರುವಂತಹ ಅನೇಕ ವಿಷಯಗಳು ಚಿತ್ರದಲ್ಲಿರಲಿವೆ. ಚಿತ್ರದ ಕಥೆ ಹೆಣೆಯುವ ಮುನ್ನ, ಅನೇಕ ಡಾಕ್ಟರ್ ಹಾಗೂ ವಿಜ್ಞಾನಿಗಳನ್ನು ಸಂಪರ್ಕಿಸಿ ಚರ್ಚಿಸಲಾಗಿದೆ. ಸಾಕಷ್ಟು ಪಾತ್ರಗಳು ಇಲ್ಲಿ ಬರಲಿದ್ದು, ಪ್ರತಿ ಪಾತ್ರಕ್ಕೂ ಅದರದ್ದೇ ಆದಂತಹ ವಿಶೇಷತೆ ಇದೆ ಎಂಬುದು ಅವರ ಮಾತು.
ಅಂದಹಾಗೆ, “ಕಾಸ್ಮಿಕ್ ಕ್ಲೋನ್ಸ್’ ಚಿತ್ರ ಈಗಾಗಲೇ ಶೇ.90ರಷ್ಟು ಚಿತ್ರೀಕರಣಗೊಂಡಿದೆ.ಬಹುತೇಕ ಬೆಂಗಳೂರಲ್ಲೇ ಶೂಟಿಂಗ್ ಮಾಡಲಾಗಿದೆ. ಇನ್ನು ಶೇ.10 ರಷ್ಟು ಚಿತ್ರೀಕರಣಗೊಂಡರೆ ಸಿನಿಮಾ ಮುಗಿಯಲಿದೆ. ಡಿಸಿಸಿ ಸಿನಿಮಾ ಕ್ರಿಯೇಷನ್ಸ್ ಬ್ಯಾನರ್ನಲ್ಲಿ ಚಿತ್ರ ನಿರ್ಮಾಣಗೊಂಡಿದೆ. ಚಿತ್ರಕ್ಕೆ ಸಚಿನ್ ಛಾಯಾಗ್ರಹಣ ಮಾಡಿದ್ದಾರೆ. ಸದ್ಯಕ್ಕೆ ಪೋಸ್ಟ್ ಪ್ರೊಡಕ್ಷನ್ ಕೆಲಸ ನಡೆಯುತ್ತಿದೆ. ಇತ್ತೀಚೆಗೆ ನಟರಾದ ಗಣೇಶ್ ಕೇಸರ್ಕರ್ ಚಿತ್ರದ ಫಸ್ಟ್ಲುಕ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ.
Bollywood: ವಿಕ್ಕಿ ಕೌಶಲ್ To ರಶ್ಮಿಕಾ.. ʼಛಾವಾʼಕ್ಕೆ ಕಲಾವಿದರು ಪಡೆದ ಸಂಭಾವನೆ ಎಷ್ಟು?
ಹೇಗಿದೆ ಬಹುನಿರೀಕ್ಷಿತ ʼಛಾವಾʼ? ವಿಕ್ಕಿ ‘ಸಂಭಾಜಿ’ ಅವತಾರಕ್ಕೆ ಪ್ರೇಕ್ಷಕರು ಹೇಳಿದ್ದೇನು?
Chhaava: ‘ಚಾವಾ’ಗೆ ಧ್ವನಿಯಾದ ಅಜಯ್ ದೇವಗನ್
ಗಂಡು ಮೊಮ್ಮಗನೇ ಬೇಕು ಎಂಬ ಅಭಿಲಾಷೆ: ಚಿರಂಜೀವಿ ಹೇಳಿಕೆಗೆ ಭಾರಿ ವಿರೋಧ
Spiritual journey: ಕಿನ್ನರ್ ಅಖಾಡ ತೊರೆದು ಹೊರಬಂದ ಮಾಜಿ ನಟಿ, ಸಾಧ್ವಿ ಮಮತಾ ಕುಲಕರ್ಣಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.