ಅಧಿಕಾರಿಗಳ ನಿರ್ಲಕ್ಷ್ಯ: ಕೊಬ್ಬರಿ ಬೆಲೆ ಕುಸಿತ


Team Udayavani, Jun 7, 2020, 6:11 AM IST

bele kusita

ತಿಪಟೂರು: ಅಧಿಕಾರಿಗಳ ಕೊರತೆಯಿಂದಾಗಿ ಕೊಬ್ಬರಿ ಬೆಲೆ ಇಳಿಕೆಯಾಗಿದೆ. ಇಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ನಾಮಕೇವಾಸ್ತೆಯಲ್ಲಿದ್ದು, ಕೊಬ್ಬರಿಗೆ ಬೆಂಬಲ ಬೆಲೆ ಹಾಗೂ ನಫೆಡ್‌ ಕೇಂದ್ರ ಸ್ಥಾಪಿಸುವ ಬಗ್ಗೆ ಸರ್ಕಾರಕ್ಕೆ  ಅಧಿಕಾರಿಗಳು ಸರಿಯಾಗಿ ಮಾಹಿತಿ ನೀಡುತ್ತಿಲ್ಲ ಎಂದು ತಾಲೂಕು ಜೆಡಿಎಸ್‌ಮುಖಂಡ ಎಂ. ನಾಗರಾಜು ಆರೋಪಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಪಿಎಂಸಿ ಕಾರ್ಯದರ್ಶಿಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ.

ಎಪಿಎಂಸಿಗೆ ಪ್ರತಿ ಹರಾಜು ಸಂದರ್ಭದಲ್ಲಿ ಕೇವಲ 4,500  ಚೀಲ ಕೊಬ್ಬರಿ ಮಾತ್ರ ರೈತರಿಂದ ಬಂದಿದ್ದು, ಇದರಿಂದ ಸೆಸ್ ಆದಾಯ ಕೂಡ ಕಡಿಮೆಯಾಗಿದೆ ಎಂದರು. ಹೊರಭಾಗಗಳಿಂದ ಹೆಚ್ಚು ಕೊಬ್ಬರಿ ಮಾರಾಟ ವಾಗುತ್ತಿದ್ದು  ಎಪಿಎಂಸಿಗೆ ಕೊಬ್ಬರಿ ಸರಿಯಾಗಿ ಬಾರದೇ ಇರಲು ಅಧಿಕಾರಿಗಳು ಕೂಡ ಕಾರಣರಾಗಿದ್ದಾರೆ. ಎಪಿಎಂಸಿ ಮಾರುಕಟ್ಟೆಯಲ್ಲಿ 37 ಕೋಟಿ ರೂ. ಹಣವಿದ್ದು, ಆ ಹಣದಲ್ಲಿ ಎಪಿಎಂಸಿ ಆವರಣ ಸ್ವತ್ಛತೆ, ಕುಡಿವ ನೀರು, ಸೇರಿದಂತೆ ಗ್ರಾಮೀಣ  ಭಾಗದ ರಸ್ತೆಗಳನ್ನು ಪ್ರಾರಂಭಿಸಬಹುದು.

ಆದರೆ ಅಧಿಕಾರಿಗಳು ಯಾವುದೇ ಕೆಲಸ ಮಾಡದಿದ್ದರೂ ಬೇಕಾಬಿಟ್ಟಿ 3 ರಿಂದ 4 ಲಕ್ಷ ರೂ. ಬಳಸಿಕೊಳ್ಳುತ್ತಿದ್ದು, ಎಪಿಎಂಸಿಯಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಿದರು. ತಾಲೂಕು ಜೆಡಿಎಸ್‌ ಕಾರ್ಯಾಧ್ಯಕ್ಷ ಶಿವಸ್ವಾಮಿ  ಮಾತನಾಡಿ, ತಾಲೂಕಿನಲ್ಲಿ ಕೊಬ್ಬರಿ ಬೆಲೆ ಸೇರಿದಂತೆ ಅನೇಕ ಸಮಸ್ಯೆಗಳು ತಾಂಡವವಾಡುತ್ತಿದ್ದು ಜನಪ್ರತಿ ನಿಧಿಗಳು ಗಮನಹರಿಸುತ್ತಿಲ್ಲ. ಕೇಂದ್ರ ಸರ್ಕಾರ ರೈತರಿ ಗಿಂತ ಕೈಗಾರಿಕೆಗಳಿಗೆ  ಸಾಲ ನೀಡಲು ಗಮನ ಹರಿಸುತ್ತಿದೆ.

ರೈತನಿಗೂ ಕೂಡ ಸಾಲ ನೀಡುವ ಸಂದರ್ಭದಲ್ಲಿ ಸರ್ಕಾರವೇ ಜಾಮೀನುದಾರ ಆಗಬೇಕು ಎಂದು ಒತ್ತಾಯಿಸಿದರು. ಜೆಡಿಎಸ್‌ ತಾ. ಉಪಾಧ್ಯಕ್ಷ ಉಮಾಮಹೇಶ್‌, ಎಪಿ ಎಂಸಿ ಮಾಜಿ ಉಪಾಧ್ಯಕ್ಷ ಎನ್‌.ಸಿ.  ರಮೇಶ್‌, ರಾಜ್ಯ ಜೆಡಿಎಸ್‌ ಯುವ ಪ್ರಧಾನ ಕಾರ್ಯದರ್ಶಿ ಗುರು ಪ್ರಸನ್ನ, ತಾ.ಪ್ರಧಾನ ಕಾರ್ಯದರ್ಶಿ ರಾಜಶೇಖರ್‌, ಮುಖಂಡ ರಾದ ರಾಕೇಶ್‌, ತಿಮ್ಮೇಗೌಡ, ಈಶಣ್ಣ ಇದ್ದರು.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqe

Koratagere; ಬಸ್ ಗಳ ಸಮಸ್ಯೆ: ಅಳಲು ತೋಡಿಕೊಂಡ ವಿದ್ಯಾರ್ಥಿಗಳು

Naxal chandru- Naxal Chandru arrested after 19 years; What is the case?

Naxal chandru-19 ವರ್ಷದ ಬಳಿಕ ನಕ್ಸಲ್‌ ಚಂದ್ರು ಸೆರೆ; ಏನಿದು ಪ್ರಕರಣ?

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು

koratagere

Koratagere: ಎರಡು ವಿದ್ಯುತ್‌ ಉಪಸ್ಥಾವರ ಘಟಕಗಳ ಉದ್ಘಾಟನೆ

Tumakuru ಮಕ್ಕಳ ಮಾರಾಟ ಜಾಲ ಪತ್ತೆ: 5 ಮಕ್ಕಳ ರಕ್ಷಣೆ, 7 ಮಂದಿ ಸೆರೆ

Tumakuru ಮಕ್ಕಳ ಮಾರಾಟ ಜಾಲ ಪತ್ತೆ: 5 ಮಕ್ಕಳ ರಕ್ಷಣೆ, 7 ಮಂದಿ ಸೆರೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.