ಕೂಡಲಸಂಗಮದಲ್ಲಿ ಇಂದು ಬಿಜೆಪಿ ಸಭೆ
Team Udayavani, Jun 9, 2020, 6:27 AM IST
ಬಾಗಲಕೋಟೆ: ಕೇಂದ್ರ ಸರ್ಕಾರದ 2ನೇ ಅವಧಿಯ ಒಂದು ವರ್ಷದ ಸಾಧನೆ ಜನರಿಗೆ ಪರಿಚಯಿಸುವ ಜತೆಗೆ ಪಕ್ಷದ ಸಂಘಟನಾತ್ಮಕ ದೃಷ್ಟಿಯಿಂದ ಜೂ. 9ರಂದು ಜಿಲ್ಲೆಯ ಕೂಡಲಸಂಗಮದಲ್ಲಿ ಬಿಜೆಪಿ ಪ್ರಮುಖರ ಸಭೆ ನಡೆಯಲಿದೆ ಎಂದು ಪಕ್ಷದ ಜಿಲ್ಲಾ ಅಧ್ಯಕ್ಷ ಶಾಂತಗೌಡ ಪಾಟೀಲ ತಿಳಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ವಿಭಾಗದ ಸಂಘಟನಾತ್ಮಕ 5 ಜಿಲ್ಲೆಗಳ ವ್ಯಾಪ್ತಿಯ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು, ಮಂಡಳ ಅಧ್ಯಕ್ಷರು ಸೇರಿದಂತೆ ಆಹ್ವಾನಿತ ಒಟ್ಟು 200 ಜನರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಸಾಧನೆ ಪರಿಚಯ ಅಭಿಯಾನ: ಕೇಂದ್ರ ಸರ್ಕಾರದ 2ನೇ ಅವಧಿಯ ಒಂದು ವರ್ಷದ ಸಾಧನೆಯನ್ನು ಇಡೀ ಜಿಲ್ಲೆಯ ಜನರಿಗೆ ತಿಳಿಸುವ ನಿಟ್ಟಿನಲ್ಲಿ ಸಾಧನೆ-ಅಭಿಯಾನ ನಡೆಸಲು ನಿರ್ಧರಿಸಲಾಗಿದೆ. ಐದು ವಿಭಾಗದಲ್ಲಿ ವಿವಿಧ ಹಂತದ ಪ್ರಚಾರ ನಡೆಯಲಿದ್ದು, ಮನೆ ಮನೆ ಸಂಪರ್ಕ ಅಭಿಯಾನ, ಆತ್ಮನಿರ್ಭರ ಭಾರತದ ಸಂಕಲ್ಪ-ವಿಚಾರ, ಆತ್ಮನಿರ್ಭರ ಭಾರದ ಸಂಕಲ್ಪ-ಕಾರ್ಯ ಯೋಜನೆ, ವಿವಿಧ ಮೋರ್ಚಾಗಳಿಂದ ಡಿಜಿಟಲ್ ರ್ಯಾಲಿಗಳು, ವಿವಿಧೆಡೆ ಪತ್ರಿಕಾಗೋಷ್ಠಿ ಮೂಲಕ ಜನರಿಗೆ ಸರ್ಕಾರದ ಸಾಧನೆ ತಿಳಿಸಲಾಗುವುದು ಎಂದರು.
ಕೇಂದ್ರದಲ್ಲಿ ಬಿಜೆಪಿ ಸರ್ಕಾರದ 2ನೇ ಅವಧಿಗೆ ಬಂದ ಬಳಿಕ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ತ್ರಿವಳಿ ತಲಾಖ್ ರದ್ದು, ರಾಮ ಮಂದಿರ ನಿರ್ಮಾಣ, ಜಮ್ಮು-ಕಾಶ್ಮೀರದ 370 ವಿಧಿ ರದ್ದು ಹೀಗೆ ಹಲವು ಮಹತ್ವದ ಕಾರ್ಯ ಮಾಡಲಾಗಿದೆ. ಅಲ್ಲದೇ ಇಡೀ ವಿಶ್ವವೇ ಕೋವಿಡ್ ದಿಂದ ಸಂಕಷ್ಟಕ್ಕೆ ಸಿಲುಕಿರುವ ಸಮಯದಲ್ಲಿ, ಭಾರತವನ್ನು ಸಮರ್ಥವಾಗಿ ನಿಭಾಯಿಸುವ ಜತೆಗೆ ಜನರಿಗೆ 20 ಲಕ್ಷ ಕೋಟಿ ಮೊತ್ತದ ವಿಶೇಷ ಪ್ಯಾಕೇಜ್ ಅನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ರಾಜ್ಯ ಸರ್ಕಾರವೂ 21 ಸಾವಿರ ಕೋಟಿಯ ಹಲವು ಪ್ಯಾಕೇಜ್ ನೀಡಿದೆ ಎಂದು ತಿಳಿಸಿದರು.
ಸೂಕ್ತರಿಗೆ ಬೆಂಬಲ: ಡಿಸಿಸಿ ಬ್ಯಾಂಕ್ ಚುನಾವಣೆ ಘೋಷಣೆಯಾದ ಬಳಿಕ ಪಕ್ಷದಲ್ಲಿರುವ ಸಹಕಾರಿ ಧುರೀಣರನ್ನು ಚುನಾವಣೆಗೆ ನಿಲ್ಲಿಸುವ ಕುರಿತು ಜಿಲ್ಲಾ ಕೋರ್ ಕಮೀಟಿ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು. ಡಿಸಿಸಿ ಬ್ಯಾಂಕ್, ಸಹಕಾರಿ ವಲಯದ ಚುನಾವಣೆಯಾಗಿದ್ದು, ಉತ್ತಮ ಅಭ್ಯರ್ಥಿಗಳಿಗೆ ಪಕ್ಷದಿಂದ ಬೆಂಬಲ ನೀಡುವ ಕುರಿತು ಚರ್ಚೆ ನಡೆಸಲಾಗುವುದು ಎಂದು ಹೇಳಿದರು.
ಬಿಜೆಪಿ ಬೆಳಗಾವಿ ವಿಭಾಗ ಸಹ ಪ್ರಭಾರಿ ಬಸವರಾಜ ಯಂಕಂಚಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜು ನಾಯ್ಕರ, ನಗರ ಘಟಕದ ಅಧ್ಯಕ್ಷ ಬಸವರಾಜ ಅವರಾದಿ, ಯುವ ಮುಖಂಡ ರಾಜು ರೇವಣಕರ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gram panchayat: ಸ್ಥಾನ ಬಿಟ್ಟುಕೊಡದ ಉಪಾಧ್ಯಕ್ಷೆ ವಿರುದ್ದ ಕೆಂಡಾಮಂಡಲಳಾದ ಸದಸ್ಯೆ
MUDA Case: ವಿಪಕ್ಷಗಳಿಂದ ಸಿಎಂ ಶಕ್ತಿ ಜನಪ್ರಿಯತೆ ಕುಗ್ಗಿಸುವ ಪ್ರಯತ್ನ: ಉಮಾಶ್ರೀ
Muda ಸೈಟ್ ಹಿಂತಿರುಗಿಸಿರುವ ಸಿದ್ದರಾಮಯ್ಯ ಪತ್ನಿಯ ಕ್ರಮಕ್ಕೆ ತಿಮ್ಮಾಪುರ ಪ್ರತಿಕ್ರಿಯೆ
Mudhol: ಪ್ರಕರಣ ಹಿಂಪಡೆಯದಿದ್ದರೆ ಹಿಂದೂ ಪರ ಸಂಘಟನೆಯಿಂದ ಜಿಲ್ಲಾದ್ಯಂತ ಹೋರಾಟದ ಎಚ್ಚರಿಕೆ
Rabkavi Banhatti: ಕನ್ನಡ ಭಾಷೆಯ ಬಗ್ಗೆ ಅಭಿಮಾನ ಬೇಕು: ಶಾಸಕ ಸಿದ್ದು ಸವದಿ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.