10-12 ದಿನಗಳಲ್ಲಿ ಸೋಂಕಿತರೆಲ್ಲ ಬಿಡುಗಡೆ; ಸಚಿವ ಬಸವರಾಜ ಬೊಮ್ಮಾಯಿ ವಿಶ್ವಾಸ


Team Udayavani, Jun 9, 2020, 7:57 AM IST

10-12 ದಿನಗಳಲ್ಲಿ ಸೋಂಕಿತರೆಲ್ಲ ಬಿಡುಗಡೆ; ಸಚಿವ ಬಸವರಾಜ ಬೊಮ್ಮಾಯಿ ವಿಶ್ವಾಸ

ಉಡುಪಿ: ಜಿಲ್ಲೆಯಲ್ಲಿ  ಕೋವಿಡ್ ಬಾಧಿತರಾಗಿ ಆಸ್ಪತ್ರೆಯಲ್ಲಿರುವ ಎಲ್ಲರೂ 10-12 ದಿನಗಳಲ್ಲಿ ಗುಣಮುಖರಾಗಿ ಬಿಡುಗಡೆ ಗೊಳ್ಳಲಿದ್ದಾರೆ ಮತ್ತು ಸದ್ಯವೇ ಕೋವಿಡ್ ಮುಕ್ತ ಜಿಲ್ಲೆಯಾಗಿ ರೂಪುಗೊಳ್ಳಲಿದೆ ಎಂದು ಗೃಹ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.

ಸೋಮವಾರ ಜಿ.ಪಂ. ಸಭಾಂಗಣದಲ್ಲಿ ಪ್ರಗತಿ ಪರಿಶೀಲನ ಸಭೆ ನಡೆಸಿದ ಬಳಿಕ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ಇದುವರೆಗೆ ಒಟ್ಟು 274 ಜನರು ಬಿಡುಗಡೆಗೊಂಡಿದ್ದು, 672 ಜನರೂ ಸದ್ಯವೇ ಬಿಡು ಗಡೆಗೊಳ್ಳುವರು. ಅವರಿಗೆ ಬೇಕಾದ ಎಲ್ಲ ಆರೋಗ್ಯ ಸಂಬಂಧಿ ಸೌಲಭ್ಯಗಳನ್ನು ಒದಗಿಸಲಾಗು ವುದು ಎಂದರು.

ಇದುವರೆಗಿನ 946 ಪಾಸಿಟಿವ್‌ ಪ್ರಕರಣಗಳಲ್ಲಿ ಕೇವಲ 17 ಮಂದಿಗೆ ಮಾತ್ರ ಕೋವಿಡ್ ಲಕ್ಷಣಗಳಿವೆ ಎಂದರು.
ಜಿಲ್ಲಾಡಳಿತಕ್ಕೆ ಮೆಚ್ಚುಗೆ ಜಿಲ್ಲೆಯಲ್ಲಿ 35ಕ್ಕೂ ಹೆಚ್ಚು ಕ್ವಾರಂಟೈನ್‌ ಕೇಂದ್ರಗಳಲ್ಲಿ 12,530 ಜನರ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಕ್ವಾರಂಟೈನ್‌ಗೆ ಒಳಗಾದ ಎಲ್ಲರ ಮಾದರಿಗಳನ್ನೂ ಸಂಗ್ರಹಿಸಿದ ಉಡುಪಿ ರಾಜ್ಯದಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ. ದೊಡ್ಡ ಸಂಖ್ಯೆಯಲ್ಲಿ ಬಂದ ಹೊರ ರಾಜ್ಯದವರನ್ನು ಉತ್ತಮ ರೀತಿಯಲ್ಲಿ ಜಿಲ್ಲಾಡಳಿತ ನಿಭಾಯಿಸಿದೆ ಎಂದು ಮೆಚ್ಚುಗೆ ಸೂಚಿಸಿದರು.

ಉಡುಪಿ ಜಿಲ್ಲಾಸ್ಪತ್ರೆಯಲ್ಲಿ 10-12 ದಿನಗಳಲ್ಲಿ ಕೋವಿಡ್ ಪರೀಕ್ಷಾ ಕೇಂದ್ರ ಕಾರ್ಯಾರಂಭಗೊ ಳ್ಳಲಿದೆ ಎಂದು ಸಚಿವ ಬೊಮ್ಮಾಯಿ ತಿಳಿಸಿದರು.

ಸಿಬಂದಿ ನೇಮಕಕ್ಕೆ ಕ್ರಮ
ಕಾರ್ಕಳ ಮತ್ತು ಕುಂದಾಪು ರದ ಆಸ್ಪತ್ರೆಗಳಿಗೂ ಕೋವಿಡ್‌ ಆಸ್ಪತ್ರೆಗೆ ಇರುವಂತೆ ಸಿಬಂದಿಯ ನೇಮಕಕ್ಕೂ ಆರೋಗ್ಯ ಸಚಿವರಲ್ಲಿ ಮಾತನಾಡಿ ಆದೇಶ ಹೊರಡಿಸಲಾಗುವುದು ಎಂದರು.

ನರೇಗಾ: ಉತ್ತಮ ಸಾಧನೆ
ನರೇಗಾ ಕಾಮಗಾರಿಗಳಲ್ಲಿ ಹೋದ ವರ್ಷಕ್ಕಿಂತ ಈ ವರ್ಷ ಹೆಚ್ಚಿನ ಪ್ರಗತಿಯಾಗಿದೆ. ಕಳೆದ ವರ್ಷ 77,190 ಮಾನವ ದಿನಗಳ
ಕೆಲಸ ನಡೆದರೆ, ಈ ವರ್ಷ ಇದು ವರೆಗೆ 2.1 ಲಕ್ಷ ಮಾನವ ದಿನಗಳ ಕೆಲಸ ನಡೆದಿದೆ ಎಂದರು.

ಜಿಲ್ಲೆಯಲ್ಲಿ 1,640 ಮನೆಗ ಳನ್ನು ಹಿಂದಿನ ಸರಕಾರ ಬ್ಲಾಕ್‌ ಮಾಡಿತ್ತು. ನಮ್ಮ ಸರಕಾರ ಅವು ಗಳನ್ನು ಅನ್‌ಬ್ಲಾಕ್‌ ಮಾಡಿದೆ. ಮನೆ ನಿರ್ಮಾಣಕ್ಕೆ ಇನ್ನು ತೊಡಕಿಲ್ಲ ಎಂದರು.

ಶಾಸಕರಾದ ರಘುಪತಿ ಭಟ್‌, ಸುನಿಲ್‌ ಕುಮಾರ್‌, ಸುಕುಮಾರ ಶೆಟ್ಟಿ, ಲಾಲಾಜಿ ಮೆಂಡನ್‌, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾಧಿಕಾರಿ ಜಿ. ಜಗದೀಶ್‌, ಐಜಿಪಿ ದೇವಜ್ಯೋತಿ ರಾಯ್‌, ಜಿ.ಪಂ. ಸಿಇಒ ಪ್ರೀತಿ ಗೆಹಲೋತ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

9-mng-1

Mumtaz Ali ನಾಪತ್ತೆ ಪ್ರಕರಣ; ಶೋಧ ಕಾರ್ಯಾಚರಣೆಗೆ ಈಶ್ವರ ಮಲ್ಪೆ ತಂಡ ಆಗಮನ

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Hubbali: ಅಪಾರ್ಟ್‌ಮೆಂಟ್ ಆವರಣದಲ್ಲಿದ್ದ ದತ್ತಾತ್ರೇಯ ದೇವರ ಮೂರ್ತಿ ಧ್ವಂಸಗೈದ ಕಿಡಿಗೇಡಿಗಳು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

Delhi: ರಾಮಲೀಲಾ ಪ್ರದರ್ಶನದ ವೇಳೆ ಕುಸಿದು ಬಿದ್ದು ರಾಮನ ಪಾತ್ರಧಾರಿ ಮೃತ್ಯು

7-mng

Mumtaz Ali; ಮೊಯ್ದೀನ್ ಬಾವ ಸೋದರ ನಾಪತ್ತೆ; ಸೇತುವೆಯಲ್ಲಿ ಕಾರು ಬಿಟ್ಟು ಆತ್ಮಹತ್ಯೆ ಶಂಕೆ !

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?

Bigg Boss Kannada11: ಬಿಗ್‌ ಬಾಸ್‌ ಮನೆಯಿಂದ ಈ ವಾರ ಹೊರಗೆ ಬರುವುದು ಇವರೇ..?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !

8-shirva

ಕನ್ನಡ ಜ್ಯೋತಿ ರಥ; ಕಾಪು ತಾಲೂಕಿಗೆ ಸ್ವಾಗತ; ಕನ್ನಡ ಅಮೃತ ಭಾಷೆಯಾಗಿ ಬೆಳಗಲಿ: ತಹಶೀಲ್ದಾರ್‌

6-ucchila

Udupi ಉಚ್ಚಿಲ ದಸರಾ 2024: ಉಡುಪಿ ಮತ್ತು ದ.ಕ. ಜಿಲ್ಲಾಮಟ್ಟದ ಕುಸ್ತಿ ಸ್ಪರ್ಧೆ ಉದ್ಘಾಟನೆ

Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ

Udupi: ಗೀತಾರ್ಥ ಚಿಂತನೆ 56: ದುರ್ಯೋಧನನ ಮಾನಸಿಕ ಅಸಮತೋಲನ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

11-Hagaribommanahalli

Hagaribommanahalli: ಆಕಳು ಮೇಯಿಸಲು ಹೋದ ಇಬ್ಬರು ಸಿಡಿಲಿಗೆ ಬಲಿ

5

Udupi: ಗ್ರಾಮ ಪಂಚಾಯತ್ ನೌಕರರ ಕಷ್ಟ ಕೇಳ್ಳೋರಿಲ್ಲ !

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

Alia Bhatt: ಆಕ್ಷನ್‌ ಅವತಾರದಲ್ಲಿ ಆಲಿಯಾ

10-ckm

Chikkamagaluru: ಪ್ರವಾಸಿಗರನ್ನು ಕರೆತಂದಿದ್ದ ಬೆಂಗಳೂರಿನ ಚಾಲಕ ಹೃದಯಾಘಾತದಿಂದ ಮೃತ್ಯು

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Womens T20 World Cup: ಪಾಕ್‌ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್‌ ಸೋತ ಭಾರತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.