ದಾನಿಗಳ ನೆರವು, ಶ್ರಮದಾನದಿಂದ ಮನೆ ನಿರ್ಮಾಣ

ಪಾಲ್ತಾಡಿ: ಕಟ್ಟೋಣ ಬಾಳಿಗೊಂದು ಸೂರು

Team Udayavani, Jun 12, 2020, 5:45 AM IST

ದಾನಿಗಳ ನೆರವು, ಶ್ರಮದಾನದಿಂದ ಮನೆ ನಿರ್ಮಾಣ

ಸವಣೂರು: ಪಾಲ್ತಾಡಿ ಗ್ರಾಮದ ಅಂಕತ್ತಡ್ಕ ಸಮೀಪದಲ್ಲಿ ನಿರ್ಗ ತಿಕ ಕುಟುಂಬವೊಂದಕ್ಕೆ ಸವಣೂರು ಗ್ರಾ.ಪಂ. ಅಧ್ಯಕ್ಷೆ ಇಂದಿರಾ ಬಿ.ಕೆ., ಸದಸ್ಯ ಸತೀಶ್‌ ಅಂಗಡಿಮೂಲೆ, ಸಾಮಾಜಿಕ ಕಾರ್ಯಕರ್ತ, ವಿದ್ಯುತ್‌ ಗುತ್ತಿಗೆದಾರ ಸುಬ್ರಾಯ ಗೌಡ ಅವರ ನೇತೃತ್ವದಲ್ಲಿ ಚೆನ್ನಾವರ ಅಭ್ಯುದಯ ಯುವಕ ಮಂಡಲ ಮತ್ತು ಮಂಜುನಾಥನಗರ ವಿವೇಕಾನಂದ ಯುವಕ ಮಂಡಲ ಇದರ ಸಹಭಾಗಿತ್ವದಲ್ಲಿ ಮನೆ ನಿರ್ಮಿಸಿ ಮಾದರಿಯಾಗಿದ್ದಾರೆ. ಜೂ. 12ಕ್ಕೆ ಇದರ ಗೃಹಪ್ರವೇಶ ಮಾಡಿ ಕುಟುಂಬಕ್ಕೆ ಹಸ್ತಾಂತರಿಸಲಿದ್ದಾರೆ.

ಈ ಎರಡು ಯುವಕ ಮಂಡಲಗಳ ಸದಸ್ಯರು ಲಾಕ್‌ಡೌನ್‌ ಅವಧಿಯಲ್ಲಿ ನಿರಂತರವಾಗಿ ಶ್ರಮದಾನ ನಡೆಸುವ ಮೂಲಕ ಸುಮಾರು 3 ಲಕ್ಷ ರೂ. ವೆಚ್ಚದಲ್ಲಿ ಮನೆಯೊಂದನ್ನು ನಿರ್ಮಿಸಿದ್ದಾರೆ.

ಸವಣೂರು ಗ್ರಾ.ಪಂ.ನ ಪಾಲ್ತಾಡಿ ಗ್ರಾಮದ ಅಂಕತ್ತಡ್ಕದ ಮಾಣಿ ಅವರ ಮಗಳು ಸುಂದರಿ ಅವರು ತನ್ನ ಮಕ್ಕಳಾದ ಆಶಾ, ಧನ್ವಿ, ಸನತ್‌ ಜತೆ ಸಣ್ಣ ಟರ್ಪಾಲ್‌ ಕಟ್ಟಿದ ಜೋಪಡಿಯಲ್ಲಿ ವಾಸವಾಗಿದ್ದರು. ಮಳೆ ಬಂದರೆ ಸೋರುವ ಮೇಲ್ಛಾವಣಿ, ಭದ್ರತೆ ಇಲ್ಲದೆ ಅಸಹಾಯಕ ಸ್ಥಿತಿಯಲ್ಲಿಯೇ ಜೀವನ ಕಳೆಯುತ್ತಿದ್ದರು. ಅವರ ದಯನೀಯ ಸ್ಥಿತಿ ಕಂಡು ಈ ಮಳೆಗಾಲದಲ್ಲಿ ಈ ಮನೆಯಲ್ಲಿರುವುದು ಕಷ್ಟಕರ ಎಂದು ಯುವಕರ ತಂಡ ತೀರ್ಮಾನಿಸಿತು. ಅವರ ಮನೆಯ ದಾಖಲೆ ಪತ್ರಗಳು ಸರಿಯಿಲ್ಲದ ಕಾರಣ ಸರಕಾರದ ನಿವೇಶನವೂ ದೊರಕಿರಲಿಲ್ಲ. ಹಾಗಾಗಿ ವಾಟ್ಸಪ್‌ನಲ್ಲಿ ಕಟ್ಟೋಣ ಬಾಳಿಗೊಂದು ಸೂರು ಎಂಬ ಗುಂಪು ರಚಿಸಿ, ದಾನಿಗಳನ್ನು, ಯುವಕ ಮಂಡಲಗಳ ಸದಸ್ಯರನ್ನು ಸೇರಿಸಿ ಕಾರ್ಯೋನ್ಮುಖರಾದರು.

ಪುತ್ತೂರು ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ನವೀನ್‌ ಭಂಡಾರಿ ಅವರು ಉದ್ಯೋಗ ಖಾತರಿ ಯೋಜನೆಯ ಮೂಲಕ ಬಾವಿ ನಿರ್ಮಾಣಕ್ಕೆ ಅವಕಾಶ ಕಲ್ಪಿಸಿದರು. ಅದರಂತೆ ಬಾವಿ ನಿರ್ಮಾಣದ ಕಾರ್ಯವೂ ಪೂರ್ಣಗೊಂಡಿದೆ. ಜತೆಗೆ ಉದ್ಯೋಗ ಖಾತರಿ ಯೋಜನೆಯಲ್ಲಿ ದನದ ಕೊಟ್ಟಿಗೆ ನಿರ್ಮಾಣ, ಅಡಿಕೆ ತೋಟ ನಿರ್ಮಾಣ ಕಾರ್ಯವೂ ನಡೆದಿದೆ.

ಗ್ರಾಮ ಪಂಚಾಯತ್‌ಸದಸ್ಯ ಸತೀಶ್‌ ಅಂಗಡಿಮೂಲೆ ಇದರ ಉಸ್ತುವಾರಿ ವಹಿಸಿಕೊಂಡಿದ್ದರು.

ಹೃದಯ ತುಂಬಿದೆ
ಪತಿಯನ್ನು ಕಳೆದುಕೊಂಡು ವೃದ್ಧ ತಂದೆ, ಮೂವರು ಪುಟ್ಟ ಮಕ್ಕಳ ಜತೆ ಕಷ್ಟದಲ್ಲಿ ಜೋಪಡಿಯಲ್ಲಿ ದಿನದೂಡುತ್ತಿದ್ದೇನೆ. ಈ ಸಂದರ್ಭ ತನಗೆ ಮನೆ ನಿರ್ಮಾಣ ಮಾಡಿಕೊಡುವ ನಿರ್ಧಾರವನ್ನು ಸವಣೂರು ಗ್ರಾ.ಪಂ. ಅಧ್ಯಕ್ಷರ ತಂಡದವರು ತಿಳಿಸಿದರು. ಈಗ ಸುಂದರ ಮನೆ ನಿರ್ಮಾಣವಾಗಿದೆ. ಉದ್ಯೋಗ ಖಾತರಿ ಯೋಜನೆಯಿಂದ ಬಾವಿ, ದನದ ಕೊಟ್ಟಿಗೆ, ಅಡಿಕೆ ತೋಟ ನಿರ್ಮಾಣ ಮಾಡಲಾಗಿದೆ. ಎಲ್ಲರಿಗೂ ಧನ್ಯವಾದಗಳು.
 - ಸುಂದರಿ ಫ‌ಲಾನುಭವಿ ಮಹಿಳೆ

ಟಾಪ್ ನ್ಯೂಸ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Puttur: ಎಪಿಎಂಸಿ ವಸತಿಗೃಹದಲ್ಲಿ ಅನಧಿಕೃತ ವಾಸ; ಮಹಿಳೆ ಹೊರಕ್ಕೆ

1(1)

Belthangady: ರಸ್ತೆ ಶೋಚನೀಯ; ನಿರ್ವಹಣೆಯ ಕೊರತೆ; ರಸ್ತೆಯಲ್ಲಿ ಇಂಗು ಗುಂಡಿ ತರಹದ ಹೊಂಡ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

3

Puttur: ಅಪರಿಚಿತರಿಂದ ಬಾಲಕನಿಗೆ ಹಲ್ಲೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

12

Manipal ಪರಿಸರದ 15-20 ಪಕ್ಷಿ ಪ್ರಭೇದ ಕಣ್ಮರೆ; ಇ ಬರ್ಡ್‌ ಪೋರ್ಟಲ್‌ನಲ್ಲಿ ದಾಖಲಾತಿ

11

Shirva: ಹುಲಿ ವೇಷ ಹಾಕಿ ಅನಾರೋಗ್ಯಪೀಡಿತ ಬಾಲಕನಿಗೆ ನೆರವು ನೀಡಿದ ಪೋರರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.