![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 13, 2020, 6:55 AM IST
ಚಿಕ್ಕಬಳ್ಳಾಪುರ: ವಿಶ್ವ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಪ್ರಯುಕ್ತ ಬಾಲ ಕಾರ್ಮಿಕ ಪದ್ಧತಿ ನಿಷೇಧ ಕುರಿತು ಜಿಲ್ಲೆಯ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘದ ಇಲಾಖೆಗಳ ಆಶ್ರಯದಲ್ಲಿ ಹಮ್ಮಿಕೊಂಡಿರುವ ಕಾನೂನು ಅರಿವು ಪ್ರಚಾರ ಕಾರ್ಯಕ್ರಮವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬೈರಪ್ಪ ಶಿವಲಿಂಗ ನಾಯಿಕ ಹಸಿರು ನಿಶಾನೆ ತೋರಿದರು.
ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶರು ಪ್ರಚಾರ ರಥಕ್ಕೆ ಚಾಲನೆ ನೀಡಿ ಮಾತನಾಡಿ, ಬಾಲ ಕಾರ್ಮಿಕ ಪದ್ಧತಿ ದೇಶದ ಸರ್ವಾಂಗೀಣ ಅಭಿವೃದಿಗೆ ಮಾರಕವಾಗಿರುವುದರಿಂದ ಜೊತೆಗೆ ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗಿರುವುದರಿಂದ ಬಾಲ ಕಾರ್ಮಿಕ ಪದ್ಧತಿ ಆಚರಣೆ ಶಿಕ್ಷಾರ್ಹ ಅಪರಾಧ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಆರ್.ಲತಾ, ವಕೀಲರ ಸಂಘದ ಅಧ್ಯಕ್ಷ ಕೆ.ಎಚ್. ತಮ್ಮೇಗೌಡ, ರಾಜ್ಯ ವಕೀಲರ ಪರಿಷತ್ ಉಸ್ತುವಾರಿ ಸದಸ್ಯ ಶ್ರೀನಿವಾಸ್ ಬಿ.ವಿ, ಜಿಲ್ಲಾ ವಕೀಲರ ಸಂಘ ಉಪಾಧ್ಯಾಕ್ಷ ಬಾಲಾಜಿ, ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಡಾ.ವಿ.ಅಶೋಕ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹೆಚ್.ದೇವರಾಜು, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ವಿನೋದ್ ಕುಮಾರ್ ಬಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗೇಶ್, ಕಾರ್ಮಿಕ ಅಧಿಕಾರಿಗಳಾದ ಆರ್.ವರಲಕ್ಷ್ಮೀ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ
MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್
Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು!
Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ
BJP Rift: ಸಂಸದ ಕೆ.ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.