ಸಂಪರ್ಕವಿಲ್ಲದ ಮಗುವಿನಲ್ಲೂ ಕೋವಿಡ್ ದೃಢ; ಇಬ್ಬರು ವೈದ್ಯರಿಗೆ ಕ್ವಾರಂಟೈನ್


Team Udayavani, Jun 14, 2020, 10:48 AM IST

14-June-02

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಸೇಡಂ: ಕಳೆದ ಕೆಲ ದಿನಗಳಿಂದ ಮಹಾರಾಷ್ಟ್ರದಿಂದ ಹಿಂದಿರುಗಿದವರಲ್ಲಿ ಕೋವಿಡ್ ಸೋಂಕು ದೃಢವಾದ ಪ್ರಕರಣಗಳು ಬೆಳಕಿಗೆ ಬಂದಿದ್ದವು, ಆದರೀಗ ನಾಲ್ಕು ವರ್ಷದ ಬಾಲಕನಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, ಆತಂಕ ಹೆಚ್ಚಿಸಿದೆ.

ತಾಲೂಕಿನ ಸೂರವಾರ ಗ್ರಾಮದ ನಾಲ್ಕು ವರ್ಷದ ಬಾಲಕ ಕೆಲ ದಿನಗಳ ಹಿಂದೆ ತೀವ್ರ ಉಸಿರಾಟ ತೊಂದರೆ ಮತ್ತು ಜ್ವರದಿಂದ ಬಳಲುತ್ತಿದ್ದ. ಈತನನ್ನು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆತರಲಾಗಿತ್ತು. ಕೋವಿಡ್ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಕಲಬುರಗಿಯ ಕೋವಿಡ್‌ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಈಗ ಬಾಲಕನ ವರದಿ ಬಂದಿದ್ದು, ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಬಾಲಕ ಮತ್ತು ಆತನ ಕುಟುಂಬದ ಪ್ರಯಾಣ ಇತಿಹಾಸವನ್ನು ವೈದ್ಯರು ಪರಿಶೀಲಿಸಿದರೂ ಸಂಪರ್ಕಕ್ಕೆ ಬಂದ ಖಚಿತ ಮಾಹಿತಿ ದೊರೆಯುತ್ತಿಲ್ಲ ಎನ್ನಲಾಗಿದೆ. ಇದರಿಂದ ಸಾಮುದಾಯಿಕವಾಗಿ ಕೋವಿಡ್ ಹರಡಲು ಆರಂಭಿಸಿದೆಯೇ ಎನ್ನುವ ದುಗುಡ ಜನರಲ್ಲಿ ಮನೆ ಮಾಡಿದೆ. ಈಗಾಗಲೇ ಸೂರವಾರ ಗ್ರಾಮದ ಸೋಂಕಿತ ಬಾಲಕ ವಾಸಿಸುವ ಬಡಾವಣೆಯನ್ನು ಕಂಟೈನ್‌ಮೆಂಟ್‌ ಝೋನ್‌ ಆಗಿ ಪರಿಗಣಿಸಲಾಗಿದೆ. ಬಾಲಕನಿಗೆ ಚಿಕಿತ್ಸೆ ನೀಡಿದ ಸೇಡಂನ ಸಾರ್ವಜನಿಕ ಆಸ್ಪತ್ರೆಯ ಇಬ್ಬರು ವೈದ್ಯರು ಸೇರಿ ಆರು ಜನರನ್ನು ಕ್ವಾರಂಟೈನ್‌ ಮಾಡಲಾಗಿದೆ.

ಬಾಲಕನಲ್ಲಿ ಕೋವಿಡ್ ದೃಢವಾಗುತ್ತಿದ್ದಂತೆ ಸರ್ಕಾರಿ ಆಸ್ಪತ್ರೆಯನ್ನು ಕೆಲ ಕಾಲ ಮುಚ್ಚಿ, ಸ್ಯಾನಿಟೈಸರ್‌ ಮಾಡಲಾಗಿದ್ದು, ಸೋಮವಾರ ಸಾರ್ವಜನಿಕರಿಗೆ ಮುಕ್ತವಾಗಲಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ಸುರೇಶ ಮೇಕಿನ್‌ ತಿಳಿಸಿದ್ದಾರೆ.

ಗಡಿಗಳಲ್ಲಿ ಬೇಕಾಬಿಟ್ಟಿ ಸಂಚಾರ
ಸೇಡಂ ತಾಲೂಕಿನ ತೆಲಂಗಾಣ ಗಡಿಗೆ ಹೊಂದಿಕೊಂಡಿದೆ. ಕೋವಿಡ್ ಲಾಕಡೌನ್‌ ಸಡಿಲವಾಗುತ್ತಿದ್ದಂತೆ ಗಡಿಯಲ್ಲೂ ಪರಿಶೀಲನೆ ವ್ಯವಸ್ಥೆಯೇ ತಲೆಕೆಳಗಾಗಿದೆ. ಪ್ರತಿನಿತ್ಯ ನೂರಾರು ಜನ ತೆಲಂಗಾಣಕ್ಕೆ ಸಂಚರಿಸುತ್ತಿದ್ದಾರೆ. ಇದರಿಂದಲೂ ಕೋವಿಡ್ ವ್ಯಾಪಿಸುವ ಭೀತಿ ಜನರಲ್ಲಿ ಎದುರಾಗಿದೆ.

ಟಾಪ್ ನ್ಯೂಸ್

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

3-chincholi

Chincholi: ಯುವಕ‌ನ ಕೊಲೆ ‌; ಕಾರಣ ನಿಗೂಢ

8-chittapur

Chittapur: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭೇಟಿ; ಪರಿಶೀಲನೆ

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

Kalaburagi; ರಾಜಾತಿಥ್ಯ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಎಡಿಜಿಪಿ ಭೇಟಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

ಟಿಕೆಟ್‌ ಕೊಡಿಸದೆ ವಂಚನೆ: ಸಚಿವ ಜೋಶಿ ಸೋದರ, ಸೋದರಿ, ಅಳಿಯನ ವಿರುದ್ಧ ಕೇಸ್‌

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.