ಬಿತ್ತನೆಗೆ ಸಜ್ಜಾದರೂ ವರುಣನ ಕೃಪೆ ಇಲ್ಲ


Team Udayavani, Jun 15, 2020, 7:09 AM IST

varuna krupe

ಚಿಕ್ಕಬಳ್ಳಾಪುರ: ಜಿಲ್ಲಾದ್ಯಂತ ಮಳೆಯ ಕಣ್ಣಾಮುಚ್ಚಾಲೆ ಮುಂದುವರಿದಿದ್ದು, ಬಿತ್ತನೆಗಾಗಿ ಸಕಲ ಸಿದಟಛಿತೆ ಕೈಗೊಂಡಿರುವ ಅನ್ನದಾತರು ಇದೀಗ ಮಳೆಗಾಗಿ ಚಾತಕ ಪಕ್ಷಿಗಳಂತೆ ಆಕಾಶದತ್ತ ದಿಟ್ಟಿಸಿ ನೋಡುವ ಸ್ಥಿತಿ ನಿರ್ಮಾಣವಾಗಿದೆ. ನಿರೀಕ್ಷೆಯಂತೆ ಜಿಲ್ಲೆಯಲ್ಲಿ ಮಳೆರಾಯನ ಕೃಪೆ ತೋರದ ಪರಿಣಾಮ ಇದುವರೆಗೂ ಬರೀ 0.25 ರಷ್ಟು ಮಾತ್ರ ಬಿತ್ತನೆ ದಾಖಲಾಗಿದೆ.

ಹೌದು, ಸಾಮಾನ್ಯವಾಗಿ ಜಿಲ್ಲೆಯಲ್ಲಿ ಜೂನ್‌ ತಿಂಗಳ ಆರಂಭದಲ್ಲಿ ನೆಲಗಡಲೆ, ತೊಗರಿ  ಬಿತ್ತನೆ ಕಾರ್ಯ ಪೂರ್ಣಗೊಳ್ಳುತ್ತಿತ್ತು. ಆದರೆ ಅರ್ಧ ತಿಂಗಳಾದರೂ ನೆಲಗಡಲೆ ಬಿತ್ತನೆ ಮಳೆಯ ಅಭಾವದಿಂದ ಆರಂಭಗೊಳ್ಳದಿರುವುದು ರೈತರನ್ನು ಸಾಕಷ್ಟು ಚಿಂತೆಗೀಡು ಮಾಡಿದ್ದು, ಬಿತ್ತನೆಗೆ ಚಿಪ್ಪೆ ಸುಲಿದು  ಸಿದಪಡಿಸಿಕೊಂಡಿರುವ ನೆಲಗಡಲೆ ಬೀಜ ಸ್ವಲ್ಪ ದಿನ ಕಳೆದರೆ ಬಿತ್ತನೆಗೆ ಯೋಗ್ಯವಲ್ಲದಂತಾಗುವ ಆತಂಕ ರೈತರನ್ನು ಆವರಿಸಿದೆ.

1.40 ಲಕ್ಷ ಹೆಕ್ಟೇರ್‌ ಗುರಿ: ಜಿಲ್ಲೆಯಲ್ಲಿ ಈ ವರ್ಷ ಕೃಷಿ ಇಲಾಖೆ 1.40 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ವಿವಿಧ ಬೆಳೆಗಳ ಬಿತ್ತನೆ ಗುರಿ ಹೊಂದಿದೆ. ಆ ಪೈಕಿ ನೆಲಗಡಲೆ 26 ಸಾವಿರ ಹೆಕ್ಟೇರ್‌, ತೊಗರಿ 13,600 ಹೆಕ್ಟೇರ್‌ ಪ್ರದೇಶದ ಗುರಿ  ಹೊಂದಲಾಗಿದೆ. ಆದರೆ ಇದುವರೆಗೂ ಬಿತ್ತನೆ ಆಗಿರುವುದು ಕೇವಲ 353 ಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರ. ಜಿಲ್ಲಾದ್ಯಂತ ಉತ್ತಮ ಮಳೆ ಆಗಿದ್ದರೆ ಇಷ್ಟೊತ್ತಿಗಾಗಲೇ ನೆಲಗಡಲೆ ಹಾಗೂ ತೊಗರಿ ಬಿತ್ತನೆ ಕಾರ್ಯ ವಾಡಿಕೆಯಂತೆ ಪೂರ್ಣಗೊಳ್ಳಬೇಕಿತ್ತು. ಆದರೆ ಜಿಲ್ಲಾದ್ಯಂತ  ಮಳೆ ಕ್ಷೀಣಿಸಿರುವುದರಿಂದ ಬಿತ್ತನೆ ಪ್ರಮಾಣ ಕುಸಿದಿದೆ.

ಇದುವರೆಗೂ ಜಿಲ್ಲೆಯಲ್ಲಿ 26 ಸಾವಿರ ಹೆಕ್ಟೇರ್‌ ಪ್ರದೇಶದ ಪೈಕಿ ನೆಲಗಡಲೆ 135 ಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರ ಬಿತ್ತನೆ ಆಗಿದ್ದರೆ ತೊಗರಿ  13,600 ಹೆಕ್ಟೇರ್‌ ಪೈಕಿ 62 ಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರ ನಡೆದಿದೆ. ಜಿಲ್ಲೆಯಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಮುಂಗಾರು ಮಳೆ ಆರಂಭದಲ್ಲಿ ಬಿತ್ತನೆ ಸಮಯಕ್ಕೆ ಹೆಚ್ಚು ಕ್ಷೀಣಿಸಿದ್ದು, ಜಿಲ್ಲೆಯ ರೈತರು ಮಳೆಗಾಗಿ  ಆಕಾಶದತ್ತ ದಿಟ್ಟಿಸಿ ನೋಡುವಂತಾಗಿದೆ.  ಒಂದೆರೆಡು ದಿನಗಳಲ್ಲಿ ಮಳೆ ಕೃಪೆ ತೋರದಿದ್ದರೆ ಕಳೆದ ವರ್ಷದಂತೆ ನೆಲಗಡಲೆ ಬಿತ್ತನೆ ಪ್ರಮಾಣದಲ್ಲಿ ಸಾಕಷ್ಟು ಕುಸಿಯುವ ಸಾಧ್ಯತೆಗಳು ದಟ್ಟವಾಗಿವೆ.

ಜಿಲ್ಲೆಯಲ್ಲಿ ಈ ವರ್ಷದ ಮುಂಗಾರು ಹಂಗಾಮಿಗೆ ಒಟ್ಟು 1.40 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಿದ್ದು, ಆ ಪೈಕಿ ಇದುವರೆಗೂ 0.25 ಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರ ಬಿತ್ತನೆ ನಡೆದಿದೆ. ಜಿಲ್ಲೆಯ ರೈತರು ಬಿತ್ತನೆ ಕಾರ್ಯಕ್ಕೆ ಸಿದತೆ ನಡೆಸಿದ್ದು, ಮಳೆಗಾಗಿ ಎದುರು ನೋಡುತ್ತಿದ್ದಾರೆ. 
-ಎಲ್‌.ರೂಪಾ, ಜಿಲ್ಲಾ ಜಂಟಿ ಕೃಷಿ ನಿರ್ದೇಶಕಿ

* ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

Govt Schools: ಈ ಬಾರಿಯೂ ಬೇಸಗೆಯಲ್ಲಿ ಮಕ್ಕಳಿಗೆ ಭರಪೂರ ಬಿಸಿಯೂಟ

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

MLA Pradeep Eshwar : ಎತ್ತಿನಹೊಳೆ ಕಾಮಗಾರಿಗೆ 500 ಕೋಟಿ ನೀಡಿ; ಪ್ರದೀಪ್‌

chintamai-Murder

Chintamani: ಹಿಂಬಾಲಿಸಿ ಬಂದು ವ್ಯಕ್ತಿಯೊಬ್ಬರ ಹ*ತ್ಯೆಗೈದ ದುಷ್ಕರ್ಮಿಗಳು! 

10-gudibanda

Gudibanda: ವಿವಿಧ ಪ್ರಕರಣಗಳ ಕಳ್ಳನ ಬಂಧನ, 152 ಗ್ರಾಂ ಬಂಗಾರ ವಶ

Sudhakar–sandeep-Reddy

BJP Rift: ಸಂಸದ ಕೆ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಗೆ ಶಾಪ: ಸಂದೀಪ ರೆಡ್ಡಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.