‘ಸೃಜನಾತ್ಮಕತೆಯೂ ಸದ್ವಿನಿಯೋಗವಾಗಲಿ’


Team Udayavani, Jun 17, 2020, 1:00 AM IST

Creativity

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಭಗವಂತ ಎಲ್ಲದರ ಸೃಷ್ಟಿಕರ್ತ. ನಮ್ಮ ಹುಟ್ಟು ಕೂಡ ಆತನ ದೃಷ್ಟಿಯಲ್ಲಿ ಆದದ್ದು.

ಸೃಷ್ಟಿಸುವ ಜತೆಗೆ ಸೃಜನಶೀಲತೆ ಎಂಬ ವರವನ್ನು ಆತ ನಮಗೆ ಬಳುವಳಿಯಾಗಿ ನೀಡಿದ್ದಾನೆ. ಆದರೆ ಎಲ್ಲದರಲ್ಲೂ ಪರಿಪೂರ್ಣತೆಯ ಬೆನ್ನತ್ತಿರುವ ನಾವು ಒಂದೆಡೆಯಿಂದ ನಮ್ಮತನವನ್ನೆ ಕಳೆದುಕೊಳ್ಳುತ್ತಿದ್ದೇವೆ. ಇದೇ ನಮ್ಮಲ್ಲಿನ ಉತ್ಸಾಹ ಕುಗ್ಗಲು ಪ್ರಮುಖ ಕಾರಣ.

ನಮ್ಮಲ್ಲಿನ ಸೃಜನಶೀಲತೆಯ ಅರಿವೇ ನಮಗಿಲ್ಲದ ಕಾರಣ ಎಲ್ಲದರಲ್ಲೂ ಅಪೂರ್ಣತೆಯ ಭಾವ, ಪ್ರತಿಯೊಂದಕ್ಕೂ ಕಿರುಚಾಟ, ಅರೆಬರೆ ಕೆಲಸ ಇವೆಲ್ಲವೂ ನೋಡುಗರಿಗೆ ನಿಮ್ಮ ಸೃಜನಾತ್ಮಕತೆ ಎಷ್ಟಿದೆ ಎಂಬ ಪ್ರಶ್ನೆ ಹುಟ್ಟಲು ಕಾರಣವಾಗುತ್ತದೆ.

ನಾನು ಒಂಟಿಯಲ್ಲ, ಜಗತ್ತೇ ನನ್ನಜತೆ ಇದೆ ಎಂಬ ಭಾವ ನಮ್ಮಲ್ಲಿರಬೇಕು. ಭಗವಂತ ನೀಡಿದ ಸೃಜನಾತ್ಮಕತೆಯ ಸದ್ವಿನಿಯೋಗ ಆಗಬೇಕು. ಅದಾದಾಗ ಮಾತ್ರ ನಾವು ಮತ್ತು ನಮ್ಮ ಕೆಲಸಗಳೆರಡೂ ಪರಿಪೂರ್ಣವಾಗಲು ಸಾಧ್ಯ.

ನಿಮ್ಮ ಮನಸ್ಸು ಗೃಹಿಸುವಷ್ಟು ಪರಿಪೂರ್ಣತೆಯನ್ನು ನೀವು ಸಾಧಿಸುವುದು ಸಾಧ್ಯವಿಲ್ಲ. ಪತ್ರಿಕೆ ಓದಿದ ಬಳಿಕ ಅತವಾ ಸಿನೆಮಾ ನೋಡಿದ ಬಳಿಕ ನಿಮಗೆ ಇನ್ನೂ ಏನೋ ಇಲ್ಲಿ ಬೇಕಿತ್ತು ಎಂದು ಎನಿಸಿಯೇ ಎನಿಸುತ್ತದೆ. ಇದರಂತೆಯೇ ನಿಮ್ಮ ಕೆಲಸಗಳೂ ಕೂಡ. ನೆನಪಿಡಿ ಜಗತ್ತಿನಲ್ಲಿ ಯಾರೂ ಪರಿಪೂರ್ಣರಲ್ಲ.

ಸೋಲನ್ನು ಸಂಭ್ರಮಿಸಿ
ಸೋತ ಮಾತ್ರಕ್ಕೆ ಜೀವನ ಮುಗಿಯಲಿಲ್ಲ. ಪ್ರತೀ ಅಂತ್ಯವೂ ಹೊಸ ಆರಂಭಕ್ಕೆ ಬುನಾದಿ. ಸೋಲು ನಿಮ್ಮ ಮುಂದಿನ ಗೆಲುವಿಗೆ ಪಾಠವಾಗಬೇಕೇ ಹೊರತು ಅಡ್ಡಿಯಾಗಬಾರದು. ಹೀಗಾಗಿಯೇ ಸೋಲನ್ನು ಸಂಭ್ರಮಿಸಲು ಕಲಿಯಿರಿ.

ಭಗವಂತನ ಅನುಗ್ರಹವಿಲ್ಲದೆ ಹುಲ್ಲು ಕಡ್ಡಿಯೂ ಹಂದಾಡದು ಎಂಬ ಮಾತಿದೆ. ಹೀಗಾಗಿ ಶಕ್ತಿ ಮೀರಿ ಪ್ರತಿಯೊಂದನ್ನೂ ಪ್ರಯತ್ನಿಸಿ. ಫ‌ಲಾಫ‌ಲವನ್ನು ಭಗವಂತನ ಅನುಗ್ರಹಕ್ಕೆ ಬಿಟ್ಟುಬಿಡಿ. ಒಂದೊಮ್ಮೆ ನೀವು ಸೋತರೆ ಭಗವಂತನ ಅನುಗ್ರಹ ನಿಮ್ಮ ಮೇಲಿಲ್ಲ ಎಂದಲ್ಲ. ಬದಲಾಗಿ ಇದಕ್ಕಿಂತ ದೊಡ್ಡ ಅವಕಾಶವನ್ನು ಭಗವಂತ ನಿಮಗಾಗಿ ನೀಡಲಿದ್ದಾನೆ ಎಂದತರ್ಥ.

ನಿಮ್ಮನ್ನು ನೀವೇ ಕ್ಷಮಿಸಿ
ತಪ್ಪುಗಳಾದಾಗ ಅಥವಾ ನಿಮ್ಮ ಪ್ರಯತ್ನದಲ್ಲಿ ಸೋಲುಂಡಾಗ ನಿಮ್ಮನ್ನು ನೀವೇ ಕ್ಷಮಿಸುವ ಅಭ್ಯಾಸ ಮಾಡಕೊಳ್ಳಿ. ಒಮ್ಮೆ ಜೋರಾಗಿ ನಕ್ಕು ನಿಮ್ಮ ನೋವು ಮರೆತುಬಿಡಿ. ಸೋಲುಗಳು ಸಾಧನೆಯ ಹಾದಿಯಲ್ಲಿ ಸಿಗುವ ಹಂತಗಳಷ್ಟೆ. ಇವೇ ನಮ್ಮ ಮುಂದಿನ ಗೆಲುವಿಗಾಗಿ ನಡೆದಿರುವ ತಾಲೀಮುಗಳು ಎಂದು ಭಾವಿಸಿ. ಉತ್ತಮವಾಗಿ ಕೆಲಸ ಮಾಡಲಾಗದಿದ್ದರೆ ಬಿಡಿ, ಮುಂದೆ ಅತ್ಯುತ್ತಮವಾಗಿ ಕೆಲಸ ಮಾಡುವ ಸಂಕಲ್ಪ ತೊಡೋಣ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

16

Uv Fusion: ಪೆನ್ನಿಗೊಂದು ಕಥೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.