ಹೆಮ್ಮೆಯ ಸಿಂಧೂರ ತಿಲಕ


Team Udayavani, Jun 17, 2020, 4:43 AM IST

sindoora

ಕೋವಿಡ್‌ 19 ಯುದ್ಧದಲ್ಲಿ  ಜೀವದ ಹಂಗು ತೊರೆದು ದುಡಿಯುತ್ತಿರುವ ವೈದ್ಯರು ಮತ್ತುವೈದ್ಯಕೀಯ ಸಿಬ್ಬಂದಿಯನ್ನು ಎಷ್ಟು ಸ್ಮರಿಸಿದರೂ ಸಾಲದು. ಅಂತೆಯೇ, ಈ ಸಮಯದಲ್ಲಿ ಅವರ ಶ್ರಮವನ್ನು ಗುರುತಿಸಿ, ಧನ್ಯವಾದ ಹೇಳಿ  ಮಾನಸಿಕವಾಗಿ ಬೆಂಬಲ ನೀಡುವುದು ಕೂಡಾ ಅಷ್ಟೇ ಮುಖ್ಯ. ಈ ನಿಟ್ಟಿನಲ್ಲಿ, ವಿಶೇಷ ವಿಡಿಯೋ ಮೂಲಕ ಕೋವಿಡ್‌ 19 ಯೋಧರಿಗೆ ಅಭಿನಂದನೆ ಸಲ್ಲಿಸಿರುವ ಡಾ. ಸಿಂಧೂರ ಶರ್ಮ ಭಟ್, ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಅಮೆರಿಕದಲ್ಲಿ ಅನಸ್ತೇಶಿಯಾ ವೈದ್ಯೆಯಾಗಿರುವ ಸಿಂಧೂರ, ತಮ್ಮ ಸಹೋದ್ಯೋಗಿಗಳ ಶ್ರಮಕ್ಕೆ ಮೆಚ್ಚುಗೆ ಸೂಚಿಸುವ ಸಲುವಾಗಿ “ಬಿಹೈನ್ಡ್ ದಿ ಮಾಸ್ಕ್‌’ ಎಂಬ ಕಿರು ವಿಡಿಯೋವನ್ನು ತಯಾರಿಸಿದ್ದಾರೆ. ಭಾರತ, ಕೆನಡ, ಚೀನಾ, ಅಮೆರಿಕ, ಯುರೋಪ್‌ನ ಅನಸ್ತೇಶಿಯಾ ತಜ್ಞೆಯರು ವಿಡಿಯೋದಲ್ಲಿರುವುದು ವಿಶೇಷ. ಈ ವಿಡಿಯೋ ವಿಶ್ವಾದ್ಯಂತ ವೈರಲ್‌ ಆಗಿದ್ದು ಲಕ್ಷಾಂತರ ಜನರ ಮೆಚ್ಚುಗೆ ಗಳಿಸಿದೆ.

ಸಿಂಧೂರ ಅವರು ಬೆಂಗಳೂರಿನಲ್ಲಿ ನೆಲೆಸಿರುವ ಕರಾವಳಿ ಮೂಲದ  ವಿಜಯಲಕ್ಷ್ಮಿ ಮತ್ತು ಮಟ್ಟು ಹಿರಿಯಣ್ಣ ಶರ್ಮರ ಪುತ್ರಿ. ಬೆಂಗಳೂರಿನ  ಎಂವಿಜೆ ಮೆಡಿಕಲ್‌ ಕಾಲೇಜಿನಲ್ಲಿ ಎಂಬಿಬಿಎಸ್‌ ಪದವಿ, ಮಂಗಳೂರಿನ ಕೆ.ಎಸ್‌. ಹೆಗ್ಡೆ ಮೆಡಿಕಲ್‌ ಕಾಲೇಜಿನಲ್ಲಿ ಅರಿವಳಿಕೆ ವಿಷಯದಲ್ಲಿ ಎಂಡಿ ಪದವಿ  ಪಡೆದಿರುವ ಅವರು, ಅಮೆರಿಕದ ಯುನಿವರ್ಸಿಟಿ ಆಫ್ ಮಿಯಾಮಿಯಲ್ಲಿ ಅರಿವಳಿಕೆ ತಜ್ಞರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪತಿ ಡಾ. ಅಭಿಷೇಕ್‌ ಭಟ್‌ ಮಾರ್ಗದರ್ಶನದಲ್ಲಿ ಈ ವಿಡಿಯೋ ತಯಾರಿಸಿದ್ದಾರೆ. ಬೆಂಗಳೂರು ಮೂಲದ ಅಭಿಷೇಕ್‌,  ಫ್ಲೋರಿಡಾದ ಯುನಿವರ್ಸಿಟಿ ಆಫ್ ಮಿಯಾಮಿಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಯುವ ವೈದ್ಯ ದಂಪತಿ ಸಾಮಾಜಿಕ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡು, ವಿದೇಶಿ ನೆಲದಲ್ಲಿ ಕನ್ನಡದ ಹೆಸರನ್ನು ಅಚ್ಚಾಗಿಸುತ್ತಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.