ಬಿಜೆಪಿ ಪಾಲಾದ ಬ್ಯಾಡಗಿ ಎಪಿಎಂಸಿ ಅಧ್ಯಕ್ಷ ಸ್ಥಾನ
Team Udayavani, Jun 17, 2020, 7:48 AM IST
ಬ್ಯಾಡಗಿ: ಬಹುಮತವಿದ್ದರೂ ಕಾಂಗ್ರೆಸ್ ಪಕ್ಷದಲ್ಲಿ ಹೊಂದಾಣಿಕೆ ಕೊರತೆಯಿಂದ ಮಂಗಳವಾರ ನಡೆದ ಸ್ಥಳೀಯ ಎಪಿಎಂಸಿ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನ ಬಿಜೆಪಿ ಪಾಲಾಗಿದ್ದು, ವೀರಭದ್ರಪ್ಪ ಗೊಡಚಿ ಅಧ್ಯಕ್ಷರಾಗಿ ಆಯ್ಕೆಯಾದರೆ, ಕಾಂಗ್ರೆಸ್ನ ಉಳಿವೆಪ್ಪ ಕುರುವತ್ತಿ ಉಪಾಧ್ಯಕ್ಷ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.
ಮಂಗಳವಾರ ಎಪಿಎಂಸಿ ಆವರಣದಲ್ಲಿ ಮುಂದಿನ 20 ತಿಂಗಳ ಅವಧಿಗೆ ಜರುಗಿದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಬಿಜೆಪಿಯಿಂದ ವೀರಭದ್ರಪ್ಪ ಗೊಡಚಿ ಹಾಗೂ ಕಾಂಗ್ರೆಸ್ನಿಂದ ಶಂಭನಗೌಡ ಪಾಟೀಲ ನಾಮಪತ್ರ ಸಲ್ಲಿಸಿದ್ದರು, ಕಾಂಗ್ರೆಸ್ 9, ಬಿಜೆಪಿ (ಮೂವರು ನಾಮ ನಿರ್ದೇಶಿತ ಸದಸ್ಯರು ಸೇರಿ) 7 ಜನ ಸದಸ್ಯರು, ವರ್ತಕರ ಪ್ರತಿನಿಧಿ 1 ಸ್ಥಾನ (ತಟಸ್ಥ) ಬಲವನ್ನು ಹೊಂದಿದ್ದು, ಅಂತಿಮವಾಗಿ ಕಾಂಗ್ರೆಸ್ನ ಇಬ್ಬರು ಬಿಜೆಪಿ ಕಡೆ ವಾಲಿದ್ದರಿಂದ ಅಧ್ಯಕ್ಷ ಗೊಡಚಿ ಆಯ್ಕೆ ಸುಲಭವಾಯಿತು..
ಉಪಾಧ್ಯಕ್ಷ ಸ್ಥಾನಕ್ಕೆ ಉಳಿಪ್ಪ ಮರು ಆಯ್ಕೆ: ಹಿಂದಿನ ಅವಧಿಯಲ್ಲಿ ಉಪಾಧ್ಯಕ್ಷರಾಗಿದ್ದ ಮಾಸಣಗಿ ಕ್ಷೇತ್ರದ ಉಳಿವೆಪ್ಪ ಕುರುವತ್ತಿ ಮರು ಆಯ್ಕೆ ಬಯಸಿ ಕಾಂಗ್ರೆಸ್ನಿಂದ ನಾಮಪತ್ರ ಸಲ್ಲಿಸಿದ್ದರು. ಬಿಜೆಪಿಯಿಂದ ವಿಜಯ ಕುಮಾರ್ ಮಾಳಗಿ ನಾಮಪತ್ರ ಸಲ್ಲಿಸಿದ್ದರು. ಇಲ್ಲಿಯೂ ಬಿಜೆಪಿಯ ವಿಜಯಕುಮಾರ್ ಮಾಳಗಿ ಆಯ್ಕೆ ಆಗುವ ಎಲ್ಲ ಲೆಕ್ಕಾಚಾರಗಳು ತಲೆಕೆಳಗಾಗಿ ಅಂತಿಮವಾಗಿ ಉಳಿವೆಪ್ಪ ಕುರುವತ್ತಿ ಹತ್ತು ಮತಗಳನ್ನು ಪಡೆದು ಉಪಾಧ್ಯಕ್ಷರಾಗಿ ಮರು ಆಯ್ಕೆಯಾದರು. ಹಾವೇರಿ ತಹಶೀಲ್ದಾರ್ ಶಂಕರ್ಚುನಾವಣಾಧಿಕಾರಿಯಾಗಿ ಕೆಲಸ ನಿರ್ವ ಹಿಸಿದರು.
ಮಾರುಕಟ್ಟೆ ಸಮಗ್ರ ಅಭಿವೃದ್ಧಿಗೆ ಚಿಂತನೆ: ಅಧ್ಯಕ್ಷರಾಗಿ ಆಯ್ಕೆ ಆಯ್ಕೆಯಾದ ಬಳಿಕ ಮಾತನಾಡಿದ ವೀರಭದ್ರಪ್ಪ ಗೊಡಚಿ, ಅಂತಾರಾಷ್ಟ್ರೀಯ ಮೆಣಸಿನಕಾಯಿ ಮಾರುಕಟ್ಟೆಗೆ ಅಧ್ಯಕ್ಷ ರಾಗಿ ಆಯ್ಕೆಯಾಗಿದ್ದು, ಬಹಳಷ್ಟು ಸಂತಸ ತಂದಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಸರಕಾರಗಳಿದ್ದು ಸ್ಥಳೀಯ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹಾಗೂ ಮಾಜಿ ಶಾಸಕ ಸುರೇಶ ಗೌಡ ಅವರ ಮಾರ್ಗದರ್ಶನದಲ್ಲಿ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಿದ್ದೇನೆ. ಚುನಾವಣೆಯಲ್ಲಿನ ಸಂಖ್ಯಾ ಬಲಗಳ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಎಲ್ಲ ಸದಸ್ಯರನ್ನು ಒಟ್ಟುಗೂಡಿಸಿಕೊಂಡು ಕೆಲಸ ನಿರ್ವಹಿಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri: ಸಚಿವ ಜಮೀರ್ ಅಹ್ಮದ್ ಕಾರಿನ ಮೇಲೆ ಖಾದ್ರಿ ಬೆಂಬಲಿಗರ ಕಲ್ಲು ತೂರಾಟ
Basavaraj Bommai: ನಮಗೆ ಕಾಂಗ್ರೆಸ್ ನೇರ ಎದುರಾಳಿ
Shiggaon ‘ಕೈ’ ಭಿನ್ನಮತ; ಯಾಸಿರ್ ಖಾನ್ ಬಿಜೆಪಿ ಏಜೆಂಟ್ ಎಂದ ಅಜ್ಜಂಫೀರ್ ಖಾದ್ರಿ
Tragedy: ಮಗ ಮೃತಪಟ್ಟ ವಿಚಾರ ಕೇಳಿ ತಂದೆಗೂ ಹೃದಯಾಘಾತ… ಮುಗಿಲು ಮುಟ್ಟಿದ ಆಕ್ರಂದನ
By election; ಶೀಘ್ರ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಂತಿಮ: ಎಚ್ ಕೆ ಪಾಟೀಲ್
MUST WATCH
ಹೊಸ ಸೇರ್ಪಡೆ
Loksabha: ವಾಣಿಜ್ಯ ಹಾಗೂ ಕೈಗಾರಿಕೆ ಸಂಸದೀಯ ಸಲಹಾ ಸಮಿತಿಯ ಸದಸ್ಯರಾಗಿ ಶೆಟ್ಟರ್ ನೇಮಕ
Desi Swara: ಸಾಧನೆಗೆ ಆತ್ಮಸಂತೃಪ್ತಿಯೇ ಅಳತೆಗೋಲು : ಸಾಮಾಜಿಕ ಸಾಧನೆ ಸ್ವಾರ್ಥವಾಗದಿರಲಿ
Bengaluru: 1.5 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ
Ellige Payana Yavudo Daari Review: ರೋಚಕ ಹಾದಿಯ ಸುಖಕರ ಪಯಣವಿದು…
Kundapura: ಬೀಜಾಡಿ ಬೀಚ್ ನಲ್ಲಿ ಈಜಲು ತೆರಳಿದ ಇಬ್ಬರು ಸಮುದ್ರಪಾಲು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.