![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 17, 2020, 9:36 AM IST
ಸಾಗರ: ಆದಾಯ ತೆರಿಗೆ ಅಧಿಕಾರಿಗಳೆಂದು ಹೇಳಿಕೊಂಡ ಬಂದ ನಾಲ್ವರು ತಾಲೂಕಿನ ಜನ್ನೆಹಕ್ಲು ನಿವಾಸಿ ಸಾಫ್ಟ್ ವೇರ್ ಡೆವಲಪರ್ ಆಗಿ ಮನೆಯಲ್ಲೇ ಕೆಲಸ ಮಾಡುತ್ತಿದ್ದ ವಿಶ್ವನಾಥ್ ಎಂಬುವರಿಗೆ 2.30 ಲಕ್ಷ ರೂ. ವಂಚಿಸಿದ್ದಾರೆ.
ಜೂ.12ರಂದು ಬೆಳಗ್ಗೆ 6.40ರ ಸುಮಾರಿಗೆ ವಿಶ್ವನಾಥ್ ಅವರ ಮನೆಗೆ ಬಂದ ನಾಲ್ವರು ಅಪರಿಚಿತರು ನಾವು ಐಟಿ ಇಲಾಖೆಯವರಾಗಿದ್ದು, ನಿಮ್ಮ ವ್ಯವಹಾರ ಹಾಗೂ ಬ್ಯಾಂಕಿಗೆ ಸಂಬಂಧಪಟ್ಟ ಮಾಹಿತಿ ನೀಡುವಂತೆ ಕೇಳಿದ್ದಾರೆ. ಒಂದೊಮ್ಮೆ ನೀವು ಮಾಹಿತಿ ನೀಡದೆ ಇದ್ದರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ನಂತರ ವಿಶ್ವನಾಥ್ ಅವರಿಗೆ ಸೇರಿದ್ದ ಲ್ಯಾಪ್ ಟಾಪ್ನಲ್ಲಿದ್ದ ದಾಖಲೆಗಳನ್ನು ವಶಕ್ಕೆ ಪಡೆಯುವುದರ ಜತೆಗೆ ವಿಶ್ವನಾಥ್ ತಮ್ಮ ವಿನಯಕುಮಾರ್ ಅವರ ಎಲ್ಲ ದಾಖಲಾತಿಗಳನ್ನು ವಶಕ್ಕೆ ಪಡೆದಿದ್ದಾರೆ. ಅಣ್ಣ-ತಮ್ಮನನ್ನು ಕಾರಿನಲ್ಲಿ ಸಿದ್ದಾಪುರದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಕರೆದೊಯ್ದು ವಿಶ್ವನಾಥ್ ಹೆಸರಿನಲ್ಲಿ 50 ಸಾವಿರ ರೂ., ನಂತರ ತಾಳಗುಪ್ಪದಲ್ಲಿ ವಿನಯಕುಮಾರ್ ಖಾತೆಯಿಂದ 1.40 ಲಕ್ಷ, ವಿಶ್ವನಾಥ್ ಅವರ ಎಟಿಎಂ ಕಾರ್ಡ್ ಪಡೆದು 40 ಸಾವಿರ ರೂ.ಗಳನ್ನು ಪಡೆದಿದ್ದಾರೆ. ಮನೆಗೆ ಕರೆದುಕೊಂಡು ಬಂದು ಉಳಿದ ಶೇ.50 ಹಣವನ್ನು 15 ದಿನದೊಳಗೆ ತಮಗೆ ತಲುಪಿಸಬೇಕೆಂದು ಎಚ್ಚರಿಕೆ ನೀಡಿ ವಿನಯಕುಮಾರ್ ಖಾತೆಗೆ ಸಂಬಂಧಿಸಿದಂತೆ 2 ಚೆಕ್ ಸಹಿ ಮಾಡಿಸಿಕೊಂಡು ಪಡೆದಿದ್ದಾರೆ. ಜತೆಗೆ ಎರಡು ಖಾಲಿ ಹಾಳೆಗೆ ಸಹಿ ಮಾಡಿಸಿಕೊಂಡು ಆಸ್ತಿಗೆ ಸಂಬಂಧಿಸಿದ ಎಲ್ಲ ದಾಖಲೆಗಳ ಫೋಟೋ ಪಡೆದು ನಾಲ್ವರೂ ಪರಾರಿಯಾಗಿದ್ದಾರೆ. ಈ ಸಂಬಂಧ ವಿಶ್ವನಾಥ್ ಅವರು ಸೋಮವಾರ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!
Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು
Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?
Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್ ಗರಂ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.