ಲಾಕ್‌ಡೌನ್‌ನಲ್ಲಿ ರಾಜ್ಯದ ರೈತರ ಸ್ಥಿತಿಗತಿ ಸಮೀಕ್ಷೆ

1500 ರೈತರ ಸಮೀಕ್ಷೆ ನಡೆಸಿದ ಕೃಷಿ ತಜ್ಞರು ಜೂನ್‌ ಅಂತ್ಯಕ್ಕೆ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆ

Team Udayavani, Jun 17, 2020, 12:53 PM IST

Farmers

ಸಾಂದರ್ಭಿಕ ಚಿತ್ರ

ಹಾವೇರಿ: ಕೋವಿಡ್ ಮಹಾಮಾರಿ ನಿಯಂತ್ರಣಕ್ಕೆ ಸರ್ಕಾರ ವಿಧಿಸಿದ ಲಾಕ್‌ಡೌನ್‌ನಿಂದ ರಾಜ್ಯದ ರೈತರು ಏನೆಲ್ಲ ಸಮಸ್ಯೆ ಅನುಭವಿಸಿದ್ದಾರೆ. ಅವರ ಪ್ರಸ್ತುತ ಕೃಷಿ ಸ್ಥಿತಿಗತಿ ಏನಾಗಿದೆ ಎಂಬುದರ ಬಗ್ಗೆ ಕೃಷಿ ತಜ್ಞರು, ವಿಜ್ಞಾನಿಗಳು ಹಾಗೂ ಪರಿಣತರು ಸೇರಿ ಫೋನ್‌ ಮೂಲಕ ರೈತರ ಸಮೀಕ್ಷೆ ನಡೆಸಿದ್ದು, ಜೂನ್‌ ಕೊನೆಯಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸಿದ್ಧತೆ ನಡೆದಿದೆ.

ಕರ್ನಾಟಕ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಡಾ.ಪ್ರಕಾಶ ಕಮ್ಮರಡಿ ಉಸ್ತುವಾರಿಯಲ್ಲಿ ಮಹಾರಾಜ ತಾಂತ್ರಿಕ ಮಹಾವಿದ್ಯಾಲಯ ಮೈಸೂರು, ಐಡಿಮೈನ್‌ ಟೆಕ್ನಾಲಜಿ, ತೆಂಗು ಉತ್ಪಾದಕರ ಸಂಘ, ವಿವಿಧ ಸ್ವಯಂ ಸೇವಾ ಸಂಘಟನೆಗಳ ಕೃಷಿ ತಜ್ಞರು ಸೇರಿ 60 ಕೃಷಿ ಪದವೀಧರರು ಸ್ವಯಂ ಪ್ರೇರಿತರಾಗಿ ಈ ಸಮೀಕ್ಷೆ
ನಡೆಸಿದ್ದಾರೆ. ಲಾಕ್‌ಡೌನ್‌ ವೇಳೆ ರೈತರ ಹಾಗೂ ಕೃಷಿ ಸ್ಥಿತಿಗತಿ ಬಗ್ಗೆ ನಿಖರ ಅಂಕಿ-ಅಂಶಗಳುಳ್ಳ ವಸ್ತುನಿಷ್ಠ ವರದಿ ತಯಾರಿಸಿ ರೈತ ಧ್ವನಿ ಏನಿದೆ ಎಂಬುದನ್ನು ಸರ್ಕಾರಕ್ಕೆ ತಿಳಿಸಬೇಕು. ತನ್ಮೂಲಕ ಕೃಷಿಕರ ಸಮಸ್ಯೆ, ಅವುಗಳಿಗೆ ಪರಿಹಾರ, ಅವರ ಪ್ರಸ್ತುತ ವಾಸ್ತವಿಕ ಕೃಷಿ ಸ್ಥಿತಿಗತಿ ಏನಾಗಿದೆ ಎಂಬುದನ್ನು ಸರ್ಕಾರಕ್ಕೆ ಮನವರಿಕೆ ಮಾಡಿ ಕೊಡುವುದು ಈ ಸಮೀಕ್ಷೆಯ ಮೂಲ ಉದ್ದೇಶ.

ಕೃಷಿ ಬೆಲೆ ಆಯೋಗ, ರೈತ ಸಂಘಟನೆಗಳು, ಕೃಷಿ ವಿವಿಗಳ ಸಂರ್ಪಕದಲ್ಲಿದ್ದ 1500 ರೈತರನ್ನು ವಿವಿಧ ಪ್ರಶ್ನಾವಳಿ ಮೂಲಕ ಫೋನ್‌ನಲ್ಲಿ ಈಗಾಗಲೇ ಸಮೀಕ್ಷೆ ಮಾಡಲಾಗಿದ್ದು, ಮಾಹಿತಿಯನ್ನು ಗಣಕ ಯಂತ್ರದಲ್ಲಿ ದಾಖಲಿಸಿ, ವಿಶ್ಲೇಷಿಸಿ ಅಂತಿಮ ವರದಿ ಸಿದ್ಧಪಡಿಸುವ ಕಾರ್ಯ ನಡೆದಿದೆ. ಈ ವರದಿ ಆಧರಿಸಿ ಸರ್ಕಾರ ರೈತರ ಸಮಸ್ಯೆ, ಬೇಡಿಕೆಗೆ ಸ್ಪಂದಿಸುವುದಾದರೆ ಅದು ಮುಂಗಾರು ಹಂಗಾಮಿನಲ್ಲಿಯೇ ಅನ್ನದಾ ತ ರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಜೂನ್‌ ಕೊನೆಯಲ್ಲಿಯೇ ಈ ವರದಿಯನ್ನು ಸರ್ಕಾ ರಕ್ಕೆ ಸಲ್ಲಿಸಲು ತಯಾರಿ ನಡೆದಿದೆ.

ಹೈದ್ರಾಬಾದ್‌-ಕರ್ನಾಟಕ, ಹಳೆ ಮೈಸೂರು, ಕರಾವಳಿ, ಮಲೆನಾಡು, ಮಧ್ಯಕರ್ನಾಟಕ ವಲಯಗಳನ್ನಾಗಿ ವಿಭಾಗಿಸಿ ಆಯಾ ವಲಯಗಳಿಗೆ ಸಂಬಂಧಿಸಿ ಪ್ರತ್ಯೇಕ ಪ್ರಶ್ನಾವಳಿ ತಯಾರಿಸಿ ಸಮೀಕ್ಷೆ ಮಾಡಲಾಗಿದೆ. ಇದರಲ್ಲಿ ಮಳೆಯಾಶ್ರಿತ, ನೀರಾವರಿ, ದೊಡ್ಡ ಹಿಡುವಳಿ ರೈತರು, ಸಣ್ಣ ಹಿಡುವಳಿ ರೈತರು ಅಷ್ಟೇ ಅಲ್ಲ ಜಾತಿವಾರು ಮಾಹಿತಿ, ಅಂಕಿ-ಅಂಶ ಕಲೆ ಹಾಕಿದ್ದು, ಲಾಕ್‌ಡೌನ್‌ ರೈತರು, ಕೃಷಿ ಮೇಲೆ ಬೀರಿದ ಪರಿಣಾಮ ತಿಳಿಸುವ ಸಮಗ್ರ ವಸ್ತುನಿಷ್ಠ ವರದಿ ಇದಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಕೃಷಿ ಸಮೀಕ್ಷೆಯಲ್ಲಿ ಏನೇನಿದೆ?
ಕೋವಿಡ್‌-19 ಲಾಕ್‌ಡೌನ್‌ನಿಂದ ಕೃಷಿ ಸ್ಥಿತಿ ಏನಾಗಿದೆ? ಇಂದಿನ ಪರಿಸ್ಥಿತಿಯಲ್ಲಿ ಕೃಷಿ ಮುಂದುವರಿಸಲು ಆಗುತ್ತದೆಯೋ ಇಲ್ಲವೋ? ಕೃಷಿಗೆ ಸರ್ಕಾರದ ಸಹಕಾರ ಸಿಕ್ಕಿದೆಯೋ ಇಲ್ಲವೋ? ಕೃಷಿ ವಿಶ್ವವಿದ್ಯಾಲಯಗಳಿಂದ ಸ್ಪಂದನೆ, ಸಹಾಯ ಸಿಕ್ಕಿದೆಯೇ? ಸರ್ಕಾರ ಈ ಸಂದರ್ಭದಲ್ಲಿ ನೀಡಿದ ಪರಿಹಾರ ಸರಿಯಾಗಿ ತಲುಪಿದೆಯೇ? ಸರ್ಕಾರದ ಪರಿಹಾರದಿಂದ ಸಮಸ್ಯೆ ತೀವ್ರತೆ ಕಡಿಮೆಯಾಗಿದೆಯೇ? ತಕ್ಷಣಕ್ಕೆ ಕೃಷಿ ಮಾಡಲು ಬೀಜ, ರಸಗೊಬ್ಬರ, ಹಣಕಾಸಿನ
ಸಮಸ್ಯೆ, ಕಾರ್ಮಿಕರ ಸಮಸ್ಯೆ ಇದೆಯೇ? ಕೋವಿಡ್‌ ಲಾಕ್‌ಡೌನ್‌ ಸಂದರ್ಭದಲ್ಲಿನ ಸರ್ಕಾರದ ನಿಲುವು ರೈತ ಪರವಾಗಿತ್ತೇ? ಲಾಕ್‌ಡೌನ್‌ ಸಂದರ್ಭದಲ್ಲಿ ಉತ್ಪನ್ನ ಹಾಳಾಗಿ ಹಾನಿ ಎಷ್ಟಾಗಿದೆ. ಹೀಗೆ ಇತ್ಯಾದಿ ಅಂಶಗಳು ಸೇರಿದಂತೆ 39 ಪ್ರಶ್ನೆಗಳನ್ನು ಸಮೀಕ್ಷೆ ವೇಳೆ ಕೇಳಿ ಮಾಹಿತಿ ಸಂಗ್ರಹಿಸಲಾಗಿದೆ.

ಲಾಕ್‌ಡೌನ್‌ ವೇಳೆ ರೈತರ ಹಾಗೂ ಕೃಷಿ ಸ್ಥಿತಿಗತಿಯನ್ನು ನಿಖರ ಅಂಕಿ-ಅಂಶಗಳ ಸಹಿತ ಸರ್ಕಾರಕ್ಕೆ ಮಾಹಿತಿ ನೀಡುವ ಉದ್ದೇಶದಿಂದ ಸಮೀಕ್ಷೆ ಮಾಡಲಾಗಿದೆ. ಜೂನ್‌ ಅಂತ್ಯದಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು. ಇದು ತಜ್ಞರಿಂದ ವಿಶ್ಲೇಷಿಸಲ್ಪಡುವ ವಸ್ತುನಿಷ್ಠ ವರದಿ. ರೈತರ ಪರ ಸರ್ಕಾರ ಯಾವ ಕೆಲಸ ಮಾಡಬೇಕು ಎಂಬುದಕ್ಕೆ ದಿಕ್ಸೂಚಿ ಆಗುವ ರೀತಿಯಲ್ಲಿ ವರದಿ ಸಿದ್ಧಪಡಿಸಲಾಗುತ್ತಿದೆ.
●ಪ್ರಕಾಶ ಕಮ್ಮರಡಿ, ಮೇಲುಸ್ತುವಾರಿ, ಸಮೀಕ್ಷಾ ತಂಡ ಹಾಗೂ ಮಾಜಿ ಅಧ್ಯಕ್ಷರು, ರಾಜ್ಯ ಕೃಷಿ ಬೆಲೆ ಆಯೋಗ

  • ಎಚ್‌.ಕೆ.ನಟರಾಜ

ಟಾಪ್ ನ್ಯೂಸ್

Desi Swara: ವಾರಾಣಸಿಯಲ್ಲಿನ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮನೆ

Desi Swara: ವಾರಾಣಸಿಯಲ್ಲಿನ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮನೆ

Maharashtra Assembly Elections: Congress released list of 23 candidates

Maharashtra Assembly Elections: 23 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

Desi Swara: ತಪ್ಪು ಮಾಡದವ್ರು ಯಾರವ್ರೆ, ತಪ್ಪೇ ಮಾಡದವ್ರು ಎಲ್ಲವ್ರೇ ?

Desi Swara: ತಪ್ಪು ಮಾಡದವ್ರು ಯಾರವ್ರೆ, ತಪ್ಪೇ ಮಾಡದವ್ರು ಎಲ್ಲವ್ರೇ ?

Sagarmala project: ವಿಜಯಪುರ-ಬಾಗಲಕೋಟೆಯ ಜಲಸಾರಿಗೆ ಯೋಜನಾ ಸ್ಥಳಗಳಿಗೆ ಅಧಿಕಾರಿಗಳ ಭೇಟಿ

Sagarmala project: ವಿಜಯಪುರ-ಬಾಗಲಕೋಟೆಯ ಜಲಸಾರಿಗೆ ಯೋಜನಾ ಸ್ಥಳಗಳಿಗೆ ಅಧಿಕಾರಿಗಳ ಭೇಟಿ

Wooden Block: ರೈಲು ಹಳಿ ಮೇಲೆ ಮರದ ದಿಮ್ಮಿ ಇಟ್ಟು ದುಷ್ಕೃತ್ಯ… ತಪ್ಪಿದ ದುರಂತ

Wooden Block: ರೈಲು ಹಳಿ ಮೇಲೆ ಮರದ ದಿಮ್ಮಿ ಇಟ್ಟು ದುಷ್ಕೃತ್ಯ… ತಪ್ಪಿದ ದುರಂತ

ಕದನಾವರಣ: ಆಕ್ರಮಣಕ್ಕೆ ಪ್ರತಿಕಾರ.. ಇರಾನ್ ಮತ್ತು ಸಿರಿಯಾ ಮೇಲೆ ದಾಳಿ ನಡೆಸಿದ ಇಸ್ರೇಲ್!

ಕದನಾವರಣ: ಆಕ್ರಮಣಕ್ಕೆ ಪ್ರತಿಕಾರ.. ಇರಾನ್ ಮತ್ತು ಸಿರಿಯಾ ಮೇಲೆ ದಾಳಿ ನಡೆಸಿದ ಇಸ್ರೇಲ್!

Desi Swara: ನ್ಯೂಯಾರ್ಕ್‌-“ಮಿಸ್‌ ಇಂಡಿಯಾ’ ಕಿರೀಟ ಗೆದ್ದ ಮೊದಲ ಕನ್ನಡತಿ ಜೀವಿಕಾ

Desi Swara: ನ್ಯೂಯಾರ್ಕ್‌-“ಮಿಸ್‌ ಇಂಡಿಯಾ’ ಕಿರೀಟ ಗೆದ್ದ ಮೊದಲ ಕನ್ನಡತಿ ಜೀವಿಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ

Karnataka: ಬೇಲೆಕೇರಿ ಅದಿರು; ಸತೀಶ್‌ ಸೈಲ್‌ ಸೇರಿ 7 ಮಂದಿಗೆ ಇಂದು ಶಿಕ್ಷೆ ಪ್ರಕಟ

Karnataka: ಬೇಲೆಕೇರಿ ಅದಿರು; ಸತೀಶ್‌ ಸೈಲ್‌ ಸೇರಿ 7 ಮಂದಿಗೆ ಇಂದು ಶಿಕ್ಷೆ ಪ್ರಕಟ

1-aa-nama

By election; 3 ಕ್ಷೇತ್ರ 83 ನಾಮಪತ್ರ

1-aaree

MUDA Case: ಸಿಎಂ ಸಿದ್ದರಾಮಯ್ಯ ಪತ್ನಿ 3 ತಾಸು ಲೋಕಾ ವಿಚಾರಣೆ

Agri

Rain ;ಹಿಂಗಾರು ಮಳೆಗೆ ರಾಜ್ಯದ 1 ಲಕ್ಷ ಹೆಕ್ಟೇರ್‌ ಬೆಳೆ ನಾಶ

MUST WATCH

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Desi Swara: ವಾರಾಣಸಿಯಲ್ಲಿನ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮನೆ

Desi Swara: ವಾರಾಣಸಿಯಲ್ಲಿನ ಲಾಲ್‌ ಬಹದ್ದೂರ್‌ ಶಾಸ್ತ್ರಿಯವರ ಮನೆ

Maharashtra Assembly Elections: Congress released list of 23 candidates

Maharashtra Assembly Elections: 23 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

Desi Swara: ತಪ್ಪು ಮಾಡದವ್ರು ಯಾರವ್ರೆ, ತಪ್ಪೇ ಮಾಡದವ್ರು ಎಲ್ಲವ್ರೇ ?

Desi Swara: ತಪ್ಪು ಮಾಡದವ್ರು ಯಾರವ್ರೆ, ತಪ್ಪೇ ಮಾಡದವ್ರು ಎಲ್ಲವ್ರೇ ?

mooka jeeva kannada movie review

Mooka Jeeva Review: ಮುಗ್ಧ ಮನಸ್ಸಿನ ಪ್ರತಿಬಿಂಬ

Sagarmala project: ವಿಜಯಪುರ-ಬಾಗಲಕೋಟೆಯ ಜಲಸಾರಿಗೆ ಯೋಜನಾ ಸ್ಥಳಗಳಿಗೆ ಅಧಿಕಾರಿಗಳ ಭೇಟಿ

Sagarmala project: ವಿಜಯಪುರ-ಬಾಗಲಕೋಟೆಯ ಜಲಸಾರಿಗೆ ಯೋಜನಾ ಸ್ಥಳಗಳಿಗೆ ಅಧಿಕಾರಿಗಳ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.