ಇಂದು ಪಿಯುಸಿ ಇಂಗ್ಲಿಷ್‌ ಪರೀಕ್ಷೆ; ವಿವಿಧ ತಾಲೂಕಿನಲ್ಲಿ ಸಿದ್ಧತೆ ಪೂರ್ಣ


Team Udayavani, Jun 18, 2020, 5:00 AM IST

ಇಂದು ಪಿಯುಸಿ ಇಂಗ್ಲಿಷ್‌ ಪರೀಕ್ಷೆ; ವಿವಿಧ ತಾಲೂಕಿನಲ್ಲಿ ಸಿದ್ಧತೆ ಪೂರ್ಣ

ಉಡುಪಿ/ ಕುಂದಾಪುರ: ದ್ವಿತೀಯ ಪಿಯುಸಿ ಇಂಗ್ಲಿಷ್‌ ಪರೀಕ್ಷೆ ಜೂ. 18ರಂದು ನಡೆಯಲಿದ್ದು, ಜಿಲ್ಲೆಯಲ್ಲಿ 27 ಪರೀಕ್ಷಾ  ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟು 13,563 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿ ರುತ್ತಾರೆ. 6,414 ಬಾಲಕರು, 7,149 ಬಾಲಕಿಯರು ಪರೀಕ್ಷೆ ಬರೆಯಲಿದ್ದಾರೆ. ವಿದ್ಯಾರ್ಥಿಗಳನ್ನು ಕೋವಿಡ್‌ ಸೋಂಕು ಲಕ್ಷಣಗಳನ್ನು ಪರೀಕ್ಷಿಸಿ ಪರೀಕ್ಷಾ ಕೇಂದ್ರದ ಒಳಗೆ ಬಿಡಬೇಕಾಗಿರುವುದರಿಂದ ವಿದ್ಯಾರ್ಥಿಗಳು ಕಡ್ಡಾಯವಾಗಿ ಬೆಳಗ್ಗೆ 9.00 ಗಂಟೆಗೆ ಪರೀಕ್ಷಾ ಕೇಂದ್ರದಲ್ಲಿ ಇರುವಂತೆ ಸೂಚಿಸಲಾಗಿದೆ.

ಜಿಲ್ಲೆಯಲ್ಲಿ ಒಟ್ಟು 69 ಮಾರ್ಗ ಗಳಲ್ಲಿ 91 ಕೆ.ಎಸ್‌.ಆರ್‌.ಟಿ. ಬಸ್‌ಗಳನ್ನು ಬಳಸಲಾಗುತ್ತಿದೆ. ಈ ಬಸ್‌ಗಳಲ್ಲಿ ಪ್ರತಿ ಮಾರ್ಗದಲ್ಲಿ ಓರ್ವ ಉಪನ್ಯಾಸಕ ಮಾರ್ಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಾರೆ. ಹಾಗೂ ಪ್ರತಿ ತಾಲೂಕಿನಲ್ಲಿ 04 ಜನ ಪ್ರಾಂಶುಪಾಲರು ನೋಡಲ್‌ ಅಧಿಕಾರಿಗಳಾಗಿ ಬಸ್‌ ವ್ಯವಸ್ಥೆ ನೋಡಿಕೊಳ್ಳಲಿದ್ದಾರೆ. ಕುಗ್ರಾಮ ಹಾಗೂ ದೂರದ ಪ್ರದೇಶಗಳಿಂದ ಪರೀಕ್ಷಾ ಕೇಂದ್ರಗಳಿಗೆ ಬರುತ್ತಿರುವ ವಿದ್ಯಾರ್ಥಿ ಗಳಿಗೆ ಬಸ್‌ ಸೌಕರ್ಯ ಸಾಧ್ಯವಾಗದಿದ್ದರೆ ಅಥವಾ ಬಸ್‌ ತಪ್ಪಿದರೆ ಅಂತಹ ವಿದ್ಯಾರ್ಥಿಗಳನ್ನು ಸರಕಾರಿ ವಾಹನದಲ್ಲಿ ಕರೆದುಕೊಂಡು ಬರಲು ಎಲ್ಲ ತಾ|ಗಳಲ್ಲಿ ಸರಕಾರಿ ಕಚೇರಿಯ ವಾಹನಗಳನ್ನು ಬಳಸಿಕೊಳ್ಳಲಾಗುತ್ತದೆ.

ಕುಂದಾಪುರ ಕೆಎಸ್‌ಆರ್‌ಟಿಸಿ ಡಿಪೋದಿಂದ ಪರೀಕ್ಷಾ ಕೇಂದ್ರಗಳಿಗೆ ಬರಲು ವಿದ್ಯಾರ್ಥಿಗಳಿಗೆ 45 ವಿಶೇಷ ಬಸ್‌ಗಳನ್ನು ಉಚಿತವಾಗಿ ವ್ಯವಸ್ಥೆ ಮಾಡ ಲಾಗಿದೆ. ಪ.ಪೂ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಆಯಾಯ ಪ.ಪೂ. ಕಾಲೇಜಿನ ಮುಖಾಂತರ ಪ್ರತಿಯೊಬ್ಬ ವಿದ್ಯಾರ್ಥಿಗಳನ್ನು ಸಂಪರ್ಕಿಸಿದ್ದು, ಸ್ವಂತ, ಖಾಸಗಿ ವಾಹನದಲ್ಲಿ ಬರುವ ವಿದ್ಯಾರ್ಥಿಗಳು ಹೊರತುಪಡಿಸಿ, ಬಾಕಿ ಅವಶ್ಯವಿರುವ ಉಳಿದ ಎಲ್ಲರಿಗೂ ಬಸ್‌ ವ್ಯವಸ್ಥೆ ಮಾಡಲಾಗಿದೆ.

ಹೊರ ಜಿಲ್ಲೆಗಳಿಂದ ಉಡುಪಿ ಜಿಲ್ಲೆಗೆ ಆಗಮಿಸುವ ವಿದ್ಯಾರ್ಥಿಗಳ ಸಂಖ್ಯೆ 163 ಆಗಿದ್ದು, ಉಡುಪಿ ಜಿಲ್ಲೆಯಿಂದ ಹೊರ ಜಿಲ್ಲೆಗೆ ಹೋಗುವ ವಿದ್ಯಾರ್ಥಿಗಳ ಸಂಖ್ಯೆ 1344 ಇರುತ್ತದೆ.

ಯಾವೆಲ್ಲ ರೂಟ್‌ಗಳು?
ಕುಂದಾಪುರ – ಬೈಂದೂರು, ಗೋಳಿಹೊಳೆ – ಕುಂದಾಪುರ, ಉಪ್ಪುಂದ – ನಾವುಂದ, ಗೋಳಿಯಂಗಡಿ- ಬಾರ್ಕೂರು, ಭಟ್ಕಳ- ಬೈಂದೂರು, ಕೊಲ್ಲೂರು – ವಂಡ್ಸೆ, ಹೊಸಂಗಡಿ – ಬಿದ್ಕಲ್‌ಕಟ್ಟೆ, ಹಳ್ಳಿಹೊಳೆ – ಬಿದ್ಕಲ್‌ಕಟ್ಟೆ, ಶೇಡಿಮನೆ- ಬಿದ್ಕಲ್‌ಕಟ್ಟೆ, ಬೇಳೂರು – ಕೋಟೇಶ್ವರ, ಕೊಲ್ಲೂರು – ಕುಂದಾಪುರ, ಕುಂದಾಪುರ – ಬ್ರಹ್ಮಾವರ, ಸಿದ್ದಾಪುರ – ಬ್ರಹ್ಮಾವರ, ಕುಂದಾಪುರ- ಉಡುಪಿ, ಗಂಗೊಳ್ಳಿ – ಕುಂದಾಪುರ ಮಾರ್ಗದಲ್ಲಿ ಬಸ್‌ಗಳು ಸಂಚರಿಸಲಿವೆ.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

ಮಲ್ಪೆ ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವತ್ಛತೆ

Malpe ಸೈಂಟ್‌ಮೇರೀಸ್‌ ದ್ವೀಪದಲ್ಲಿ ಸ್ವಚ್ಛತೆ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

Udupi: ಜಿಲ್ಲಾ ಕ್ರೀಡಾಂಗಣದ ಸಿಂಥೆಟಿಕ್‌ ಟ್ರ್ಯಾಕ್‌ಗೆ ಹಾನಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.