ಎಸಿಪಿ ವಿರುದ್ಧ ಎಫ್ಐಆರ್ಗಳಿಗೆ 23ರವರೆಗೆ ತಡೆಯಾಜ್ಞೆ ವಿಸ್ತರಣೆ
Team Udayavani, Jun 18, 2020, 5:32 AM IST
ಬೆಂಗಳೂರು: ಸಿಗರೇಟ್ ವ್ಯಾಪಾರಿಗಳಿಂದ ಹಣ ಸುಲಿಗೆ ಆರೋಪ ಸಂಬಂಧ ಎಸಿಪಿಯಾಗಿದ್ದ ಪ್ರಭು ಶಂಕರ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಖಲಿಸಿರುವ ಪ್ರತ್ಯೇಕ 3 ಎಫ್ಐಆರ್ಗಳಿಗೆ ನೀಡಲಾಗಿರುವ ತಡೆಯಾಜ್ಞೆಯನ್ನು ಹೈಕೋರ್ಟ್ ಜೂ.23ರವರೆಗೂ ವಿಸ್ತರಿಸಿದೆ.
ಎಸಿಬಿ ತಮ್ಮ ವಿರುದ್ಧ ದಾಖಲಿಸಿರುವ 3ಪ್ರತ್ಯೇಕಎಫ್ಐಆರ್ ರದ್ದುಪಡಿಸುವಂತೆ ಕೋರಿ ಪ್ರಭು ಶಂಕರ್ ಸಲ್ಲಿಸಿದ ಕ್ರಿಮಿನಲ್ ಅರ್ಜಿಗಳು ನ್ಯಾ.ಎಚ್.ಪಿ.ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದಿತ್ತು. ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕೆಂದು ಸರ್ಕಾರದ ಪರ ವಕೀಲರು ಮಾಡಿದ ಮನವಿ ಪರಿಗಣಿಸಿದ ನ್ಯಾಯಪೀಠ ವಿಚಾರಣೆ ಜೂ.23ಕ್ಕೆ ಮುಂದೂಡಿತು.
ಜತೆಗೆ, ಅರ್ಜಿ ದಾರರ ವಿರುದ್ಧ ಎಸಿಬಿ ದಾಖಲಿಸಿರುವ 3 ಎಫ್ಐಆರ್ಗಳಿಗೆ ಈ ಹಿಂದೆ ನೀಡಲಾಗಿರುವ ತಡೆಯಾಜ್ಞೆಯನ್ನು ಮುಂದಿನ ವಿಚಾರಣೆವರೆಗೂ ವಿಸ್ತರಿಸಿತು. ಈ ಸಂಬಂಧ ಕಾಟನ್ಪೇಟೆ ಪೊಲೀ ಸರು ದಾಖಲಿಸಿ ರುವ ಪ್ರತ್ಯೇಕ 2 ಎಫ್ ಐಆರ್ಗಳಿಗೆ ನೀಡಿರುವ ತಡೆಯಾಜ್ಞೆ ಜೂ.23ರವರೆಗೆ ವಿಸ್ತರಿಸಿ ಹೈಕೋರ್ಟ್ ಮಂಗಳವಾರ (ಜೂ.16) ಆದೇಶಿಸಿದೆ. ಲಾಕ್ಡೌನ್ ವೇಳೆ ಅಕ್ರಮವಾಗಿ ಸಿಗರೇ ಟ್ ಮಾರಾಟಕ್ಕೆ ನೆರವು ನೀಡುವು ದಾಗಿ ತಿಳಿಸಿ ವ್ಯಾಪಾರಿಗಳಿಂದ 62.5 ಲಕ್ಷ ರೂ. ಲಂಚ ಸ್ವೀಕಾರ ಆರೋಪದ ಮೇಲೆ ಕಾಟ ನ್ಪೇಟೆ ಪೊಲೀಸರು, ಎಸಿಬಿ ಪೊಲೀಸರು ಎಫ್ಐಆರ್ ದಾಖಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!
Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ
Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?
Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ನಾಲ್ವರ ಬಂಧನ
Bengaluru: ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ 6ರ ಹೆಣ್ಣು ಮಗು ಮೃತದೇಹ ಪತ್ತೆ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.